ನಟ ಅಕ್ಷಯ್ ಕುಮಾರ್ ಕೆನ್ನೆಗೆ ಬಾರಿಸಿದವರೆ 10 ಲಕ್ಷ ಬಹುಮಾನ ಘೋಷಿಸಿದ ಹಿಂದೂ ಸಂಘಟನೆ
ನವದೆಹಲಿ, ಆಗಸ್ಟ್ 11: ಬಾಲಿವುಡ್ನ ಖ್ಯಾತ ನಟ ಅಕ್ಷಯ್ ಕುಮಾರ್ ಕೆನ್ನೆಗೆ ಬಾರಿಸಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಹಿಂದೂ ಸಂಘಟನೆಯೊಂದು ಘೋಷಣೆ ಮಾಡಿದೆ.
ಇತ್ತೀಚೆಗೆ ಬಿಡುಗಡೆಯಾದ ಓ ಮೈ ಗಾಡ್ 2 (OMG 2) ಚಿತ್ರದಲ್ಲಿ ಶಿವನ ಪಾತ್ರದದಲ್ಲಿ ಹಿಂದೂಗಳ ಭಾವನೆಗಳಿಗೆ ನೋವುಂಟಾಗಿದೆ. ಹೀಗಾಗಿ ಹಿಂದೂಗಳ ಭಾವನೆಗಳನ್ನು ನೋಯಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಕೆನ್ನೆಗೆ ಬಾರಿಸುವ ಅಥವಾ ಉಗುಳುವವರಿಗೆ 10 ಲಕ್ಷ ರೂ.ಗಳ ಬಹುಮಾನವನ್ನು ನೀಡುವುದಾಗಿ ಹಿಂದೂ ಸಂಘಟನೆ ಘೋಷಿಸಿದೆ.

ಓ ಮೈ ಗಾಡ್ 2 ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ ರಾಷ್ಟ್ರೀಯ ಹಿಂದೂ ಪರಿಷತ್ ಭಾರತ್ ಗುರುವಾರ ನಟನ ಪ್ರತಿಕೃತಿ ಮತ್ತು ಚಿತ್ರದ ಪೋಸ್ಟರ್ ಗಳನ್ನು ದಹಿಸಿದೆ. ಅಲ್ಲದೆ ಚಿತ್ರಮಂದಿರಗಳ ಮುಂದೆ ಪ್ರದರ್ಶನ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ.
ಅಕ್ಷಯ್ ಕುಮಾರ್ ಅವರು ಓ ಮೈ ಗಾಡ್-2 ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದು,ಅಕ್ಷಯ್ ಕುಮಾರ್ ಕಪಾಳಮೋಕ್ಷ ಮಾಡುವವರಿಗೆ 10 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ. ಓ ಮೈ ಗಾಡ್-2 ಕೆಲವು ದೃಶ್ಯಗಳು ಶಿವನನ್ನು ಕೀಳಾಗಿ ಕಾಣುತ್ತವೆ. ಚಿತ್ರದಲ್ಲಿ ಕೊಳಕು ಕೊಳದ ನೀರಿನಲ್ಲಿ ಸ್ನಾನ ಮಾಡುತ್ತಾನೆ.
ಇವು ದೇವರ ಚಿತ್ರಣವನ್ನು ಹಾಳುಮಾಡುತ್ತವೆ. ಹೀಗಾಗಿ ಅಕ್ಷಯ್ ಕುಮಾರ್ ನಟನೆಯ ಓ ಮೈಗಾಡ್ ಸಿನಿಮಾವನ್ನು ಸೆನ್ಸಾರ್ ಮಂಡಳಿ ಮತ್ತು ಕೇಂದ್ರ ಸರ್ಕಾರ ಚಿತ್ರವನ್ನು ನಿಷೇಧಿಸಬೇಕು, ಇಲ್ಲದಿದ್ದರೆ ನಿರಂತರ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯ ಅಧ್ಯಕ್ಷ ಗೋವಿಂದ್ ಪರಾಶರ್ ಹೇಳಿದ್ದಾರೆ.
ದುರ್ಗಾ ವಾಹಿನಿಯ ಸ್ಥಾಪಕಿ ಸಾಧ್ವಿ ರಿತಂಬರಾ ಅವರು ಓ ಮೈಗಾಡ್-2 ಸಿನಿಮಾವನ್ನು ಟೀಕಿಸಿದ್ದು, ಹಿಂದೂ ಧರ್ಮದ ದಯೆಯೇ ಬಾಲಿವುಡ್ ಅನ್ನು ಮತ್ತೆ ಮತ್ತೆ ಇಂತಹ ಧೈರ್ಯವನ್ನು ಮಾಡಲು ಪ್ರೇರೇಪಿಸುತ್ತದೆ. ಹಿಂದೂ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮದ ಬಗ್ಗೆ ಪ್ರತಿಕ್ರಿಯಿಸಲು ಅವರು ಹೆದರುತ್ತಾರೆ. ಈ ಹಿಂದೆ ಬೆಳ್ಳಿ ಪರದೆಯ ಮೇಲೆ ಹಿಂದೂ ದೇವರುಗಳು ಮತ್ತು ದೇವತೆಗಳನ್ನು ಅವಮಾನಿಸಲಾಗಿದೆ. ಹಿಂದೂಗಳ ನಂಬಿಕೆಯೊಂದಿಗೆ ಅವರು ಆಟವಾಡಬಾರದು ಎಂದು ಹೇಳಿದರು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications