8th Pay Commission; ಕೇಂದ್ರ ಸರ್ಕಾರಿ ನೌಕರರ ವೇತನ ಎಷ್ಟು ಏರಿಕೆ?
ಬೆಂಗಳೂರು, ಜೂನ್ 10: ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿ ದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಿದೆ. ಭಾನುವಾರ ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಹೊಸ ಸರ್ಕಾರದ ಮೇಲೆ ಜನರಿಗೆ, ಕೇಂದ್ರ ಸರ್ಕಾರಿ ನೌಕರರಿಗೆ ಅಪಾರವಾದ ನಿರೀಕ್ಷೆ ಇದೆ. ಜುಲೈ ತಿಂಗಳಿನಲ್ಲಿ ಹೊಸ ಸರ್ಕಾರ ಬಜೆಟ್ ಮಂಡನೆ ಮಾಡಲಿದೆ. ಕೇಂದ್ರ ಹಣಕಾಸು ಖಾತೆ ಯಾರಿಗೆ? ಎಂಬುದು ಇನ್ನೂ ಅಂತಿಮವಾಗಿಲ್ಲ. ಹೊಸ ಸರ್ಕಾರ ಮಂಡಿಸುವ ಬಜೆಟ್ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ 8ನೇ ವೇತನ ಆಯೋಗ ರಚನೆಯ ಘೋಷಣೆಯ ನಿರೀಕ್ಷೆ ಇದೆ.

ಪ್ರತಿ 10 ವರ್ಷಗಳಿಗೊಮ್ಮೆ ಕೇಂದ್ರ ಸರ್ಕಾರ ವೇತನ ಆಯೋಗ ರಚನೆ ಮಾಡಿ, ಅದರ ವರದಿ ಪಡೆದು ಅನುಷ್ಠಾನ ಮಾಡಲಾಗುತ್ತದೆ. 2016ರ ಜನವರಿಯಲ್ಲಿ 7ನೇ ವೇತನ ಆಯೋಗ ವರದಿ ನೀಡಿತ್ತು. ಇದರ ಅನ್ವಯ 2026ರ ಜನವರಿಗೆ 8ನೇ ವೇತನ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿ, ಅನುಷ್ಠಾನಗೊಳ್ಳಬೇಕಿದೆ.
ಸರ್ಕಾರದ ನಿಲುವು ಏನು?: 8ನೇ ವೇತನ ಆಯೋಗ ರಚನೆ ಮಾಡುವ ಕುರಿತು ಸರ್ಕಾರ ಇನ್ನೂ ಯಾವುದೇ ತೀರ್ಮಾನವನ್ನು ಪ್ರಕಟಿಸಿಲ್ಲ. ಎನ್ಡಿಎ ಸರ್ಕಾರ 2.0 2023ರ ಡಿಸೆಂಬರ್ನಲ್ಲಿ ಈಗ 8ನೇ ವೇತನ ಆಯೋಗ ರಚನೆ ಮಾಡುವ ಪ್ರಸ್ತಾಪವಿಲ್ಲ ಎಂದು ಹೇಳಿತ್ತು. ಆದರೆ ಈಗ ಚುನಾವಣೆ ಮುಗಿದು ಎನ್ಡಿಎ 3.0 ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಯಾವ ನಿಲುವು ಕೈಗೊಳ್ಳಲಾಗುತ್ತದೆ? ಎಂದು ಕಾದು ನೋಡಬೇಕಿದೆ.
ಒಮ್ಮೆ ಸರ್ಕಾರ ವೇತನ ಆಯೋಗ ರಚನೆ ಮಾಡುವ ತೀರ್ಮಾನ ಮಾಡಿದರೆ ಅದು ವೇತನ, ಭತ್ಯೆ, ಪಿಂಚಣಿ ಮುಂತಾದವುಗಳನ್ನು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲು ಸುಮಾರು 12 ರಿಂದ ದ18 ತಿಂಗಳ ಅವಧಿಯನ್ನು ತೆಗೆದುಕೊಳ್ಳಲಿದೆ. ಇನ್ನೂ ದೇಶದಲ್ಲಿ 5 ವರ್ಷ ಲೋಕಸಭೆ ಚುನಾವಣೆ ಇಲ್ಲ. ಆದ್ದರಿಂದ ಹೊಸ ಸರ್ಕಾರ 8ನೇ ವೇತನ ಆಯೋಗ ಯಾವಾಗ ರಚಿಸಲಿದೆ? ಎಂಬುದು ಪ್ರಶ್ನೆ.
8ನೇ ವೇತನ ಆಯೋಗ ರಚನೆಯಾಗಿ ಅದರ ಶಿಫಾರಸು ಜಾರಿಯಾದರೆ ಸುಮಾರು 49 ಲಕ್ಷ ಸರ್ಕಾರಿ ನೌಕರರು, 68 ಲಕ್ಷ ಪಿಂಚಣಿದಾರರಿಗೆ ಸಹಾಯಕವಾಗಲಿದೆ. ವೇತನ, ಭತ್ಯೆಗಳು ಹೆಚ್ಚಾಗಲಿವೆ. 8ನೇ ವೇತನ ಆಯೋಗದ ಶಿಫಾರಸು ಅನ್ವಯ ಫಿಟ್ಮೆಂಟ್ ಸೌಲಭ್ಯಗಳು ಸೇರಿ ಕೇಂದ್ರ ಸರ್ಕಾರ ನೌಕರರ ಮೂಲ ವೇತನ 8 ರಿಂದ 26 ಸಾವಿರ ರೂ. ತನಕ ಏರಿಕೆಯಾಗುವ ನಿರೀಕ್ಷೆ ಇದೆ.
7ನೇ ವೇತನ ಆಯೋಗ ಕೇಂದ್ರ ಸರ್ಕಾರಿ ನೌಕರರಿಗೆ 2.57ರಷ್ಟು ಫಿಟ್ಮೆಂಟ್ ಸೌಲಭ್ಯದ ಶಿಫಾರಸು ಮಾಡಿತ್ತು. ಬಳಿಕ ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ 18,0000 ರೂ.ಗಳಿಗೆ ಏರಿಕೆಯಾಗಿತ್ತು. 8ನೇ ವೇತನ ಆಯೋಗದ ಶಿಫಾರಸು ಜಾರಿಗೆ ಬಂದರೆ ವೇತನದ ಜೊತೆ ವಿವಿಧ ಭತ್ಯೆಗಳು, ಪಿಂಚಣಿ ವ್ಯವಸ್ಥೆಯಲ್ಲಿ ಸಹ ಬದಲಾವಣೆಯಾಗಲಿದೆ.
ಬದಲಾಗುತ್ತಿರುವ ಜೀವನ ಶೈಲಿಗೆ ಅನುಗುಣವಾಗಿ ವೇತನವೂ ಏರಿಕೆಯಾಗಬೇಕಿದೆ. 8ನೇ ವೇತನ ಆಯೋಗ ರಚನೆಯಾಗಿ ಅದರ ವರದಿ ಅನುಷ್ಠಾನವಾಗಬೇಕು ಎಂದು ಸರ್ಕಾರಿ ನೌಕರರ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಕೇಂದ್ರದ ಹೊಸ ಸರ್ಕಾರ ಬಜೆಟ್ನಲ್ಲಿ ಈ ಕುರಿತು ಘೋಷಣೆ ಮಾಡಲಿದೆಯೇ? ಕಾದು ನೋಡಬೇಕಿದೆ.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications