Breaking: ಸ್ಪೈಸ್ಜೆಟ್ ವಿಮಾನದಲ್ಲಿ ಬೆಂಕಿ; ಪಾಟ್ನಾದಲ್ಲಿ ತುರ್ತು ಲ್ಯಾಂಡಿಂಗ್
ಪಾಟ್ನಾ, ಜೂನ್ 19: ದೆಹಲಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ಪಾಟ್ನಾದ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಿರುವ ಘಟನೆ ಭಾನುವಾರ ನಡೆದಿದೆ.
ಭಾನುವಾರ ಬೆಳಗ್ಗೆ ದೆಹಲಿ ಕಡೆಗೆ ಹಾರಿದ ಸ್ಪೈಸ್ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಬೆಂಕಿ ಕಾಣಿಸಿಕೊಂಡಿತ್ತು. ಈ ಕುರಿತು ತಿಳಿಯುತ್ತಿದ್ದಂತೆ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣಕ್ಕೆ ವಾಪಸ್ ತಂದು, ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.
#WATCH Delhi bound SpiceJet flight returns to Patna airport after reporting technical glitch which prompted fire in the aircraft; All passengers safely rescued pic.twitter.com/Vvsvq5yeVJ
— ANI (@ANI) June 19, 2022
ಸ್ಪೈಸ್ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಪಾಟ್ನಾ ವಿಮಾನ ನಿಲ್ದಾಣದಲ್ಲಿ ಇಳಿದಿರುವುದು ಗೊತ್ತಾಗಿದೆ. ವಿಮಾನದಿಂದ ಪ್ರಯಾಣಿಕರು ಇಳಿಯುತ್ತಿರುವ ವಿಡಿಯೋ ಕೂಡ ಲಭ್ಯವಾಗಿದೆ.

185 ಪ್ರಯಾಣಿಕರಿದ್ದ ವಿಮಾನ:
ಸ್ಪೈಸ್ಜೆಟ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಜಿಲ್ಲಾ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ತದನಂತರ ದೆಹಲಿಗೆ ಹೊರಟಿದ್ದ ವಿಮಾನವು ಪಾಟ್ನಾ ವಿಮಾನ ನಿಲ್ದಾಣಕ್ಕೆ ಮರಳಿತು. ಎಲ್ಲಾ 185 ಪ್ರಯಾಣಿಕರು ಸುರಕ್ಷಿತವಾಗಿ ಈಗ ಕೆಳಗಿಳಿದಿದ್ದಾರೆ. ಬೆಂಕಿ ಕಾಣಿಸಿಕೊಳ್ಳುವುದಕ್ಕೆ ತಾಂತ್ರಿಕ ದೋಷ ಕಾರಣ ಎಂದು ಹೇಳಲಾಗುತ್ತಿದ್ದು, ಎಂಜಿನಿಯರಿಂಗ್ ತಂಡ ಮತ್ತಷ್ಟು ವಿಶ್ಲೇಷಣೆ ನಡೆಸುತ್ತಿದೆ ಎಂದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications