Government Employees: ಕೇಂದ್ರದಿಂದ 8ನೇ ವೇತನ ಆಯೋಗ ಪರಿಶೀಲನೆ
ನವದೆಹಲಿ, ಮೇ 08: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 08ನೇ ವೇತನ ಆಯೋಗದ ಶೀಘ್ರವೇ ಜಾರಿಗೆ ಕಾತರರಿಂದ ಕಾಯುತ್ತಿದ್ದಾರೆ. ಈ ಮಧ್ಯೆ IRTSA ಆಯೋಗಕ್ಕೆ ಸಂಬಂಧಿಸಿದಂತೆ ಪತ್ರ ಬರೆದು ಒಂದಷ್ಟು ಶಿಫಾರಸುಗಳನ್ನು ಮುಂದಿಟ್ಟಿತ್ತು. ಇದರ ಬೆನ್ನಲ್ಲೆ ಕೇಂದ್ರ ಸರ್ಕಾರದಿಂದ ಪರಿಶೀಲನೆಯ ಅಪ್ಡೇಟ್ ಮಾಹಿತಿ ಸಿಕ್ಕಿದೆ.
8ವೇತನ ಆಯೋಗದ ನವೀಕರಣ ಸುದ್ದಿಗೆ ಕಾಯುತ್ತಿರುವ ಅಪಾರ ಸಂಖ್ಯೆಯ ಸರ್ಕಾರಿ ನೌಕರರಿಗೆ ಈ ಮಾಹಿತಿ ಉಪಯುಕ್ತವಾಗಿದೆ. ವೇತನ ಆಯೋಗ ಜಾರಿ ಸಂಬಂಧಿಸಂತೆ ಕೇಂದ್ರ ಸರ್ಕಾರದ ಮುಂದೆ ಔಪಚಾರಿಕ ಪಸ್ತಾವನೆ ಬಂದಿದೆ. ಆದಷ್ಟು ಶೀಘ್ರವೇ ಕೇಂದ್ರ ಸರ್ಕಾರ ಪ್ರಸ್ತಾವವನ್ನು ಪರಿಶೀಲನೆಗೆ ಒಳಪಡಿಸಿ ಸಿಹಿ ಸುದ್ದಿ ನೀಡಲಿದೆ.

ಕೇಂದ್ರ ಸರ್ಕಾರವು ಹೊಸ ವೇತನ ಆಯೋಗವನ್ನು ಶೀಘ್ರವೇ ಜಾರಿ ಮಾಡುವಂತೆ ಆಗ್ರಹಿಸಿ ಭಾರತೀಯ ರೈಲ್ವೆ ತಾಂತ್ರಿಕ ಮೇಲ್ವಿಚಾರಕರ ಸಂಘ (IRTSA) ದ ಸದಸ್ಯರು ಆಯೋಗ ಸೌಲಭ್ಯ, ನೌಕರರಿಗೆ ತಲುಪುವಲ್ಲಿ ಉಂಟಾಗುತ್ತಿರುವ ಸಮಸ್ಯೆ, ಕುಂದುಕೊರತೆಗಳು, ಸರಳವಾಗಿ ಪರಿಹರಿಸುವ ನಿಟ್ಟಿನಲ್ಲಿ ಏನೆಲ್ಲ ಮಾಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದರು.
ಕೇಂದ್ರ ಸರ್ಕಾರವು ಏಳನೇ ವೇತನ ಆಯೋಗದಲ್ಲಿ ಉಂಟಾದ ಕೆಲವು ಗೊಂದಲ, ವೇತನ ಸಮಸ್ಯೆ ಇಲ್ಲಿ ನಿರ್ಮಾಣವಾಗದಂತೆ ನೋಡಿಕೊಳ್ಳಬೇಕು ಎಂದೆಲ್ಲ ಹಲವು ಶಿಫಾರಸುಗಳನ್ನು ಮಾಡಿದ್ದಾರೆ. ಭವಿಷ್ಯದಲ್ಲಿ ಯಾವುದೇ ದೋಷವಿಲ್ಲದ ವ್ಯವಸ್ಥೆ ಜಾರಿಗೆ ಬರಬೇಕು ಎಂಬ ಅವರು ಆಶಯ ವ್ಯಕ್ತಪಡಿಸಿದ್ದರು.
10 ವರ್ಷದ ಅವಧಿಗೆ ಆಯೋಗ ರಚನೆ
8ನೇ ವೇತನ ಆಯೋಗವನ್ನು ಕೇಂದ್ರ ಸರ್ಕಾರ ಹತ್ತು ವರ್ಷಗಳ ಅವಧಿಗೆ ಜಾರಿ ಮಾಡಲಿದೆ. ಸದ್ಯ ಏಳನೇ ವೇತನ ಆಯೋಗ ಜಾರಿ ಇದ್ದು, ಇದರಿಂದ ಸಿಗುವ ಕೊನೆಯ ಸೌಲಭ್ಯಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಘೋಷಿಸಿದೆ. ತುಟ್ಟಿಭತ್ಯೆ (DA hike), ತುಟ್ಟಿ ಪರಿಹಾರ (DR hike) ಸೇರಿದಂತೆ ಕೆಲವು ಸೌಲಭ್ಯಗಳು ಕಳೆದ ಜನವರಿಗೆ 1ರಿಂದ ಜಾರಿಗೆ ಬರುವಂತೆ ಅನುಮೋದಿಸಿದೆ.

ಮುಂದಿನ ದಿನಗಳಲ್ಲಿ ಹೊಸ ವೇತನ ಆಯೋಗ ಜಾರಿಗೆ ಬರಬೇಕಿದೆ. ಇದನ್ನು ಶೀಘ್ರವೇ ಜಾರಿ ಮಾಡಬೇಕು. ಹಳೆಯ ಆಯೋಗದಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಬೇಕು. ನೌಕರರಿಗೆ ಇರುವ ಹಾಲಿ ಸಮಸ್ಯೆ ಕೊನೆಗಾಣಿಸಬೇಕು. ಉದ್ಯೋಗ ಬಡ್ತಿ, ವರ್ಗಾವಣೆ, ವೇತನ, ಭತ್ಯೆ ವಿಚಾರಗಳಲ್ಲಿ ಸಮಸ್ಯೆ ಮುಂದೆ ಆಗದಂತೆ ಮಾಡಬೇಕು.
ಎಂಟನೇ ವೇತನ ಆಯೋಗದ ಜಾರಿಗೆ ಇನ್ನೂ ಅಧಿಕ ಸಮಯ ಇದೆ. ಸಮಸ್ಯೆಗಳ ಪರಿಹರಕ್ಕಾಗಿ ಈ ಸಮಯವನ್ನು ಬಳಸಿಕೊಳ್ಳಬೇಕು ಎಂದು IRTSA ಸದಸ್ಯರು ಮನವಿ ಮಾಡಿದ್ದಾರೆ.
HRA ಹೆಚ್ಚಳ ಬಗ್ಗೆ ಕೇಂದ್ರ ಮೌನ
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗಕ್ಕೆ ಸೌಲಭ್ಯಗಳಾದ ತುಟ್ಟಿಭತ್ಯೆಯನ್ನು ಶೇ.50ಕ್ಕೆ ಹೆಚ್ಚಿಸಿ ಅನುಮೋದಿಸಿತು. ಇದರಲ್ಲಿ ಸಮಸ್ಯೆ ಇಲ್ಲದಿದ್ದರೂ, ಮನೆ ಬಾಡಿಗೆ ಭತ್ಯೆ (ಎಚ್ಆರ್ಎ) ಹೆಚ್ಚಳ ಕುರಿತು ಕೆಲವು ಸಮಸ್ಯೆಗಳಿವೆ ಎಂದು ನೌಕರರು ಹೇಳಿತ್ತಿದ್ದಾರೆ.
ನಿಯಮಗಳ ಪ್ರಕಾರ ಡಿಎ ಜತೆ ಎಚ್ಆರ್ಎ ಏರಿಕೆ ಆಗಬೇಕು. ಆದರೆ ಈ ಬಗ್ಗೆ ಕೇಂದ್ರ ಮೌನವಾಗಿರುವುದು ನೌಕರರ ಆತಂಕಕ್ಕೆ ಕಾರಣವಾಗಿದೆ. ಹೊಸ ಆಯೋಗದಿಂದ ಈ ರೀತಿ ಆಗದಂತೆ ನಿಯಮ ರೂಪಿಸಬೇಕು ಎಂದು ಕೋರಿದ್ದಾರೆ.
ಸದ್ಯ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯು ಶೇಕಡಾ 4ರಷ್ಟು ಏರಿಕೆ ಮಾಡಲಾಗಿದೆ. ಇದರಿಂದ ನೌಕರರ ತುಟ್ಟಿ ಭತ್ಯೆ (ಡಿಆರ್) ಶೇಕಡಾ 50ರಷ್ಟು ಏರಿಕೆ ಆಗಿದೆ. ಪ್ರತಿ ಆರು ತಿಂಗಳಿಗೊಮ್ಮೆ ಕೇಂದ್ರವು ಈ ಡಿಎ ಹೆಚ್ಚಳ ಘೋಷಣೆ ಮಾಡುತ್ತದೆ. ಈ ಬಾರಿ ಮಾಡಿರುವ ತುಟ್ಟಿಭತ್ಯೆಯು ಕಳೆದ ಜನವರಿಯಿಂದ ಅನ್ವಯವಾಗುವಂತೆ ಜಾರಿ ಆಗಿದೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications