ಪತ್ನಿಯನ್ನು ಆಕೆಯ ಪ್ರಿಯತಮನೊಂದಿಗೆ ಮದುವೆ ಮಾಡಿಸಿದ ಪತಿ!
ಪಾಟ್ನಾ, ನವೆಂಬರ್ 16: ವ್ಯಕ್ತಿಯೊಬ್ಬ ತನ್ನ ಪತ್ನಿಯು ಆಕೆಯ ಪ್ರೀತಿಸುತ್ತಿದ್ದ ಪ್ರಿಯತಮನೊಂದಿಗೆ ಮದುವೆ ಮಾಡಿಕೊಟ್ಟಿರುವ ಘಟನೆ ಬಿಹಾರದ ಬೇಗುಸರಾಯ್ನ ದಹಿಯಾ ಗ್ರಾಮದಲ್ಲಿ ನಡೆದಿದೆ.
ಅಜಯ್ ಕುಮಾರ್ (24) ಮತ್ತು ಕಾಜಲ್ (22) 2018 ರಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಮೇಲ್ನೋಟಕ್ಕೆ ವೈವಾಹಿಕ ಬದ್ಧತೆಯ ಹೊರತಾಗಿಯೂ ಕಾಜಲ್ ಮನ್ಸೂರ್ಚಕ್ ಪೊಲೀಸ್ ಠಾಣೆ ವ್ಯಾಪ್ತಿಯ ಅಘಾಪುರ್ ಗ್ರಾಮದ ನಿವಾಸಿ ರಾಜ್ ಕುಮಾರ್ ಠಾಕೂರ್ ಅವರೊಂದಿಗೆ ಸಂಪರ್ಕವನ್ನು ಇಟ್ಟುಕೊಂಡಿದ್ದರು.

ಮದುವೆಯಾಗಿ ಕಾಜಲ್ ಎರಡು ಮಕ್ಕಳ ತಾಯಿಯಾದ ನಂತರವೂ ಅವರ ಮೊದಲಿನ ಪ್ರೇಮವು ರಹಸ್ಯವಾಗಿ ಮುಂದುವರೆದಿತ್ತು. ರಾಜ್ ಜೊತೆ ಕಾಜಲ್ ಪ್ರೀತಿಸುತ್ತಿರುವ ಬಗ್ಗೆ ಅಜಯ್ಗೆ ಗೊತ್ತಾಯಿತು. ಅವರ ಕುಟುಂಬ ಸದಸ್ಯರು ಅವರಿಬ್ಬರು ಒಟ್ಟಿಗೆ ಇರುವುದನ್ನು ಕಂಡ ನಂತರ ಘಟನೆ ಊರಿಗೆಲ್ಲಾ ಗೊತ್ತಾಯಿತು. ಆಗ ಅಜಯ್ ಕೋಪದಿಂದ ಪ್ರತಿಕ್ರಿಯಿಸುವ ಬದಲು ಆಘಾತಕ್ಕೊಳಗಾದರು. ನಂತರ ತನ್ನ ಪತ್ನಿ ಕಾಜಲ್ಳೊಂದಿಗೆ ಬೇರೆಯಾಗಲು ನಿರ್ಧರಿಸಿದರು.
ಅಜಯ್ ತನ್ನ ನಿರ್ಧಾರವನ್ನು ವಿವರಿಸಿದನು. ಇನ್ನೊಬ್ಬ ವ್ಯಕ್ತಿಯೊಂದಿಗೆ ತನ್ನ ಪತ್ನಿ ಸಂಬಂಧವನ್ನು ಮುಂದುವರೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಭಾವಿಸಿದನು. ಆಶ್ಚರ್ಯವೆಂಬಂತೆ ಅಜಯ್ ತನ್ನ ಪತ್ನಿ ಕಾಜಲ್ ಮತ್ತು ಆಕೆಯ ಪ್ರಿಯತಮ ರಾಜ್ ಕುಮಾರ್ ಠಾಕೂರ್ ನಡುವೆ ಮದುವೆಯನ್ನು ತಮ್ಮದೆ ಹಳ್ಳಿಯ ದೇವಸ್ಥಾನದಲ್ಲಿ ನಡೆಸಿಕೊಟ್ಟನು.
ಅಜಯ್ರ ಈ ನಿರ್ಧಾರದಿಂದ ಕಾಜಲ್ ಮತ್ತು ಆಕೆಯ ಕುಟುಂಬವನ್ನು ಸಮುದಾಯದಿಂದ ರಕ್ಷಿಸಿದ್ದು ಮಾತ್ರವಲ್ಲದೆ ಪರಿಸ್ಥಿತಿ ಬಗೆಹರಿಸುವ ಮಟ್ಟಕ್ಕೆ ಬಂದಿತು. ಪಂಚಾಯತ್ನ ಸರಪಂಚ್ ರಾಮ್ ಸಹರ್ ಸಾಹ್ನಿ ಈ ನಿರ್ಧಾರವು ಕಾಜಲ್ ಅವರ ಮದುವೆಗೆ ಸಂಬಂಧಿಸಿದ ಕೌಟುಂಬಿಕ ವಿಷಯವಾಗಿರುವುದರಿಂದ ಗ್ರಾಮಸ್ಥರು ಹೆಚ್ಚಿನ ವಿರೋಧವಿಲ್ಲದೆ ಅದನ್ನು ಒಪ್ಪಿಕೊಂಡರು.
ಪ್ರಿಯಕರನಿಗೆ ಪತ್ನಿ ಬಿಟ್ಟುಕೊಟ್ಟ ಉತ್ತರ ಪ್ರದೇಶದ ವ್ಯಕ್ತಿ
ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಬಿಹಾರದ ಆಕಾಶ್ ಶಾ ಎಂಬಾತನ ಜೊತೆ ತನ್ನ ಹೆಂಡತಿಯ ಸಂಬಂಧ ಹೊಂದಿರುವುದನ್ನು ಪತ್ತೆ ಹಚ್ಚಿದನು. ಆಗ ಅನಾವಶ್ಯಕ ಗಲಾಟೆ ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಆಕಾಶ್ಗೆ ಮದುವೆಯಾಗಲು ಸಮ್ಮತಿಸಿದನು.
ವಿಷಯ ತಿಳಿದ ಸ್ಥಳೀಯರು ಮಧ್ಯ ಪ್ರವೇಶಿಸಿ ಆಕಾಶ್ ಮೇಲೆ ಹಲ್ಲೆ ನಡೆಸಿದರಉ. ಹಲ್ಲೆಯ ಹೊರತಾಗಿಯೂ ಪತಿವರ್ಯ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ತನ್ನ ಹೆಂಡತಿ ಮತ್ತು ಅವಳ ಗೆಳೆಯನನ್ನು ದೇವಸ್ಥಾನಕ್ಕೆ ಕರೆದೊಯ್ದನು. ಅಲ್ಲಿ ಆಕಾಶ್ ಬಂದ ಅದೇ ಮೋಟಾರ್ಸೈಕಲ್ನಲ್ಲಿ ಇಬ್ಬರನ್ನೂ ಒಟ್ಟಿಗೆ ಕಳುಹಿಸಿ ಮದುವೆಗೆ ಅವಕಾಶ ಮಾಡಿಕೊಟ್ಟನು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications