ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಬ್ರಿ ಜಾರ್ಜ್ ಶೀಟ್ ಹಾಕಿದ ಮರುದಿನ ಅಯೋಧ್ಯೆಯಲ್ಲಿ ಯೋಗಿ

|
Google Oneindia Kannada News

ಅಯೋಧ್ಯಾ, ಮೇ 31: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪುನರಾರಂಭ ಆದ ಒಂದು ದಿನದ ನಂತರ ಅಂದರೆ ಮೇ ಮೂವತ್ತೊಂದರ ಬುಧವಾರ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಯೋಗಿ ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದ್ದಾರೆ.

ಮಂಗಳವಾರದಂದು ಯೋಗಿ ಆದಿತ್ಯನಾಥ್ ಬಿಜೆಪಿ ಮುಖಂಡರಾದ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಶಿ ಹಾಗೂ ಉಮಾ ಭಾರತಿ ಅವರನ್ನು ಭೇಟಿಯಾಗಿದ್ದರು. ಈ ಮೂವರು ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ಕೋರ್ಟ್ ಮುಂದೆ ಹಾಜರಾಗಲು ಲಖನೌಗೆ ಬಂದಿದ್ದರು.[ಅಸಲಿಗೆ ಅಯೋಧ್ಯೆಯಲ್ಲಿ ಕರಸೇವಕರನ್ನು ಪ್ರಚೋದಿಸಿದ್ದು ಅಡ್ವಾಣಿಯಲ್ಲ, ನಾನು]

A day after Babri hearing, CM Adityanath to visit Ayodhya

ಈ ಮೂವರು ಸೇರಿದಂತೆ ಒಂಬತ್ತು ಮಂದಿಯು ಪ್ರಕರಣದಿಂದ ತಮ್ಮ ಹೆಸರನ್ನು ಕೈ ಬಿಡಬೇಕು ಎಂದು ಕೋರಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಐಪಿಸಿ ಸೆಕ್ಷನ್ 120 (B) ಅಡಿಯಲ್ಲಿ ಇವರೆಲ್ಲರ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಸಿಬಿಐ ಕೋರ್ಟ್ ಆದೇಶದ ವಿರುದ್ಧ ಎಲ್ಲ ಆರೋಪಿಗಳು ಅಲಹಾಬಾದ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು ಮಂಗಳವಾರ ಎಲ್ಲರಿಗೂ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿತ್ತು.

English summary
A day after the crucial Babri Masjid hearing in which senior Bharatiya Janata Party (BJP) leaders were slapped with charges of criminal conspiracy, Uttar Pradesh Chief Minister Yogi Adityanath will visit Lord Rama's birthplace Ayodhya today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X