Nipah Virus: ಕೇರಳದಲ್ಲಿ ನಿಫಾ ವೈರಸ್ಗೆ 14 ವರ್ಷದ ಬಾಲಕ ಬಲಿ
ತಿರುವನಂತಪುರಂ, ಜುಲೈ. 21: ಕೇರಳದಲ್ಲಿ ನಿನ್ನೆಯಷ್ಟೇ ನಿಫಾ ವೈರಸ್ ಪತ್ತೆಯಾಗಿತ್ತು. ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕ ನಿಫಾ ವೈರಸ್ ಪಾಸಿಟಿವ್ ಆಗಿದ್ದರು. ಇದಾದ ಒಂದು ದಿನದ ಬಳಿಕ, ಭಾನುವಾರ ಕೋಝಿಕ್ಕೋಡ್ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬಾಲಕ ಸಾವನ್ನಪ್ಪಿದ್ದಾರೆ.
ನಿಫಾ ವೈರಸ್ ಇರುವುದು ಪತ್ತೆಯಾದ ಮರುದಿನ 14 ವರ್ಷದ ಬಾಲಕ ಭಾನುವಾರ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವರು ತಿಳಿಸಿದ್ದಾರೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಪ್ರಕಾರ, ಬಾಲಕನಿಗೆ ಭಾನುವಾರ ಬೆಳಗ್ಗೆ 10.50 ಕ್ಕೆ ತೀವ್ರ ಹೃದಯಾಘಾತ ಉಂಟಾಗಿತ್ತು. ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

"ಬಾಲಕ ವೆಂಟಿಲೇಟರ್ ಬೆಂಬಲದಲ್ಲಿದ್ದರು. ಇಂದು ಬೆಳಗ್ಗೆ ಮೂತ್ರದ ಉತ್ಪಾದನೆಯು ಕಡಿಮೆಯಾಗಿತ್ತು. ತೀವ್ರ ಹೃದಯಾಘಾತ ನಂತರ, ಅವರನ್ನು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲವಾದವು. ಹೀಗಾಗಿ ಅವರು 11.30 ಕ್ಕೆ ನಿಧನರಾದರು" ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ನಿಫಾ ವೈರಸ್ ಸೋಂಕಿತ ಬಾಲಕನ ಅಂತಿಮ ಸಂಸ್ಕಾರವನ್ನು ವೈದ್ಯಕೀಯ ಪ್ರೋಟೋಕಾಲ್ಗಳಿಗೆ ಅನುಗುಣವಾಗಿ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವೆ ವೀಣಾ ತಿಳಿಸಿದ್ದಾರೆ. ಕೇರಳ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ನಿಫಾ ವೈರಸ್ ಪಾಸಿಟಿವ್ ಆದ ನಾಲ್ವರನ್ನು "ಹೈ ರಿಸ್ಕ್ ಕೆಟಗರಿ" ಯಲ್ಲಿ ಸೇರಿಸಲಾಗಿದೆ. ಎಲ್ಲರಿಗೂ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಸ್ತುತ, ಮಲಪ್ಪುರಂ ಜಿಲ್ಲೆಯ ಪಂಡಿಕ್ಕಾಡ್, ಕೇರಳದ ನಿಫಾ ವೈರಸ್ನ ಕೇಂದ್ರಬಿಂದುವಾಗಿದೆ. ಇನ್ನು, ಆರೋಗ್ಯ ಸಚಿವರು ನೀಡಿರುವ ಸಲಹೆಯೊಂದರಲ್ಲಿ, ನಿಫಾ ಕೇಂದ್ರಬಿಂದು ಮತ್ತು ಹತ್ತಿರದ ಆಸ್ಪತ್ರೆಗಳ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ಗಳನ್ನು ಧರಿಸಲು ಮತ್ತು ಆಸ್ಪತ್ರೆಗಳಲ್ಲಿ ರೋಗಿಗಳನ್ನು ಭೇಟಿ ಮಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.
ಇದರ ಜೊತೆಗೆ ಅರ್ಧ ತಿಂದ ಅಥವಾ ಪಕ್ಷಿಗಳು ಅಥವಾ ಪ್ರಾಣಿಗಳು ಕಚ್ಚಿದ ಹಣ್ಣುಗಳನ್ನು ತಿನ್ನದಂತೆ ಜನರಿಗೆ ಸೂಚಿಸಲಾಗಿದೆ. "ಹಣ್ಣನ್ನು ಸರಿಯಾಗಿ ತೊಳೆದ ನಂತರವೇ ತಿನ್ನಿರಿ. ತೆರೆದ ಪಾತ್ರೆಗಳಲ್ಲಿ ಸಂಗ್ರಹಿಸಲಾದ ಪಾನೀಯಗಳನ್ನು ಸೇವಿಸಬೇಡಿ" ಎಂದು ಆರೋಗ್ಯ ಸಚಿವಾಲಯ ಸಲಹೆ ನೀಡಿದೆ.
ಈ ಹಿಂದೆ ನಾಲ್ಕು ಬಾರಿ ರಾಜ್ಯವನ್ನು ಕಾಡಿದ್ದ ನಿಫಾ ಹಾವಳಿ ತಡೆಗೆ ವಿಶೇಷ ಕ್ರಿಯಾ ಕ್ಯಾಲೆಂಡರ್ ಸಿದ್ಧಪಡಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು. 2018, 2021 ಮತ್ತು 2023 ರಲ್ಲಿ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಮತ್ತು 2019 ರಲ್ಲಿ ಎರ್ನಾಕುಲಂ ಜಿಲ್ಲೆಯಲ್ಲಿ ನಿಫಾ ವೈರಸ್ ಪ್ರಕರಣಗಳು ಏಕಾಏಕಿ ವರದಿಯಾಗಿವೆ. ಕೋಝಿಕ್ಕೋಡ್, ವಯನಾಡ್, ಇಡುಕ್ಕಿ, ಮಲಪ್ಪುರಂ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಬಾವಲಿಗಳಲ್ಲಿ ನಿಪಾ ವೈರಸ್ ಪತ್ತೆಯಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications