ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಇದ್ದ ವೇದಿಕೆಗೆ ಮಗುವನ್ನು ಎಸೆದ ಕಾರ್ಮಿಕ: ನೋವಿನ ಕಥೆಯಿದು
ಭೋಪಾಲ್, ಮೇ. 16: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಾಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಕಾರ್ಮಿಕರೊಬ್ಬರು ತನ್ನ ಒಂದು ವರ್ಷದ ಮಗುವನ್ನು ವೇದಿಕೆಯ ಮೇಲೆ ಎಸೆದಿರುವ ಘಟನೆ ವರದಿಯಾಗಿದೆ. ಇದು ಎಲ್ಲರ ಗಮನ ಸೆಳೆದಿದ್ದು, ನೆರೆದಿದ್ದವರಲ್ಲಿ ಭಾರಿ ಗೊಂದಲ ಉಂಟುಮಾಡಿದೆ.
ಹೌದು, ಮಗುವಿನ ಜೀವ ಉಳಿಸಲು ತಂದೆ ತನ್ನದೆ ಒಂದು ವರ್ಷದ ಮಗುವನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾತನಾಡುತ್ತಿದ್ದ ವೇದಿಕೆ ಮೇಲೆ ಎಸೆದಿದ್ದಾರೆ. ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿರುವ ಮುಖೇಶ್ ಪಟೇಲ್ ತಮ್ಮ ಸಂಕಷ್ಟದ ಬಗ್ಗೆ ಸಿಎಂ ಗಮನ ಸೆಳೆಯಬೇಕೆಂದು ಈ ಕೆಲಸ ಮಾಡಿದ್ದಾರೆ.

ಮಧ್ಯಪ್ರದೇಶದ ಸಾಗರದಲ್ಲಿ ನಡೆಯುತ್ತಿದ್ದ ಕುಶಾವಾಹ ಮತ್ತು ಜಾಟ್ ಸಮುದಾಯಗಳ ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖೇಶ್ ಪಟೇಲ್ ಅವರ ಈ ಕೆಲಸ ಸಾಕಷ್ಟು ಸಂಚಲನ ಮೂಡಿಸಿದ್ದು, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಗಮನವನ್ನೂ ಸೆಳೆದಿತ್ತು. ಜನರ ಗುಂಪಿನ ನಡುವೆ ಒಂದು ವರ್ಷದ ಮಗು ವೇದಿಕೆಯಿಂದ ಒಂದು ಅಡಿ ದೂರದಲ್ಲಿ ಬಂದು ಬಿದ್ದಿದೆ. ಕಾರ್ಯಕ್ರಮದಲ್ಲಿದ್ದ ಭದ್ರತಾ ಸಿಬ್ಬಂದಿ ಕೂಡಲೇ ಮಗುವನ್ನು ತಾಯಿಗೆ ಒಪ್ಪಿಸಿದ್ದಾರೆ.
ಮುಖೇಶ್ ಪಟೇಲ್ ಬಡವರಾಗಿದ್ದು, ತನ್ನ ಮಗುವಿನ ಹೃದಯದಲ್ಲಿ ರಂಧ್ರವಿದೆ. ಶಸ್ತ್ರಚಿಕಿತ್ಸೆ ಮಾಡಿಸಲು ಸಾಧ್ಯವಿಲ್ಲವಾದ್ದರಿಂದ ಸಹಾಯಕ್ಕಾಗಿ ಸಿಎಂ ಕಚೇರಿಗೆ, ಅಧಿಕಾರಿಗಳ ಬಳಿಗೆ ಹೋಗುತ್ತಿದ್ದರೂ ಯಾರು ಸಹಾಯ ಮಾಡುತ್ತಿಲ್ಲ ಎಂದಿದ್ದಾರೆ.. ಹೀಗಾಗಿ ಮುಕ್ಯಮಂತ್ರಿಗಳ ಗಮನ ಸೆಳೆಯಲು ಮಗುವನ್ನು ವೇದಿಕೆಗೆ ಎಸೆದಿರುವುದಾಗಿ ತಿಳಿಸಿದ್ದಾರೆ.

ಮುಖೇಶ್ ಪಟೇಲ್ ಸಾಗರದ ಕೆಸ್ಲಿ ತಾಲೂಕಿನ ಸಹಜ್ಪುರ ಗ್ರಾಮದ ನಿವಾಸಿ. ಅವರು ತಮ್ಮ ಪತ್ನಿ ನೇಹಾ ಮತ್ತು ಅವರ ಒಂದು ವರ್ಷದ ಮಗನೊಂದಿಗೆ ವಾಸಿಸುತ್ತಿದ್ದಾರೆ. ಘಟನೆಗೆ ಸಾಕ್ಷಿಯಾದ ಮುಖ್ಯಮಂತ್ರಿ ಬಡ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಪ್ರಕರಣವನ್ನು ಸಿಎಂ ಕಚೇರಿಗೆ ಕಳುಹಿಸುವಂತೆ ಜಿಲ್ಲಾಧಿಕಾರಿ ದೀಪಕ್ ಆರ್ಯ ಅವರಿಗೆ ಶಿವರಾಜ್ ಸಿಂಗ್ ಚೌಹಾಣ್ ಸೂಚನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮುಖೇಶ್ ಪಟೇಲ್, ತಮ್ಮ ಮಗುವಿಗೆ 3 ತಿಂಗಳಿದ್ದಾಗ ಹೃದಯದಲ್ಲಿ ರಂಧ್ರವಿದೆ ಎಂಬುದನ್ನು ವೈದ್ಯರು ಪತ್ತೆ ಮಾಡಿದ್ದಾರೆ. ವೆಚ್ಚ ಭರಿಸಲು ಸಾಧ್ಯವಾಗದಿದ್ದರೂ ಮಗನ ಚಿಕಿತ್ಸೆಗಾಗಿ ಇಲ್ಲಿಯವರೆಗೆ 4 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. "ನಮ್ಮ ಮಗುವಿಗೆ ಈಗ ಒಂದು ವರ್ಷ. ವೈದ್ಯರು ಶಸ್ತ್ರಚಿಕಿತ್ಸೆ ಮಾಡಿಸುವಂತೆ ಹೇಳಿದ್ದಾರೆ. ಆದರೆ 3.50 ಲಕ್ಷ ರೂ. ವೆಚ್ಚವಾಗುತ್ತದೆ ಎಂದು ಹೇಳಿದ್ದು, ಅಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸಲು ನಮಗೆ ಸಾಧ್ಯವಿಲ್ಲ" ಎಂದಿದ್ದಾರೆ.
"ನಮ್ಮ ಮಗುವಿಗೆ ಚಿಕಿತ್ಸೆ ಬೇಕು. ಆದರೆ ಯಾರೂ ನಮಗೆ ಸಹಾಯ ಮಾಡುತ್ತಿಲ್ಲ. ನಮಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಸಹ ಅವಕಾಶ ನೀಡಲಿಲ್ಲ, ಅವರನ್ನು ತಲುಪಲು ಪೊಲೀಸರು ನಮಗೆ ಸಹಾಯ ಮಾಡಲಿಲ್ಲ. ಆದ್ದರಿಂದ ನಾನು ನನ್ನ ಮಗುವನ್ನು ವೇದಿಕೆಯ ಮೇಲೆ ಎಸೆದಿದ್ದೇನೆ. ಈಗ ಅಧಿಕಾರಿಗಳು ವಿಷಯದ ಬಗ್ಗೆ ಗಮನ ಹರಿಸಿದ್ದಾರೆ. ನಾಳೆ ಸಿಎಂ ಅವರನ್ನು ಭೇಟಿಯಾಗುವಂತೆ ನಮಗೆ ತಿಳಿಸಿದ್ದಾರೆ" ಎಂದು ಮುಖೇಶ್ ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications