ಭಾರತದಲ್ಲಿ ಕೊರೊನಾ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಡಬಲ್!
ನವದೆಹಲಿ, ಫೆಬ್ರವರಿ.12: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 9309 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನ 87 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,55,447ಕ್ಕೆ ಏರಿಕೆಯಾಗಿದೆ. ಹೊಸ ಸೋಂಕಿತ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಕಳೆದ ಒಂದು ದಿನದಲ್ಲಿ 15,858 ಜನರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,80,603ಕ್ಕೆ ಏರಿಕೆಯಾಗಿದೆ. 1,05,89,230 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,35,926 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

75,05,010 ಜನರಿಗೆ ಕೊರೊನಾವೈರಸ್ ಲಸಿಕೆ:
ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನವನ್ನು ಸಹ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 75,05,010 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications