Viral video: ದುರ್ಗಾ ಮೂರ್ತಿ ವಿಸರ್ಜನೆ ಮಾರ್ಗದಲ್ಲಿ ಜನರ ಮೇಲೆ ಹರಿದ ವಾಹನ
ಛತ್ತೀಸ್ಗಢ ಅಕ್ಟೋಬರ್ 15: ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಪಥಲ್ಗಾಂವ್ನಲ್ಲಿ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ಹೊರಟಿದ್ದ ಜನರ ಮೇಲೆ ವೇಗವಾಗಿ ವಾಹನ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಘಟನೆಯಲ್ಲಿ ಗಾಯಗೊಂಡ 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರಿಗೆ ಬೆನ್ನು ಮೂಳೆ ಮುರಿದಿವೆ ಎಂದು ಇತರ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ವೈದ್ಯಕೀಯ ಅಧಿಕಾರಿ ಜೇಮ್ಸ್ ಮಿಂಜ್ ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ 1.30 ರಿಂದ 2 ಗಂಟೆಯ ನಡುವೆ ಈ ಘಟನೆ ನಡೆದಿದೆ. ಇಲ್ಲಿ ಹೆಚ್ಚಿನ ಸಂಖ್ಯೆಯ ಜನರು ದುರ್ಗಾ ಪಂಡಲರ ಮೂರ್ತಿಯನ್ನು ವಿಸರ್ಜಿಸಲು ನದಿಯ ಕಡೆಗೆ ಹೋಗುತ್ತಿದ್ದರು. ಈ ಮಧ್ಯೆ, ಹಿಂದೆ ವೇಗವಾಗಿ ಬಂದ ಕಾರು ಈ ಜನರ ಮೇಲೆ ಹರಿದಿದೆ. ಅದರ ನಂತರ ಕೆಲವರು ಕಾರನ್ನು ಸ್ವಲ್ಪ ದೂರದವರೆಗೂ ಹೋಗಿ ನಿಲ್ಲಿಸಿದ್ದಾರೆ. ಕೋಪಗೊಂಡ ಗುಂಪು ಕಾರು ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದೆ. ಕಾರಿನಲ್ಲಿ ಗಾಂಜಾ ತುಂಬಿತ್ತೆಂದು ಜನರು ಆರೋಪಿಸಿದ್ದಾರೆ. ಸುಮಾರು 100 ಕಿ.ಮೀ ಪ್ರತಿ ಗಂಟೆ ವೇಗದಲ್ಲಿ ಚಾಲಕ ಕಾರು ಚಾಲನೆ ಮಾಡಿದ್ದಾನೆ. ಘಟನೆಯ ನಂತರ, ಕೋಪಗೊಂಡ ಜನರು ಪಥಲ್ಗಾಂವ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದರು. ಜೊತೆಗೆ ಗುಮ್ಲಾ-ಕಟ್ನಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಮೃತ ದೇಹವನ್ನು ಇಟ್ಟುಕೊಂಡು ಪ್ರತಿಭಟಿಸಿದ್ದಾರೆ. ಜನರ ಮಧ್ಯೆ ನುಗ್ಗಿದ ವಾಹನದಲ್ಲಿ ಗಾಂಜಾ ತುಂಬಿದೆ ಎಂದು ಜನರು ಆರೋಪಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಈ ಬಗ್ಗೆ ಇನ್ನೂ ತನಿಖೆ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.

ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಅಗರ್ವಾಲ್ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಬಂದ ಮಾಹಿತಿಯ ಪ್ರಕಾರ, ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು 21 ವರ್ಷದ ಬಬ್ಲು ವಿಶ್ವಕರ್ಮ ಮತ್ತು 26 ವರ್ಷದ ಶಿಶುಪಾಲ್ ಸಾಹು ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದ ನಿವಾಸಿಗಳಾದ ಇವರು ಛತ್ತೀಸ್ಗಢದ ಮೂಲಕ ಹಾದುಹೋಗುವಾಗ ಘಟನೆ ಸಂಭವಿಸಿದೆ.
A speeding vehicle runs over a Hindu religious procession in Jashpur, Chattisgarh, without any provocation whatsoever.
— Amit Malviya (@amitmalviya) October 15, 2021
This is second such instance of communal profiling and assault on Hindus while CM @bhupeshbaghel is busy helping the Gandhi siblings find political ground in UP. pic.twitter.com/olheUNVPgG
ಘಟನೆಗೆ ಪ್ರತಿಕ್ರಿಯಿಸಿದ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, "ಜಶ್ಪುರ ಘಟನೆ ಅತ್ಯಂತ ದುಃಖಕರ ಮತ್ತು ಹೃದಯವಿದ್ರಾವಕವಾಗಿದೆದ. ಘಟನೆಯ ಕಾರಣಿಕರ್ತರನ್ಯಾರನ್ನೂ ಬಿಡುವುದಿಲ್ಲ. ನ್ಯಾಯವನ್ನು ನೀಡಲಾಗುತ್ತದೆ " ಇದರಿಂದ ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಟ್ವೀಟ್ ಮಾಡಿದ್ದಾರೆ.
-
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications