ತ್ರಿವಳಿ ತಲಾಖ್ ಬಗ್ಗೆ ಸುಪ್ರೀಂ ತೀರ್ಪಿನ 9 ಪ್ರಮುಖ ಅಂಶಗಳು
ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವು ಮಂಗಳವಾರ ತ್ರಿವಳಿ ತಲಾಖ್ ಗೆ ಬಗ್ಗೆ ನೀಡಿದ ಪ್ರಮುಖ ತೀರ್ಪು ಬಂದಿದ್ದು ಹೇಗೆ ಗೊತ್ತಾ? ಮೂರು-ಎರಡರ ಬಹುಮತದಲ್ಲಿ ತ್ರಿವಳಿ ತಲಾಖ್ ಬಗ್ಗೆ ನ್ಯಾಯಮೂರ್ತಿಗಳು ಪ್ರಸ್ತಾವಿಸಿದ ಪ್ರಮುಖ ಅಂಶಗಳೇನು ಗೊತ್ತಾ?
ಅಂಥ ಒಂಬತ್ತು ಪ್ರಮುಖ ಅಂಶಗಳು ಇಲ್ಲಿವೆ
1.ಐವರು ನ್ಯಾಯಮೂರ್ತಿಗಳ ತೀರ್ಪು ಪ್ರತ್ಯೇಕವಾಗಿ ಓದಿದ ನಂತರ ಮೂರು-ಎರಡರ ಬಹುಮತದಲ್ಲಿ ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರ ಹಾಗೂ ಅಮಾನ್ಯಗೊಳಿಸಲಾಯಿತು.

2. ಮುಖ್ಯನ್ಯಾಯಮೂರ್ತಿ ಜೆ.ಎಸ್.ಖೇಹರ್ ಮತ್ತು ನ್ಯಾ.ನಜೀರ್ ತ್ರಿವಳಿ ತಲಾಖ್ ಅನ್ನು ಮೂಲಭೂತ ಹಕ್ಕು ಎಂದಿದ್ದರೆ, ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಆರ್.ಎಫ್.ನಾರಿಮನ್ ಮತ್ತು ಯು.ಯು.ಲಲಿತ್ ಇದು ಮೂಲಭೂತ ಹಕ್ಕಲ್ಲ ಎಂದಿದ್ದಾರೆ.
3. ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಆರ್.ಎಫ್.ನಾರಿಮನ್ ಮತ್ತು ಯು.ಯು.ಲಲಿತ್ ತ್ರಿವಳಿ ತಲಾಖ್ ಅನ್ನು ಅಸಾಂವಿಧಾನಿಕ ಎಂದಿದ್ದಾರೆ.
4. ಮುಸ್ಲಿಮ್ ಪುರುಷರು ತ್ರಿವಳಿ ತಲಾಖ್ ಮೂಲಕ ನೀಡುವ ತಕ್ಷಣದ ವಿಚ್ಛೇದನಕ್ಕೆ ಸುಪ್ರೀಂ ಕೋರ್ಟ್ ಆರು ತಿಂಗಳ ತಡೆ ನೀಡಿದೆ.
5. ಇನ್ನು ಆರು ತಿಂಗಳಲ್ಲಿ ತ್ರಿವಳಿ ತಲಾಖ್ ವಿಚಾರವಾಗಿ ಹೊಸ ಕಾನೂನು ರಚಿಸುವಂತೆ ಸುಪ್ರೀಂ ಕೋರ್ಟ್ ನಿಂದ ಸಂಸತ್ ಗೆ ಕೇಳಲಾಗಿದೆ.
6. ಒಂದು ವೇಳೆ ಆರು ತಿಂಗಳಲ್ಲಿ ಕಾನೂನು ರಚನೆ ಆಗದಿದ್ದಲ್ಲಿ ಸುಪ್ರೀಂ ಕೋರ್ಟ್ ನಿಂದ ಸದ್ಯಕ್ಕೆ ತ್ರಿವಳಿ ತಲಾಖ್ ಗೆ ನೀಡಿರುವ ತಾತ್ಕಾಲಿಕ ತಡೆ ಮುಂದುವರಿಯಲಿದೆ.
7.ಇಸ್ಲಾಮಿಕ್ ರಾಷ್ಟ್ರಗಳಲ್ಲೇ ತ್ರಿವಳಿ ತಲಾಖ್ ತೆಗೆದುಹಾಕಲಾಗಿದೆ ಎಂಬ ಅಂಶದ ಬಗ್ಗೆ ಪ್ರಸ್ತಾವಿಸಿದ ಸುಪ್ರೀಂ ಕೋರ್ಟ್, ಸ್ವತಂತ್ರ ಭಾರತದಲ್ಲಿ ಏಕೆ ಇದರಿಂದ ಹೊರಬರಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿತು.
8.ದಿಢೀರ್ ಅಂತ ಮದುವೆಯನ್ನು ರದ್ದು ಪಡಿಸುವ ತ್ರಿವಳಿ ತಲಾಖ್ ಮುಸ್ಲಿಮ್ ಮಹಿಳೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
9. ಶಾಸ್ತ್ರಗಳ ಪ್ರಕಾರ ನಿಜವಲ್ಲದ ಪದ್ಧತಿಯನ್ನು ಕೋರ್ಟ್ ಕೂಡ ರಕ್ಷಿಸುವುದಕ್ಕೆ ಸಾಧ್ಯವಿಲ್ಲ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications