ರೋಪ್ ವೇ ಮಧ್ಯೆ ಸಿಲುಕಿದ್ದ ಕೇಬಲ್ ಕಾರ್ನಿಂದ 11 ಪ್ರಯಾಣಿಕರ ರಕ್ಷಣೆ: ವಿಡಿಯೋ ನೋಡಿ
ನವದೆಹಲಿ, ಜೂನ್ 20: ಹಿಮಾಚಲ ಪ್ರದೇಶದ ಪರ್ವಾನೂ ಎಂಬಲ್ಲಿ ಮಧ್ಯಮಾರ್ಗದಲ್ಲಿ ಸಿಲುಕಿಕೊಂಡಿದ್ದ ಕೇಬಲ್ ಕಾರ್ ಆತಂಕ ಮೂಡಿಸಿತ್ತು. ಸತತ 3 ಗಂಟೆಗಳ ಕಾರ್ಯಾಚರಣೆಯಲ್ಲಿ ಕೇಬಲ್ ಕಾರ್ ನಲ್ಲಿ ಸಿಲುಕಿದ್ದ ಎಲ್ಲಾ 11 ಜನರನ್ನು ರಕ್ಷಿಸಲಾಗಿದೆ.
ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ, ವಾಯುಮಾರ್ಗದಲ್ಲಿ ಮಧ್ಯದಲ್ಲಿಯೇ ಕೇಬಲ್ ಕಾರ್ ಸಿಲುಕಿ ಹಾಕಿಕೊಂಡಿತ್ತು. ಘಟನೆಗೆ ಏನು ಕಾರಣ ಎನ್ನುವ ಕುರಿತು ಸಮಗ್ರ ವರದಿ ಪಡೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ.
ಸೋಲನ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ವೀರೇಂದ್ರ ಶರ್ಮಾ ಪ್ರಕಾರ, ಪ್ರಯಾಣಿಕರನ್ನು ಹೊರತರಲು ಕೇಬಲ್ನಲ್ಲಿ ರಕ್ಷಣಾ ಟ್ರಾಲಿಯನ್ನು ನಿಯೋಜಿಸಲಾಗಿತ್ತು, ರಕ್ಷಣಾ ಉಪಕರಣಗಳನ್ನು ಬಳಸಿ ಕೆಳಗಿರುವ ಕೌಶಲ್ಯ ನದಿ ಕಣಿವೆಯ ಬೆಟ್ಟದ ಮೇಲೆ ಇಳಿಸಲಾಯಿತು ಎಂದು ತಿಳಿಸಿದ್ದಾರೆ.

ಕೇಬಲ್ ಕಾರ್ ಟಿಂಬರ್ ಟ್ರಯಲ್ ಖಾಸಗಿ ರೆಸಾರ್ಟ್ನ ಜನಪ್ರಿಯ ವೈಶಿಷ್ಟ್ಯವಾಗಿದೆ, ಚಂಡೀಗಢದಿಂದ ಕಸೌಲಿ ಮತ್ತು ಶಿಮ್ಲಾ ಮಾರ್ಗ ಮಧ್ಯದಲ್ಲಿ ಸುಮಾರು 35 ಕಿಲೋಮೀಟರ್ ದೂರದಲ್ಲಿದೆ. ಪರ್ವಾನೂ ಹರ್ಯಾಣ, ಪಂಜಾಬ್ ಮತ್ತು ಚಂಡೀಗಢಗಳೊಂದಿಗೆ ಹಿಮಾಚಲ ಪ್ರದೇಶದ ತುದಿಯಲ್ಲಿರುವ ಕಾರಣ ಸುತ್ತಮುತ್ತಲಿನ ಜನರು ಪ್ರವಾಸಕ್ಕಾಗಿ ಈ ಸ್ಥಳಕ್ಕೆ ಭೇಟಿ ನೀಡುತ್ತಾರೆ.
#WATCH Cable car trolly with tourists stuck mid-air at Parwanoo Timber Trail, rescue operation underway; tourists safe#HimachalPradesh pic.twitter.com/mqcOqgRGjo
— ANI (@ANI) June 20, 2022
ಹಿರಿಯ ಪ್ರವಾಸಿಗರ ಪರದಾಟ
ಟಿಂಬರ್ ಟ್ರಯಲ್ ಆಪರೇಟರ್ನ ತಾಂತ್ರಿಕ ತಂಡವನ್ನು ನಿಯೋಜಿಸಲಾಗಿತ್ತು ಮತ್ತು ಪೊಲೀಸ್ ತಂಡವು ಪರಿಸ್ಥಿತಿಯನ್ನು ಮೇಲ್ವಿಚಾರಣೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡವೂ ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿತ್ತು.
ಸಿಕ್ಕಿಹಾಕಿಕೊಂಡ ಕೇಬಲ್ ಕಾರ್ ನಲ್ಲಿ ಕೆಲವು ಹಿರಿಯ ಪ್ರವಾಸಿಗರು ಇದ್ದರು. ಅವ್ಯವಸ್ಥೆ ಬಗ್ಗೆ ಹಿರಿಯ ಪ್ರವಾಸಿಗರು ವಿಡಿಯೋ ಹಂಚಿಕೊಂಡಿದ್ದಾರೆ, " ನಾನು ಮಧುಮೇಹ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದೇನೆ. ರೋಪ್ ವೇ ಬಳಸಿ ನಮ್ಮನ್ನು ರಕ್ಷಿಸುವುದಾಗಿ ಹೇಳುತ್ತಾರೆ, ಈ ರೀತಿಯಲ್ಲಿ ರಕ್ಷಣೆ ಮಾಡಿದರೆ ವಯಸ್ಸಾದವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ" ಎಂದು ದೂರಿದ್ದಾರೆ.
1992ರಲ್ಲಿ ಇದೇ ರೀತಿ ಘಟನೆ ನಡೆದಿತ್ತು
ಸೋಮವಾರದ ನಡೆದ ಘಟನೆಯು ಅಕ್ಟೋಬರ್ 1992 ರಲ್ಲಿ ಟಿಂಬರ್ ಟ್ರಯಲ್ನಲ್ಲಿ ಇದೇ ರೀತಿಯ ಘಟನೆಯನ್ನು ನೆಸಪಿಸಿದೆ. ಸೇನೆ ಮತ್ತು ವಾಯುಪಡೆಯ ಕಾರ್ಯಾಚರಣೆಯಲ್ಲಿ 10 ಪ್ರಯಾಣಿಕರನ್ನು ರಕ್ಷಿಸಲಾಗಿತ್ತು, ಆದರೆ ಅಂದು ಕೇಬಲ್ ಕಾರ್ ಆಪರೇಟರ್ ಸಾವನ್ನಪ್ಪಿದ್ದರು.
ಆ ದಿನ ಘಟನೆಯಲ್ಲಿ ಕತ್ತಲಾಗುವ ಮೊದಲು ಅರ್ಧದಷ್ಟು ಪ್ರಯಾಣಿಕರನ್ನು ಮಾತ್ರ ರಕ್ಷಿಸಲು ಸಾಧ್ಯವಾಯಿತು. ತಂಡವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಗಿತ್ತು ಆದರೆ ಮರುದಿನ ಇತರರನ್ನು ಹೊರತರುವಲ್ಲಿ ಯಶಸ್ವಿಯಾಯಿತು. ಕೇಬಲ್ ಕಾರ್ ನಿಯಂತ್ರಣ ತಪ್ಪಿದ ನಂತರ ನಿರ್ವಾಹಕರು ತಕ್ಷಣವೇ ಸುರಕ್ಷತೆಗಾಗಿ ಜಿಗಿಯಲು ಪ್ರಯತ್ನಿಸಿದ್ದನು, ಆದರೆ ತಲೆ ಬಂಡೆಗೆ ಬಡಿದಿದ್ದರಿಂದ ಸಾವನ್ನಪ್ಪಿದ್ದನು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications