20 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಗುಜರಾತ್ ವ್ಯಕ್ತಿಗೆ ಮರಣದಂಡನೆ
ಅಹಮದಾಬಾದ್, ಆಗಸ್ಟ್. 02: ಈ ವರ್ಷದ ಫೆಬ್ರವರಿಯಲ್ಲಿ 20 ತಿಂಗಳ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ ಮತ್ತು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷದ ಯುವಕನಿಗೆ ಗುಜರಾತ್ನ ವಿಶೇಷ ಸೂರತ್ ನ್ಯಾಯಾಲಯವು ಬುಧವಾರ ಮರಣದಂಡನೆ ವಿಧಿಸಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ.
ಇಸ್ಮಾಯಿಲ್ ಅಲಿಯಾಸ್ ಇಸ್ಮಾಯಿಲ್ ಯೂಸುಫ್ ಹಜತ್ ಎಂಬ ಅಪರಾಧಿಗೆ ಮರಣದಂಡನೆ ವಿಧಿಸಿ ಸೂರತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಶಂಕುಂತಲಾ ಸೋಲಂಕಿ ತೀರ್ಪು ನೀಡಿದ್ದಾರೆ. "20 ತಿಂಗಳ ಮಗುವಿನ ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಇಸ್ಮಾಯಿಲ್ಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಶಂಕುಂತಲಾ ಸೋಲಂಕಿ ಇಂದು ಶಿಕ್ಷೆ ವಿಧಿಸಿದ್ದಾರೆ" ಎಂದು ಸರ್ಕಾರಿ ವಕೀಲರು ಹೇಳಿದ್ದಾರೆ.

ಅಪರಾಧಿ ವಿರುದ್ಧ ಸೆಕ್ಷನ್ 302 (ಕೊಲೆ) ಮತ್ತು ಭಾರತೀಯ ದಂಡ ಸಂಹಿತೆಯ (IPC) 376AB (12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸೆಕ್ಷನ್ಗಳ ಅಡಿಯಲ್ಲಿ ಇಸ್ಮಾಯಿಲ್ಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದು ಜಿಲ್ಲಾ ಸರ್ಕಾರಿ ವಕೀಲರಾದ ನಯನ್ ಸುಖದ್ವಾಲಾ ಮಾಹಿತಿ ನೀಡಿದ್ದಾರೆ.
ನ್ಯಾಯಾಧೀಶರು ಇಸ್ಮಾಯಿಲ್ ಯೂಸುಫ್ ಹಜತ್ಗೆ ಐಪಿಸಿಯ ಸೆಕ್ಷನ್ 364 (ಅವಳನ್ನು ಕೊಲೆ ಮಾಡಲು ಅಪಹರಣ) ಮತ್ತು 366 (ಅತ್ಯಾಚಾರ ಮಾಡಲು ಸಂತ್ರಸ್ತೆಯ ಅಪಹರಣ) ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು 1,000 ದಂಡ ವಿಧಿಸಿದ್ದಾರೆ. ಸಂತ್ರಸ್ತೆಯ ಕುಟುಂಬದ ಆರ್ಥಿಕ ಸ್ಥಿತಿಯನ್ನು ಗಮನಿಸಿದ ನ್ಯಾಯಾಲಯವು ಅಪರಾಧಿಯು ಆಕೆಯ ಕುಟುಂಬಕ್ಕೆ 10 ಲಕ್ಷ ನೀಡುವಂತೆ ಆದೇಶಿಸಿದೆ ಎಂದು ನಯನ್ ಸುಖದ್ವಾಲಾ ಹೇಳಿದ್ದಾರೆ.
ಪ್ರಾಸಿಕ್ಯೂಷನ್ ಪ್ರಕಾರ, ಬಾಲಕಿಯ ತಂದೆಗೆ ಪರಿಚಯವಿದ್ದ ಅಪರಾಧಿ ಇಸ್ಮಾಯಿಲ್ ಫೆಬ್ರವರಿ 27 ರಂದು ತಿಂಡಿ ಖರೀದಿಸಿ ಕೊಡುವ ನೆಪದಲ್ಲಿ ಮಗುವನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ಆದರೆ ಎಎಷ್ಟು ಹೊತ್ತಾದರೂ ಇಬ್ಬರು ಮನೆಗೆ ಹಿಂತಿರುಗಿಲ್ಲ. ಇಸ್ಮಾಯಿಲ್ ಹಿಂತಿರುಗದ ನಂತರ ಬಾಲಕಿಯ ಮನೆಯವರು ಆತಂಕಕ್ಕೊಳಗಾಗಿ, ಮಗುವನ್ನು ಹುಡುಕಲು ಪ್ರಾರಂಭಿಸಿದರು ಮತ್ತು ಪೊಲೀಸರಿಗೆ ದೂರು ನೀಡಿದ್ದರು.

ಇದಾದ ಹಲವು ಗಂಟೆಗಳ ನಂತರ, ಮಗುವಿನ ನಿರ್ಜೀವ ದೇಹವು ಕಪ್ಲೆಥಾ ಗ್ರಾಮದ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಹಿಂಭಾಗದ ಕೆರೆಯ ಬಳಿ ಪತ್ತೆಯಾಗಿತ್ತು. ಮಗುವಿಗೆ ಚಾಕೋಲೆಟ್ ಕೊಡಿಸಲು ಕರೆದುಕೊಂಡು ಹೋಗಿದ್ದ ಇಸ್ಮಾಯಿಲ್ ನಾಪತ್ತೆಯಾಗಿದ್ದನು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆತನನ್ನು ಸೂರತ್ ಬಳಿಯ ಹಳ್ಳಿಯೊಂದಕ್ಕೆ ಪತ್ತೆಹಚ್ಚಿದ್ದರು. ಫೆಬ್ರವರಿ 28 ರಂದು ಕಂದಮ್ಮನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಆತನನ್ನು ಬಂಧಿಸಿದ್ದರು. ಬಾಲಕಿಯ ಮೃತ ದೇಹ ಪತ್ತೆಯಾದಾಗ ಆಕೆಯ ದೇಹದ ಮೇಲೆ ತೀವ್ರತರದ ಗಾಯಗಳು ಮತ್ತಿ ಕಿಬ್ಬೊಟ್ಟೆಯ ಭಾಗದಲ್ಲಿ ಕಚ್ಚಿದ ಗುರುತುಗಳಿದ್ದವು ಎಂದು ವರದಿಯಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications