ಮುತ್ತನ್ನು ತೂರಿಬಿಡುತ್ತಿದ್ದ ಅಸಭ್ಯನ ವಿರುದ್ಧ ಗೃಹಿಣಿ ದೂರು
ಬೆಂಗಳೂರು, ಜೂನ್ 07 : ಪಕ್ಕದ ಮನೆಯ 31ರ ಹರೆಯದ ಆಂಟಿ ಕಂಡೊಡನೆ ಮುತ್ತನ್ನು ತೂರಿಬಿಡುತ್ತಿದ್ದ, ಅಸಹ್ಯಕರ ಸಂಜ್ಞೆಯನ್ನು ಮಾಡಿ ಲೈಂಗಿಕವಾಗಿ ಮತ್ತು ಮಾನಸಿಕವಾಗಿ ಹಿಂಸಿಸುತ್ತಿದ್ದ ವ್ಯಕ್ತಿಯ ವಿರುದ್ಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಇದು ಒಂದೆರಡು ಬಾರಿ ನಡೆದ ಘಟನೆಯಲ್ಲ. ಕಳೆದ 6 ತಿಂಗಳಿನಿಂದ ಆತ ಗೃಹಿಣಿಗೆ ಇದೇ ರೀತಿ ಚಿತ್ರಹಿಂಸೆ ನೀಡುತ್ತಿದ್ದ. ಕೆಲ ಸಂಜ್ಞೆಯ ಮೂಲಕ ಲೈಂಗಿಕ ಕೋರಿಕೆಯನ್ನೂ ಮುಂದಿಡುತ್ತಿದ್ದ ಎಂದು ಮದುವೆಯಾಗಿ ಒಂದು ಮಗುವಿರುವ ಮಹಿಳೆ ದೂರಿದ್ದಾರೆ.
ಹಲವಾರು ಬಾರಿ ತನ್ನ ಮನೆಯಿಂದಲೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದಿರುವ ಅವರು, ತನ್ನ ಮಗನನ್ನು ಶಾಲೆಯಿಂದ ಕರೆದುಕೊಂಡು ಬರಲೆಂದು ಮನೆಯಿಂದ ತೆರಳುತ್ತಿದ್ದಾಗ ಮತ್ತೆ ಫ್ಲೈಯಿಂಗ್ ಕಿಸ್ ನೀಡಿದ್ದಾನೆ.

ಆತನ ಚೇಷ್ಟೆಯಿಂದ ಬೇಸತ್ತ ಮಹಿಳೆ, ಇದನ್ನೆಲ್ಲ ತನ್ನ ಗಂಡನಿಗೆ ತಿಳಿಸಿದ್ದಾರಲ್ಲದೆ ಹನುಮಂತ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಹನುಮಂತ ನಗರ ಪೊಲೀಸರು ಆ ವ್ಯಕ್ತಿಯ ವಿರುದ್ಧ ಕೇಸನ್ನು ದಾಖಲಿಸಿಕೊಂಡಿದ್ದು, ಸ್ಟೇಷನ್ನಿಗೆ ಬಂದು ಹೇಳಿಕೆ ನೀಡಬೇಕೆಂದು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications