ಎದೆಹಾಲುಣಿಸುವ ಪೋಸ್ ಕೊಟ್ಟ ನಟಿ ವಿರುದ್ಧ ದೂರು
ತಿರುವನಂತಪುರಂ, ಮಾರ್ಚ್ 02: ಕೇರಳದ ಮಲಯಾಳಂ ನಿಯತಕಾಲಿಕೆ ಗೃಹಲಕ್ಷ್ಮಿಯ ಮುಖಪುಟದಲ್ಲಿ ಕಾಣಿಸಿಕೊಂಡಿದ್ದ ರೂಪದರ್ಶಿ ಹಾಗೂ ಪತ್ರಿಕೆ ವಿರುದ್ಧ ದೂರು ದಾಖಲಾಗಿದೆ.
ಎದೆಹಾಲು ಉಣಿಸುವ ಪೋಸ್ ನೀಡಿದ್ದ ಗಿಲು ಜೋಸೆಫ್ ಅವರ ನೋಟ, ಭಂಗಿ ಕಾಮೋತ್ತೇಜಕವಾಗಿದೆ ಎಂದು ನಿಯತಕಾಲಿಕೆಯ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.
ಕಾಮ ಪ್ರಚೋದಿಸುವಂಥ ಚಿತ್ರ ಬಳಸುವ ಮೂಲಕ ಸ್ತ್ರೀತನದ ಗೌರವಕ್ಕೆ ಚ್ಯುತಿ ತರಲಾಗಿದೆ ಎಂದು ಆರೋಪಿಸಲಾಗಿದೆ. ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ನಿಷೇಧ) ಕಾಯಿದೆ, 1986ರ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಕೇರಳದ ವಕೀಲ ವಿನೋದ್ ಮ್ಯಾಥ್ಯೂ ವಿಲ್ಸನ್ ಎಂಬುವರು ದೂರು ದಾಖಲಿಸಿದ್ದಾರೆ.

ನಟಿ, ಲೇಖಕಿ ಗಿಲು ಜೋಸೆಫ್ ಅವರು ಅವಿವಾಹಿತೆಯಾಗಿದ್ದು, ಮಗುವಿಗೆ ಹಾಲುಣಿಸುವಂತೆ ಪೋಸ್ ನೀಡಿರುವುದು ಸರಿಯಲ್ಲ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಆದರೆ, ಸೀರೆ, ಸಿಂಧೂರ, ತಾಳಿ ಧರಿಸಿ ಮಗುವಿಗೆ ಎದೆ ಹಾಲು ಕುಡಿಸುತ್ತಿರುವ ಚಿತ್ರದಲ್ಲಿ ಯಾವುದೇ ತಪ್ಪಿಲ್ಲ, ಇದು ತಾಯಂದಿರಿಗೆ ನೈತಿಕ ಬೆಂಬಲ ನೀಡುತ್ತಿದೆ ಎಂದು ಹಲವಾರು ಮಂದಿ ಬೆಂಬಲ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಗಿಲು ಜೋಸೆಫ್, ಈ ಮುಖಪುಟ ಚಿತ್ರವನ್ನು ಅನೇಕರು ಇಷ್ಟಪಡದೆ ಇರಬಹುದು. ಆದರೆ, ಈ ಚಿತ್ರ ದೇಶದ ಎಲ್ಲ ತಾಯಿಯರಿಗೆ ನೀಡುತ್ತಿರುವ ಸಂದೇಶ. ಯಾರು ಏನೆಂದುಕೊಳ್ಳುತ್ತಾರೆ ಎಂಬ ಹಿಂಜರಿಕೆಯಿಲ್ಲದೆ ಧೈರ್ಯದಿಂದ ಮಗುವಿಗೆ ಎದೆಹಾಲು ಉಣಿಸಿ ಎಂದಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications