ದೆಹಲಿಯಲ್ಲಿ ಏಕಾಏಕಿ ಕುಸಿದ ಮದುವೆಗೆ ಹಾಕಲಾಗಿದ್ದ ಬೃಹತ್ ಪೆಂಡಾಲ್! ವೀಡಿಯೊ
ನವದೆಹಲಿ ಫೆಬ್ರವರಿ 17: ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ದೊಡ್ಡ ಅವಘಡವೊಂದು ಸಂಭವಿಸಿದೆ. ಮದುವೆಗೆ ಹಾಕಲಾಗಿದ್ದ ಬೃಹತ್ ಪೆಂಡಾಲ್ ಏಕಾಏಕಿ ಕುಸಿದು 12 ಮಂದಿ ಗಾಯಗೊಂಡಿದ್ದು ಇದರೊಳಗೆ ಇನ್ನಷ್ಟು ಜನ ಸಿಲುಕಿರುವ ಶಂಕೆ ಇದೆ.
ಕ್ರೀಡಾಂಗಣದ ಗೇಟ್ ನಂ.2ರ ಬಳಿಯ ಹುಲ್ಲುಹಾಸಿನಲ್ಲಿ ಮದುವೆಯ ಪೆಂಡಾಲ್ ಹಾಕಲಾಗಿತ್ತು. ಈ ವೇಳೆ ಒಂದು ಭಾಗ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿವೆ.
#WATCH | Police say more than 8 people have been injured after a temporary structure installed near Gate number 2 of Jawaharlal Nehru stadium collapsed pic.twitter.com/Dc5sZTwqyb
— ANI (@ANI) February 17, 2024
ಡಿಸಿಪಿ (ದಕ್ಷಿಣ) ಅಂಕಿತ್ ಚೌಹಾಣ್ ಮಾತನಾಡಿ, ''ಬೆಳಿಗ್ಗೆ 11.15 ರ ಸುಮಾರಿಗೆ ಪಂಂಡಲ್ / ಟೆಂಟ್ ಕುಸಿದು ಅದರ ಅಡಿಯಲ್ಲಿ ಕೆಲವು ಕಾರ್ಮಿಕರು ಸಿಲುಕಿರುವ ಸಾಧ್ಯತೆಯ ಬಗ್ಗೆ ಕರೆ ಸ್ವೀಕರಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡಕ್ಕೆ 25-30 ಕೂಲಿ ಕಾರ್ಮಿಕರು ಗಾಯಗೊಂಡಿರುವ ಬಗ್ಗೆ ತಿಳಿದು ಬಂದಿದೆ. ಇಲ್ಲಿ ಮದುವೆಗೆ ಟೆಂಟ್ ಹಾಕಲಾಗುತ್ತಿತ್ತು. ಸ್ಥಳೀಯರ ನೆರವಿನಿಂದ ಪೊಲೀಸರು ಸಿಲುಕಿದವರನ್ನು ಹೊರತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಲ್ಲಿಯವರೆಗೆ 25-30 ಜನರನ್ನು ರಕ್ಷಿಸಲಾಗಿದೆ. ಎನ್ಡಿಆರ್ಎಫ್ ತಂಡ ಅಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ'' ಎಂದರು.

ಕಲ್ಕಾಜಿ ದೇವಸ್ಥಾನದಲ್ಲಿಯೂ ಕೂಡ ಪಂಡಲ್ ಕುಸಿದು ಅವಘಡ
ಇತ್ತೀಚೆಗೆ ದೆಹಲಿಯ ಕಲ್ಕಾಜಿ ದೇವಸ್ಥಾನದಲ್ಲಿ ಪೆಂಡಾಲ್ ಕುಸಿದು ಅವಘಡ ಸಂಭವಿಸಿತ್ತು. ಕಲ್ಕಾಜಿ ದೇವಸ್ಥಾನದಲ್ಲಿ ಜಾಗರಣೆಗಾಗಿ ಹಾಕಲಾಗಿದ್ದ ಪೆಂಡಾಲ್ ಕುಸಿದು 45 ವರ್ಷದ ಮಹಿಳೆ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಜಾಗರಣೆಯಲ್ಲಿ ಗಾಯಕ ಬಿ ಪ್ರಾಕ್ ಕೂಡ ಇದ್ದರು. ಕಾರ್ಯಕ್ರಮಕ್ಕೆ ಯಾವುದೇ ಪೂರ್ವಾನುಮತಿ ನೀಡಿಲ್ಲ ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕಲ್ಕಾಜಿ ದೇವಸ್ಥಾನದ ಮಹಂತ್ ಆವರಣದಲ್ಲಿ ಜಾಗರಣೆಯಲ್ಲಿ ಆಯೋಜಿಸಲಾಗಿದ್ದು, ಸುಮಾರು 1600 ಮಂದಿ ಪಾಲ್ಗೊಂಡಿದ್ದರು. ಜಾಗರಣೆಯಲ್ಲಿ ಗಾಯಕ ಬಿ ಪ್ರಾಕ್ ಹಾಡಿದ್ದರು. ಮೂಲಗಳ ಪ್ರಕಾರ, ಘಟನೆಗೂ ಮುನ್ನ ಅವರು ಸ್ಥಳದಿಂದ ನಿರ್ಗಮಿಸಿದ್ದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications