ಯುಕೆಗೆ ಹೋಗಬೇಕಿದ್ದ ಯುವತಿ ಕಣಗಿಲೆ ಹೂ ತಿಂದು ಸೇರಿದ್ದು ಮಸಣಕ್ಕೆ
ತಿರುವನಂತಪುರಂ, ಮೇ. 09 : ಕೇರಳದ ಹರಿಪಾಡ್ ಸಮೀಪದ ಪಲ್ಲಿಪ್ಪಾಡ್ನಲ್ಲಿ ಕಣಗಿಲೆ (ಒಲಿಂಡರ್) ಹೂವು ಮತ್ತು ಎಲೆಯ ರಸವನ್ನು ಸೇವಿಸಿದ 24 ವರ್ಷದ ಯುವತಿ ಮೃತಪಟ್ಟ ಘಟನೆ ನಡೆದಿದೆ. ಕನಸುಗಳ ಬೆನ್ನೇರಿ ಬ್ರಿಟನ್ಗೆ ತೆರಳುತಿದ್ದ ಯುವತಿ ಏರ್ಪೋರ್ಟ್ ತೆರಳುವಾಗಲೇ ಮೃತಪಟ್ಟಿದ್ದಾರೆ.
ಪಲ್ಲಿಪ್ಪಾಡ್ನ ನೀಂದೂರ್ನ ಕೊಂಡುರೆತ್ತು ಮನೆಯ ಸುರೇಂದ್ರನ್ ಅವರ ಪುತ್ರಿ ಸೂರ್ಯ ಸುರೇಂದ್ರನ್ ಅವರು ಭಾನುವಾರ ನರ್ಸಿಂಗ್ ಕೆಲಸಕ್ಕೆ ಸೇರಲು ಯುಕೆಗೆ ತೆರಳುತಿದ್ದರು. ಕೆಲಸಕ್ಕಾಗಿ ವಿಮಾನ ನಿಲ್ದಾಣಕ್ಕೆ ಬಂದಾಗ ನೆಡುಂಬಶ್ಶೇರಿ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದಾರೆ. ನಂತರ ಆಕೆಯನ್ನು ಅಂಗಮಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತಿರುವಲ್ಲಾ ಬಳಿಯ ಪರುಮಳದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಸೋಮವಾರ ಮೃತಪಟ್ಟಿದ್ದಾಳೆ.

ಹರಿಪಾಡ್ ಠಾಣಾಧಿಕಾರಿ ಕೆ ಅಭಿಲಾಷ್ಕುಮಾರ್ ಪ್ರಕಾರ, ಯುವತಿಯ ಮರಣೋತ್ತರ ಪರೀಕ್ಷೆಯನ್ನು ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಕಣಗಿಲೆ (ಮಲಯಾಳಂ ಭಾಷೆಯಲ್ಲಿ ಅರಳಿ ಹೂ) ಹೂವು ಮತ್ತು ಎಲೆ ತಿಂದದ್ದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.
ಪೋನಿನಲ್ಲಿ ಮಾತಾಡುತ್ತಾ ಕಣಗಿಲೆ ಹೂ ತಿಂದಿದ್ದ ಯುವತಿ
ಭಾನುವಾರ ಬೆಳಗ್ಗೆ ಮನೆಯಿಂದ ಫೋನ್ ಮೂಲಕ ಸಂಬಂಧಿಕರು ಮತ್ತು ಸ್ನೇಹಿತರಿಗೆ ತನ್ನ ಪ್ರಯಾಣದ ವಿಷಯವನ್ನು ತಿಳಿಸಿದ್ದಾಳೆ. ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಾ ಓಡಾಡುವಾಗ, ಗೊತ್ತಿಲ್ಲದೆ ಎಲೆ ಮತ್ತು ಹೂವನ್ನು ಕಚ್ಚಿದ್ದಾರೆ. ತಕ್ಷಣವೇ ಅದನ್ನು ಉಗುಳಿದ್ದಾರೆ. ಆದರೂ, ಎಲೆ ಮತ್ತು ಹೂವಿನ ರಸದ ಕೆಲವು ಹನಿಗಳು ದೇಹಕ್ಕೆ ಸೇರಿಕೊಂಡಿದ್ದವು ಎಂದು ಮೃತ ಯುವತಿ ಸೂರ್ಯ ಸುರೇಂದ್ರನ್ ತನ್ನ ಪೋಷಕರು ಮತ್ತು ವೈದ್ಯರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಆಕೆಯ ರಕ್ತದಲ್ಲಿ ವಿಷಕಾರಿ ಅಂಶವಿದೆ ಎಂದು ಹೇಳಿದ್ದಾರೆ. ಆದರೆ ಹೊಟ್ಟೆಯೊಳಗಿನ ಆಹಾರ ಕಣಗಳಲ್ಲಿ ಹೂವಿನ ಅಥವಾ ಎಲೆಯ ಭಾಗಗಳು ಕಂಡುಬಂದಿಲ್ಲ. ಆದ್ದರಿಂದ ವಿವರವಾದ ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ನಿಖರವಾದ ವಿಷದ ಅಂಶವನ್ನು ಗುರುತಿಸಬಹುದು ಎಂದು ಅಭಿಲಾಷ್ಕುಮಾರ್ ಹೇಳಿದ್ದಾರೆ.

ಅರಳಿ ಹೂವುಗಳು ಹೆಚ್ಚು ವಿಷಕಾರಿ: ತಜ್ಞರು
ಕಣಗಿಲೆ ಹೂವಿನ ವಿಷತ್ವದ ಬಗ್ಗೆ ಅಧ್ಯಯನ ನಡೆಸಿರುವ ಡಾ.ಬೆನಿಲ್ ಕೊಟ್ಟಕ್ಕಲ್, ಹೂವಿನಲ್ಲಿರುವ ಆಲ್ಕಲಾಯ್ಡ್ಗಳು ಕಾರ್ಡಿಯಾಕ್ ಗ್ಲೈಕೋಸೈಡ್ಗಳ ವರ್ಗದಲ್ಲಿ ಬರುತ್ತವೆ ಎಂದು ಹೇಳಿದ್ದಾರೆ. "ನೆರಿಯಮ್ ಒಲಿಯಾಂಡರ್ನಲ್ಲಿರುವ ಈ ಆಲ್ಕಲಾಯ್ಡ್ಗಳು ನೇರವಾಗಿ ಹೃದಯದ ಮೇಲೆ ಪರಿಣಾಮ ಬೀರುತ್ತವೆ. ಕಾಂಡದೊಳಗೆ ಕಂಡುಬರುವ ಲ್ಯಾಟೆಕ್ಸ್ನಲ್ಲಿ ಆಲ್ಕಲಾಯ್ಡ್ಗಳ ಉಪಸ್ಥಿತಿಯು ತುಂಬಾ ಹೆಚ್ಚಾಗಿದೆ. ಹೆಚ್ಚು ಹೂ ಬಿಡಲು ಅಭಿವೃದ್ಧಿಪಡಿಸಿದ ಹೊಸ ತಳಿಯ ಕಣಗಿಲೆ ಗಿಡಗಳಲ್ಲಿ ಈ ವಿಷಾಂಶ ಹೆಚ್ಚಿರುವ ಶಂಕೆ ವ್ಯಕ್ತವಾಗಿದೆ. "ಆದರೆ, ಅದನ್ನು ಇನ್ನೂ ವೈಜ್ಞಾನಿಕವಾಗಿ ದೃಢಕರಿಸಿಲ್ಲ" ಎಂದು ತಿಳಿಸಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications