ದೆಹಲಿಯಲ್ಲಿ ಏಕಾಏಕಿ ಕುಸಿದ ಮದುವೆಗೆ ಹಾಕಲಾಗಿದ್ದ ಬೃಹತ್ ಪೆಂಡಾಲ್! ವೀಡಿಯೊ
ನವದೆಹಲಿ ಫೆಬ್ರವರಿ 17: ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ದೊಡ್ಡ ಅವಘಡವೊಂದು ಸಂಭವಿಸಿದೆ. ಮದುವೆಗೆ ಹಾಕಲಾಗಿದ್ದ ಬೃಹತ್ ಪೆಂಡಾಲ್ ಏಕಾಏಕಿ ಕುಸಿದು 12 ಮಂದಿ ಗಾಯಗೊಂಡಿದ್ದು ಇದರೊಳಗೆ ಇನ್ನಷ್ಟು ಜನ ಸಿಲುಕಿರುವ ಶಂಕೆ ಇದೆ.
ಕ್ರೀಡಾಂಗಣದ ಗೇಟ್ ನಂ.2ರ ಬಳಿಯ ಹುಲ್ಲುಹಾಸಿನಲ್ಲಿ ಮದುವೆಯ ಪೆಂಡಾಲ್ ಹಾಕಲಾಗಿತ್ತು. ಈ ವೇಳೆ ಒಂದು ಭಾಗ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿವೆ.
#WATCH | Police say more than 8 people have been injured after a temporary structure installed near Gate number 2 of Jawaharlal Nehru stadium collapsed pic.twitter.com/Dc5sZTwqyb
— ANI (@ANI) February 17, 2024
ಡಿಸಿಪಿ (ದಕ್ಷಿಣ) ಅಂಕಿತ್ ಚೌಹಾಣ್ ಮಾತನಾಡಿ, ''ಬೆಳಿಗ್ಗೆ 11.15 ರ ಸುಮಾರಿಗೆ ಪಂಂಡಲ್ / ಟೆಂಟ್ ಕುಸಿದು ಅದರ ಅಡಿಯಲ್ಲಿ ಕೆಲವು ಕಾರ್ಮಿಕರು ಸಿಲುಕಿರುವ ಸಾಧ್ಯತೆಯ ಬಗ್ಗೆ ಕರೆ ಸ್ವೀಕರಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡಕ್ಕೆ 25-30 ಕೂಲಿ ಕಾರ್ಮಿಕರು ಗಾಯಗೊಂಡಿರುವ ಬಗ್ಗೆ ತಿಳಿದು ಬಂದಿದೆ. ಇಲ್ಲಿ ಮದುವೆಗೆ ಟೆಂಟ್ ಹಾಕಲಾಗುತ್ತಿತ್ತು. ಸ್ಥಳೀಯರ ನೆರವಿನಿಂದ ಪೊಲೀಸರು ಸಿಲುಕಿದವರನ್ನು ಹೊರತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಲ್ಲಿಯವರೆಗೆ 25-30 ಜನರನ್ನು ರಕ್ಷಿಸಲಾಗಿದೆ. ಎನ್ಡಿಆರ್ಎಫ್ ತಂಡ ಅಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ'' ಎಂದರು.

ಕಲ್ಕಾಜಿ ದೇವಸ್ಥಾನದಲ್ಲಿಯೂ ಕೂಡ ಪಂಡಲ್ ಕುಸಿದು ಅವಘಡ
ಇತ್ತೀಚೆಗೆ ದೆಹಲಿಯ ಕಲ್ಕಾಜಿ ದೇವಸ್ಥಾನದಲ್ಲಿ ಪೆಂಡಾಲ್ ಕುಸಿದು ಅವಘಡ ಸಂಭವಿಸಿತ್ತು. ಕಲ್ಕಾಜಿ ದೇವಸ್ಥಾನದಲ್ಲಿ ಜಾಗರಣೆಗಾಗಿ ಹಾಕಲಾಗಿದ್ದ ಪೆಂಡಾಲ್ ಕುಸಿದು 45 ವರ್ಷದ ಮಹಿಳೆ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಜಾಗರಣೆಯಲ್ಲಿ ಗಾಯಕ ಬಿ ಪ್ರಾಕ್ ಕೂಡ ಇದ್ದರು. ಕಾರ್ಯಕ್ರಮಕ್ಕೆ ಯಾವುದೇ ಪೂರ್ವಾನುಮತಿ ನೀಡಿಲ್ಲ ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕಲ್ಕಾಜಿ ದೇವಸ್ಥಾನದ ಮಹಂತ್ ಆವರಣದಲ್ಲಿ ಜಾಗರಣೆಯಲ್ಲಿ ಆಯೋಜಿಸಲಾಗಿದ್ದು, ಸುಮಾರು 1600 ಮಂದಿ ಪಾಲ್ಗೊಂಡಿದ್ದರು. ಜಾಗರಣೆಯಲ್ಲಿ ಗಾಯಕ ಬಿ ಪ್ರಾಕ್ ಹಾಡಿದ್ದರು. ಮೂಲಗಳ ಪ್ರಕಾರ, ಘಟನೆಗೂ ಮುನ್ನ ಅವರು ಸ್ಥಳದಿಂದ ನಿರ್ಗಮಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications