Covid-19: ಭಾರತದಲ್ಲಿ ಮತ್ತೆ ಕೊರೊನಾ, ಅತಿವೇಗವಾಗಿ ಹರಡುತ್ತೆ ಈ ವೈರಸ್
ನವದೆಹಲಿ, ಮೇ 13: ಭಾರತದಲ್ಲಿ ಮತ್ತೆ ಕೊರೊನಾ ಆತಂಕ ಆರಂಭವಾಗಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರಪಂಚಾದ್ಯಂತ ತನ್ನ ಕಬಂಧ ಬಾಹು ಚಾಚಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಕೊರೊನಾ ಇದೀಗ ಮತ್ತೆ ಭಾರತದಲ್ಲಿ ಹರಡಲು ಆರಂಭಿಸಿದೆ. ಕೊರೊನಾ ರೂಪಾಂತರ ತಳಿ ವೈರಸ್ಗಳು ಬಹಳ ವೇಗವಾಗಿ ಹರಡುತ್ತಿದೆ ಎಂದು ವರದಿಯಾಗಿದೆ.
ವಿದೇಶಗಳಲ್ಲಿ ಈಗಲೂ ಕೊರೊನಾ ಹಾವಳಿ ಇದ್ದು, ಭಾರತ ಬಹುತೇಕ ಕೊರೊನಾ ಮುಕ್ತ ದೇಶವಾಗಿತ್ತು. ಇದೀಗ ಮತ್ತೆ ವೈರಸ್ ಹರಡುತ್ತಿದ್ದು, ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಓಮಿಕ್ರಾನ್ನ ಮತ್ತೊಂದು ತಳಿಯ ವೈರಸ್ ಹರಡುತ್ತಿದ್ದು, ಈ ವೈರಸ್ ಅಮೆರಿಕದಲ್ಲಿ ಅತಿ ವೇಗವಾಗಿ ಹರಡುತ್ತಿದೆ ಎನ್ನುವ ಮಾಹಿತಿ ಇದೆ.

ಜನವರಿಯಲ್ಲಿ ಈ ಹೊಸ ವೈರಸ್ ಅಮೆರಿಕದಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. ಇದೀಗ ಮಹಾರಾಷ್ಟ್ರದಲ್ಲಿಯೂ ಹರಡುತ್ತಿದ್ದು, ಈಗಾಗಲೇ ಬರೋಬ್ಬರಿ 91 ಪ್ರಕರಣಗಳು ದಾಖಲಾಗಿದೆ. ಪುಣೆಯಲ್ಲಿ 51 ಪ್ರಕರಣ, ಥಾಣೆಯಲ್ಲಿ 20 ಪ್ರಕರಣಗಳ, ಔರಂಗಾಬಾದ್, ಅಮರಾವತಿಯಲ್ಲಿ 7 ಪ್ರಕರಣಗಳು ಪತ್ತೆಯಾಗಿದ್ದರೆ, ಸೋಲಾಪುರದಲ್ಲಿ 2 ಪ್ರಕರಣ, ಅಹಮ್ಮದ್ನಗರ, ನಾಸಿಕ್, ಲಾತೂರ್ ಹಾಗೂ ಸಾಂಗ್ಲಿಯಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಕೊರೊನಾ ಹೊಸ ವೈರಸ್ ಓಮಿಕ್ರಾನ್ ಸಬ್ವೇರಿಯಂಟ್ ಕೆ.ಪಿ-೨( KP.2) ಅತೀ ವೇಗವಾಗಿ ಹರಡುತ್ತಿದ್ದು, ಹಿಂದಿನ ವೈರಸ್ಗಿಂತ ಇದು ಶಕ್ತಿಶಾಲಿಯಾಗಿದೆ. ಆದರೆ ಮನುಷ್ಯನ ದೇಹದ ಮೇಲೆ ಇದರ ಪರಿಣಾಮ ಕಡಿಮೆ ಇದ್ದು, ಸೋಂಕಿಗೊಳಗಾದವರು ಆಸ್ಪತ್ರೆಗೆ ದಾಖಲಾಗುತ್ತಿರುವ ಪ್ರಮಾಣ ಕಡಿಮೆ ಇದೆ ಎನ್ನಲಾಗಿದೆ.
-
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna












Click it and Unblock the Notifications