ಇದಪ್ಪಾ ಸುದ್ದಿ: ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಸಾಲ ಪಡೆದ ಭೂಪ!
ನವದೆಹಲಿ, ಫೆಬ್ರವರಿ 17: ನೀಲಿ ಸಿನಿಮಾಗಳಲ್ಲೇ ಸಖತ್ ಸದ್ದು ಮಾಡುತ್ತಾ ಬಾಲಿವುಡ್ ಅಂಗಳಕ್ಕೆ ಲಗ್ಗೆಯಿಟ್ಟ ಸ್ಟಾರ್ ನಟಿ ಸನ್ನಿ ಲಿಯೋನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಂಥ ಸ್ಟಾರ್ ನಟಿಯ ಪ್ಯಾನ್ ಕಾರ್ಡ್ ಅನ್ನು ಬಳಸಿಕೊಂಡು ವ್ಯಕ್ತಿಯೊಬ್ಬ ಎರಡು ಸಾವಿರ ರೂಪಾಯಿ ಸಾಲ ಪಡೆದುಕೊಂಡಿದ್ದಾನೆ. ಈ ಕುರಿತು ಸ್ವತಃ ನಟಿ ಸನ್ನಿ ಲಿಯೋನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
"ನನಗೇ ಈ ರೀತಿ ಆಗಿ ಬಿಟ್ಟಿದೆ. ಹುಚ್ಚರು. ಕೆಲವು ಮೂರ್ಖರು 2000 ರೂಪಾಯಿ ಸಾಲವನ್ನು ತೆಗೆದುಕೊಳ್ಳಲು ನನ್ನ ಪ್ಯಾನ್ ಕಾರ್ಡ್ ಅನ್ನು ಬಳಸಿಕೊಂಡಿದ್ದಾರೆ. ಇದರಿಂದ ನನ್ನ CIBIL ಸ್ಕೋರ್ (SIC) ಅನ್ನು FCK ಮಾಡಿದ್ದಾರೆ", ಎಂದು ಸನ್ನಿ ಲಿಯೋನ್ ತಮ್ಮ ಕ್ರೆಡಿಟ್ ಸ್ಕೋರ್ ಅನ್ನು ಉಲ್ಲೇಖಿಸಿದ್ದಾರೆ.
ಸ್ಟಾರ್ ನಟ ಮತ್ತು ನಟಿಯರು ತಮ್ಮ ಆಪ್ತರ ಅಂತಾ ಹೇಳಿಕೊಂಡು ವಂಚಿಸುತ್ತಿದ್ದ ಕಾಲ ಹೋಗಿದೆ. ಆನ್ ಲೈನ್ ಮೂಲಕವೇ ಬ್ಯಾಂಕ್ ಖಾತೆಗೆ ಕನ್ನ ಹಾಕುವವರ ಸಂಖ್ಯೆ ಹೆಚ್ಚಾಗಿದೆ. ಇಂಥವರ ಮಧ್ಯೆ ಇಲ್ಲೊಬ್ಬ ಭೂಪ ಡಿಫರೆಂಟ್ ಆಗಿ ಸುದ್ದಿ ಆಗಿದ್ದಾರೆ. ಜಸ್ಟ್ 2000 ರೂಪಾಯಿ ಸಾಲ ಪಡೆಯುವುದಕ್ಕೆ ಸನ್ನಿ ಲಿಯೋನ್ ಹೆಸರನ್ನು ಬಳಸಿಕೊಂಡಿದ್ದಾನೆ.

ಧಣಿ ಸ್ಟಾಕ್ಸ್ ಲಿಮಿಟೆಡ್ ಮೂಲಕ ಸಾಲ:
ಬಾಲಿವುಡ್ ನಟಿ ಸನ್ನಿ ಲಿಯೋನ್ ಪ್ಯಾನ್ ಕಾರ್ಡ್ ಅನ್ನು ಬಳಸಿಕೊಂಡಿರುವ ಆರೋಪಿ ಧಣಿ ಸ್ಟಾಕ್ಸ್ ಲಿಮಿಟೆಡ್ ಎಂಬ ಫೈನ್ಯಾನ್ಸ್ ಸಂಸ್ಥೆಯ ಮೂಲಕ 2 ಸಾವಿರ ರೂಪಾಯಿ ಸಾಲವನ್ನು ಪಡೆದುಕೊಂಡಿದ್ದಾನೆ. ಈ ಕುರಿತು ವಂಚನೆ ನಡೆದಿರುವ ಬಗ್ಗೆ ನಟಿಯು ಟ್ವೀಟ್ ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಸಂಸ್ಥೆಯು ಸಮಸ್ಯೆಯನ್ನು ಬಗೆಹರಿಸಿದೆ. ಈ ಕುರಿತು ಸಂಸ್ಥೆಗೆ ಸನ್ನಿ ಲಿಯೋನ್ ಧನ್ಯವಾದ ತಿಳಿಸಿದ್ದಾರೆ.
ತಪ್ಪು ಸರಿಪಡಿಸಿದ ಸಂಸ್ಥೆಗೆ ಸನ್ನಿ ಲಿಯೋನ್ ಧನ್ಯವಾದ:
"ಇದನ್ನು ತ್ವರಿತವಾಗಿ ಸರಿಪಡಿಸಿದ್ದಕ್ಕಾಗಿ @IVLSecurities @ibhomeloans @CIBIL_Official ಅವರಿಗೆ ಧನ್ಯವಾದಗಳು. ಇಂಥ ಸಮಸ್ಯೆಗಳು ಮತ್ತೆ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಿ. ಭವಿಷ್ಯದಲ್ಲಿ ಇಂಥ ಸಮಸ್ಯೆಗಳನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೀರಿ ಎಂದು ನಾನು ತಿಳಿದುಕೊಂಡಿದ್ದೇನೆ. ಕೆಟ್ಟ CIBIL ಜೊತೆಗೆ ವ್ಯವಹರಿಸಲು ಯಾರೊಬ್ಬರೂ ಬಯಸುವುದಿಲ್ಲ," ಎಂದು ಸನ್ನಿ ಲಿಯೋನ್ ತಮ್ಮ ಎರಡನೇ ಟ್ವೀಟ್ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications