ಉಗ್ರ ಹಫೀಜ್ ಬಿಡುಗಡೆ : ಕಾಶ್ಮೀರದಲ್ಲಿ ಹೈ ಅಲರ್ಟ್
ಜಮ್ಮು ಮತ್ತು ಕಾಶ್ಮೀರ, ನವೆಂಬರ್ 24 : ಗೃಹಬಂಧನದಲ್ಲಿದ್ದ ಲಷ್ಕರ್-ಎ-ತೊಯೆಬಾ ಮತ್ತು ನಿಷೇಧಿತ ಜಮಾತ್ ಉದ್ ದವಾ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಬಿಡುಗಡೆ ಆಗುತ್ತಿದ್ದಂತೆಯೇ ಇತ್ತ ಜಮ್ಮು ಕಾಶ್ಮೀರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮುಂಬೈ ದಾಳಿಯ ಪ್ರಮುಖ ಸಂಚುಕೋರ ಹಫೀಜ್ ಸಯೀದ್ ಬಿಡುಗಡೆ ಆಗಿರುವುದು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗೆ ಸ್ಪೂರ್ಥಿ ತುಂಬವ ಅಪಾಯ ಇದ್ದು, ಪ್ರತ್ಯೇಕವಾದಿಗಳ ಹುಮ್ಮಸ್ಸು ಹೆಚ್ಚಿ ಗಲಭೆಗೆ ಕಾರಣವಾಗಬಹುದು ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಗುಪ್ತಚರ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಹಫೀಜ್ ಬಿಡುಗಡೆ ಆಗಿರುವುದರಿಂದ ಪಾಖಿಸ್ತಾನದ ಐಎಸ್ಐ ಚಳಿಗಾಲದ ಒಳಗೆ ಮತ್ತಷ್ಟು ಉಗ್ರರರನ್ನು ಭಾರತದ ಒಳಕ್ಕೆ ನುಗ್ಗಿಸುವ ಪ್ರಯತ್ನವನ್ನೂ ಮಾಡಲಿದೆ ಎಂದು ಹೇಳಿದೆ. ಗುಪ್ತಚರ ಮಾಹಿತಿ ಇಂದ ಅಲರ್ಟ್ ಆಗಿರುವ ಭಾರತೀಯ ಸೈನ್ಯೆ, ಗಡಿಯಲ್ಲಿ ಹೆಚ್ಚಿನ ಕಾವಲು ಪಡೆಯನ್ನು ನಿಯೋಜಿಸಿದೆ.
ಹಫೀಜ್ ಬಿಡುಗಡೆ ಆಗುತ್ತಿದ್ದಂತೆಯೇ ಕಾಶ್ಮೀರ ವಿಮೋಚನೆಗಾಗಿ ಹೋರಾಡುತ್ತೇನೆ ಎಂದು ಹೇಳಿರುವುದು ಗುಪ್ತಚರ ಮಾಹಿತಿಗೆ ಪುಷ್ಟಿ ನೀಡಿದೆ. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ತನ್ನ ಅನುಯಾಯಿಗಳನ್ನು ಉದ್ದೇಶಿಸಿದ ಹಫೀಜ್ ಸಯಿದ್ ಕೇವಲ 10 ತಿಂಗಳು ಮಾತ್ರ ನನ್ನ ಧ್ವನಿಯನ್ನು ಅದುಮಿಡಲು ಸರ್ಕಾರಕ್ಕೆ ಸಾಧ್ಯವಾಯಿತು. ಇನ್ನು ಮುಂದೆ ಕಾಶ್ಮೀರ ವಿಮೋಚನೆಗಾಗಿ ಹೋರಾಡುತ್ತೇನೆ ಎಂದಿದ್ದಾನೆ.
ಉಗ್ರ ಹಫೀಜ್ ಸಯೀದ್ ಬಿಡುಗಡೆಯನ್ನು ಭಾರತ ತೀರ್ವವಾಗಿ ವಿರೋದಿಸಿದ್ದು, ವಿಶ್ವಸಂಸ್ಥೆಯೇ ಆತನನ್ನು ಭಯೋತ್ಪಾದಕ ಎಂದು ಗುರುತಿಸದ ಮೇಲೂ ಆತನಿಗೆ ಶಿಕ್ಷೆ ನೀಡದೆ ಬಿಡುಗಡೆ ಆಗುವಂತೆ 'ನೋಡಿಕೊಂಡಿರುವ' ಪಾಕಿಸ್ತಾನಕ್ಕೆ ಭಾರತ ವಿದೇಶಾಂಗ ಇಲಾಖೆ ಛೀಮಾರಿ ಹಾಕಿದೆ. ಅಮೆರಿಕ ಸರ್ಕಾರವು ಹಫೀಜ್ ತೆಲೆಗೆ 10 ಮಿಲಿಯನ್ ಡಾಲರ್ ಬೆಲೆ ಕಟ್ಟಿದೆ.
ಪಾಕಿಸ್ತಾನದ ಈ ನಡೆಯನನ್ನು "ಉಗ್ರರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ' ಎಂದು ಭಾರತ ಕಟುವಾಗಿ ಟೀಕಿಸಿದೆ. 'ಈ ಘಟನೆಯಿಂದ ಪಾಕಿಸ್ತಾನದ ನಿಜ ಬಣ್ಣ ಏನು ಎಂಬುದು ಇಡೀಯ ಜಗತ್ತಿದೆ ಗೊತ್ತಾಗುತ್ತಿದೆ' ಎಂದು ಭಾರತದ ವಿದೇಶಾಂಗ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications