ವ್ಯಕ್ತಿಯೊರ್ವನ ಮೇಲೆ 59 ಮಹಿಳೆಯರಿಂದ ಹಲ್ಲೆ, ಏಕೆ ಗೊತ್ತಾ?
ತಿರುವನಂತಪುರಂ, ಜನವರಿ 7: ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ 59 ಮಹಿಳೆಯರ ಗುಂಪೊದು ವ್ಯಕ್ತಿಯೊಬ್ಬನ ಮೇಲೆ ಮಹಿಳೆಯೊಬ್ಬರ ಮಾರ್ಫ್ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿಬಿಟ್ಟಿದ್ದಾನೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಪ್ರಕರಣ ಎಲ್ಲಾ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಸಂಜೆ ಕಾರಿನಲ್ಲಿ ಇತರ ಐವರೊಂದಿಗೆ ಶಾಜಿ ಎಂಬಾತನು ಪ್ರಯಾಣಿಸುತ್ತಿದ್ದಾಗ ಆರೋಪಿಗಳು, ಇಲ್ಲಿನ ಆಧ್ಯಾತ್ಮಿಕ ವಿಶ್ರಾಂತಿ ಕೇಂದ್ರದ ಎಲ್ಲಾ ಭಕ್ತರು ಶಾಜಿ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಲ್ಲಿ ಓರ್ವ ಮಹಿಳೆ ವ್ಯಕ್ತಿಯನ್ನು ಎಳೆದೊಯ್ದು ಮನಬಂದಂತೆ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೆಲವು ಮಹಿಳೆಯರು ಆತನ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ತ್ರಿಶೂರ್ ಸಮೀಪದ ಮುರಿಯಾಡ್ ಮೂಲದ ಶಾಜಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವ್ಯಕ್ತಿ ಮತ್ತು ಅವರ ಕುಟುಂಬ ಇತ್ತೀಚೆಗೆ ಆಧ್ಯಾತ್ಮಿಕ ವಿಶ್ರಾಂತಿ ಕೇಂದ್ರದೊಂದಿಗಿನ ಅವರ ಸಂಬಂಧವನ್ನು ಅಂತ್ಯಗೊಳಿಸಿದೆ ಎಂದು ಅವರು ಹೇಳಿದರು.
ಆಧ್ಯಾತ್ಮಿಕ ಕೇಂದ್ರದ ಕ್ಯಾಂಪಸ್ನ ಹೊರಗೆ ಘಟನೆ ನಡೆದಾಗ ಅವರ ಜೊತೆಗೆ ಅವರ ಕುಟುಂಬದ ಇತರ ಐವರು ಸಹ ಕಾರಿನಲ್ಲಿ ಇದ್ದರು. ದಾಳಿಯಲ್ಲಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ವಾಹನದ ಗಾಜು ಜಖಂಗೊಂಡಿದೆ. ಶಾಜಿಯ ದೂರಿನ ಪ್ರಕಾರ, ಈ ಆಧ್ಯಾತ್ಮಿಕ ಕೇಂದ್ರಕ್ಕೆ ಸಂಬಂಧಿಸಿದ ಮಹಿಳೆಯ ಮಾರ್ಫ್ ಮಾಡಿದ ಚಿತ್ರಗಳನ್ನು ಅವನು ಹರಿಯ ಬಿಟ್ಟಿದ್ದಾನೆ ಎಂಬ ತಪ್ಪು ತಿಳುವಳಿಕೆಯಿಂದ ಮಹಿಳೆಯರು ಅವನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ 307, 143, 147, 144, 128 ಸೇರಿದಂತೆ ಐಪಿಎಸ್ನ ವಿವಿಧ ಸೆಕ್ಷನ್ಗಳು ದಾಖಲಾಗಿವೆ. ಈಗಾಗಲೇ 11 ಆರೋಪಿ ಮಹಿಳೆಯರನ್ನು ರಿಮಾಂಡ್ಗೆ ಒಳಪಡಿಸಲಾಗಿದ್ದು, ವಿಯ್ಯೂರಿನ ಮಹಿಳಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ತನಿಖೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications