Get Updates
Get notified of breaking news, exclusive insights, and must-see stories!

5 ಮಕ್ಕಳಿದ್ದು ಯುಪಿ ಸರ್ಕಾರಕ್ಕೆ 1.5 ಕೋಟಿ ಆಸ್ತಿ ಬರೆದುಕೊಟ್ಟ ವ್ಯಕ್ತಿ

ತಮ್ಮ ಐದು ಜನ ಮಕ್ಕಳು ಯಾರೂ ಸಹ ತಮ್ಮ ತಮ್ಮ ಕೊನೆಯ ಕಾಲದಲ್ಲಿ ನೋಡಿಕೊಳ್ಳಲು ಮುಂದೆ ಬಾರದಿದ್ದಾಗ ತಮ್ಮ 1.5 ಕೋಟಿ ಮೌಲ್ಯದ ಆಸ್ತಿಯನ್ನು ಉತ್ತರಪ್ರದೇಶದ ಸರ್ಕಾರಕ್ಕೆ ಬರೆದುಕೊಟ್ಟಿದ್ದಾರೆ.

ಲಕ್ನೋ, ಮಾರ್ಚ್‌ 6: 85ರ ಹರೆಯದ ವ್ಯಕ್ತಿಯೊಬ್ಬರು ತಮ್ಮ ಮಕ್ಕಳು ನೋಡಿಕೊಳ್ಳದೆ ಕೈಬಿಟ್ಟಿದ್ದಕ್ಕೆ ಮನನೊಂದು ತನ್ನ 1.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ವಿಲ್ ಬರೆದಿರುವ ಘಟನೆ ನಡೆದಿದೆ.

ನಾಥು ಸಿಂಗ್ ಎಂಬುವವರು ತಮ್ಮ ಐದು ಜನ ಮಕ್ಕಳು ಯಾರೂ ಸಹ ತಮ್ಮ ತಮ್ಮ ಕೊನೆಯ ಕಾಲದಲ್ಲಿ ನೋಡಿಕೊಳ್ಳಲು ಮುಂದೆ ಬಾರದಿದ್ದಾಗ ತಮ್ಮ 1.5 ಕೋಟಿ ಮೌಲ್ಯದ ಆಸ್ತಿಯನ್ನು ಉತ್ತರಪ್ರದೇಶದ ಸರ್ಕಾರಕ್ಕೆ ಬರೆದುಕೊಟ್ಟಿದ್ದಾರೆ. ಅಲ್ಲದೆ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ. ಕೊನೆಗೆ ಅವರ ಮಗ ಮತ್ತು ನಾಲ್ವರು ಪುತ್ರಿಯರನ್ನು ಅವರ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳಲು ಬಿಡಬಾರದು ಎಂದು ಹೇಳಿದ್ದಾರೆ.

A man who has 5 children and has written off 1.5 crore property to the UP government

ಮುಜಾಫರ್‌ನಗರದ ನಿವಾಸಿಯಾಗಿರುವ ನಾಥು ಸಿಂಗ್ 1.5 ಕೋಟಿ ರೂಪಾಯಿ ಮೌಲ್ಯದ ತಮ್ಮ ಮನೆ ಮತ್ತು ಜಮೀನು ಹೊಂದಿದ್ದಾರೆ. ಅವರಿಗೆ ಒಬ್ಬ ಮಗನಿದ್ದಾನೆ. ಅವರು ಶಾಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದು, ಸಹರಾನ್‌ಪುರದಲ್ಲಿ ವಾಸಿಸುತ್ತಿದ್ದಾರೆ. ನಾಥು ಸಿಂಗ್‌ಗೆ ನಾಲ್ಕು ಹೆಣ್ಣುಮಕ್ಕಳಿದ್ದು ಅವರು ಎಲ್ಲರೂ ವಿವಾಹವಾಗಿದ್ದಾರೆ.

ಪತ್ನಿಯ ಸಾವಿನ ನಂತರ ವೃದ್ಧ ಒಂಟಿ ಜೀವನ ನಡೆಸುತ್ತಿದ್ದಾರೆ. ಸುಮಾರು ಏಳು ತಿಂಗಳ ಹಿಂದೆ ಅವರು ತಮ್ಮ ಗ್ರಾಮದ ವೃದ್ಧಾಶ್ರಮಕ್ಕೆ ತೆರಳಿದ್ದಾರೆ. 85 ವರ್ಷ ವಯಸ್ಸಿನ ಅವರು ತಮ್ಮ ದೊಡ್ಡ ಕುಟುಂಬದ ಯಾರೊಬ್ಬರು ತಮ್ಮನ್ನು ಭೇಟಿಯಾಗಲು ಬರದ ಕಾರಣ ಅತೀವವಾಗಿ ನೊಂದುಕೊಂಡಿದ್ದರು. ಇದರಿಂದ ಬೇಸತ್ತು ತಮ್ಮ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ವಿಲ್ ಮಾಡಿದರು. ಅವರ ಮರಣದ ನಂತರ ತಮ್ಮ ಮನೆ ಜಾಗದಲ್ಲಿ ಆಸ್ಪತ್ರೆ ಅಥವಾ ಶಾಲೆಯನ್ನು ನಿರ್ಮಿಸುವಂತೆ ಕೇಳಿಕೊಂಡಿದ್ದಾರೆ.

ಈ ವಯಸ್ಸಿನಲ್ಲಿ ನಾನು ನನ್ನ ಮಗ ಮತ್ತು ಸೊಸೆಯೊಂದಿಗೆ ವಾಸಿಸಬೇಕಾಗಿತ್ತು. ಆದರೆ ಅವರು ನನ್ನನ್ನು ಚೆನ್ನಾಗಿ ನಡೆಸಿಕೊಳ್ಳುತ್ತಿಲ್ಲ. ಆದ್ದರಿಂದ ನಾನು ಆಸ್ತಿಯನ್ನು ಸರ್ಕಾರಕ್ಕೆ ಬರೆಯಲು ನನ್ನ ಮನಸ್ಸು ಮಾಡಿದೆ. ಸಂಶೋಧನೆ ಮತ್ತು ಶೈಕ್ಷಣಿಕ ಕಾರ್ಯಗಳಲ್ಲಿ ಬಳಸಲು ತನ್ನ ದೇಹವನ್ನು ದಾನ ಮಾಡಲು ನಿರ್ಧರಿಸಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಸ್ಥಳೀಯ ಸಬ್-ರಿಜಿಸ್ಟ್ರಾರ್ ಅವರು ನಾಥು ಸಿಂಗ್ ಅವರ ಅಫಿಡವಿಟ್ ಅನ್ನು ಸ್ವೀಕರಿಸಿದ್ದಾರೆ ಮತ್ತು ಅವರ ಮರಣದ ನಂತರ ಇದು ಜಾರಿಗೆ ಬರಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವೃದ್ಧಾಶ್ರಮದ ಮ್ಯಾನೇಜರ್ ರೇಖಾ ಸಿಂಗ್, ಆರು ತಿಂಗಳ ಹಿಂದೆ ಅವರು ಅಲ್ಲಿ ಉಳಿಯಲು ಪ್ರಾರಂಭಿಸಿದಾಗಿನಿಂದ ಯಾರೂ ಅವರನ್ನು ಭೇಟಿ ಮಾಡಿಲ್ಲ. ನಾಥು ಸಿಂಗ್ ಅವರ ಕುಟುಂಬ ಸದಸ್ಯರು ಇನ್ನೂ ಮುಂದೆ ಬಂದಿಲ್ಲವಾದ್ದರಿಂದ ಅವರು ತುಂಬಾ ಅಸಮಾಧಾನಗೊಂಡಿದ್ದಾರೆ. ಆದ್ದರಿಂದ ರಾಜ್ಯಕ್ಕೆ ತನ್ನ ಆಸ್ತಿಯನ್ನು ಇಚ್ಛಿಸುವಲ್ಲಿ ಅಚಲವಾಗಿದೆ ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+