Bihar Results: ಬಿಹಾರ ಇತಿಹಾಸದಲ್ಲೇ ಈ ಬಾರಿ ಹೊಸ ಮ್ಯಾಜಿಕ್ ?
Bihar Results: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದೆ. ಪ್ರಾರಂಭಿಕ ಹಂತದಲ್ಲಿ ಎನ್ಡಿಎ ಭರ್ಜರಿ ಮುನ್ನಡೆ ಕಾಯ್ದು ಕೊಂಡಿದೆ. ಆದರೆ ಬಿಹಾರದ ರಾಜಕೀಯವೇ ರಣಕೋಚಕವಾಗಿದೆ. ಬಿಹಾರದಲ್ಲಿ 1995ರಿಂದ ಇಲ್ಲಿಯ ವರೆಗೆ ಯಾವುದೇ ಒಂದು ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೇರಿಲ್ಲ. ಬಿಹಾರ ರಾಜಕೀಯದಲ್ಲಿ ಹಲವು ಬದಲಾವಣೆಗಳು ಆಗಿವೆ. ಪ್ರಮುಖವಾಗಿ ಜೆಪಿ ಆಂದೋಲನವು ಇದಕ್ಕೊಂದು ಹೊಸ ಭಾಷ್ಯಾವನ್ನೇ ಬರೆದಿದೆ. ಇದಾದ ಮೇಲೆ ಕಾಂಗ್ರೆಸ್ನ ಬಲ ಇಲ್ಲಿ ಕುಸಿಯುತ್ತಾ ಬಂತು. ಅಲ್ಲದೇ ಪ್ರಾದೇಶಿಕ ಮತ್ತು ಸಣ್ಣ ಪಕ್ಷಗಳು ಹೆಚ್ಚಾದವು.
ಈ ಬಾರಿ ಬಿಹಾರದಲ್ಲಿ ದೊಡ್ಡ ಪಕ್ಷಗಳೊಂದಿಗೆ ಸಣ್ಣ ಪಕ್ಷಗಳು ಸಹ ಸೆಣಸಿವೆ. 8ಕ್ಕೂ ಹೆಚ್ಚು ಸಣ್ಣ ಪಕ್ಷಗಳು ಚುನಾವಣಾ ಕಣದಲ್ಲಿ ಗುರುತಿಸಿಕೊಂಡಿವೆ. ಯಾದವೀ ಕಲಹ ಆರ್ಜೆಡಿಗೆ ಬಿಸಿ ತುಪ್ಪವಾಗಿ ಬದಲಾಗಿತ್ತು. ಮಹಾಘಟಬಂಧನ್ನಲ್ಲಿನ ಬಿರುಕೇ ಎನ್ಡಿಎಗೆ ಭಾರೀ ಬಲವನ್ನು ತಂದುಕೊಟ್ಟಿದೆ. ಬಿಹಾರದಲ್ಲಿ ಜನತಾದಳ (ಸಂಯುಕ್ತ)ಕ್ಕೆ ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಈಗ ಅಧಿಕಾರದಲ್ಲಿದೆ. ಬಿಹಾರದಲ್ಲಿ ಈ ಬಾರಿ ಭಾರೀ ಆಡಳಿತ ವಿರೋಧಿ ಅಲೆ ಇತ್ತು. ಇದನ್ನು ತಪ್ಪಿಸುವುದಕ್ಕೆ ಎನ್ಡಿಎ ಹಲವು ಮಾಸ್ಟರ್ ಪ್ಲ್ಯಾನ್ ಮಾಡಿತ್ತು. ಅದರಲ್ಲಿ ಪ್ರಮುಖವಾಗಿ ಬಿಹಾರದ ಮಹಿಳೆಯರ ಖಾತೆಗೆ ತಲಾ 10,000 ಸಾವಿರ ರೂಪಾಯಿ ಹಾಕುವುದು ಸಹ ಒಂದಾಗಿದೆ.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಎಸ್ಐಆರ್ ವಿರೋಧ, ವೋಟ್ ಚೋರಿ ಅಭಿಯಾನ ಭಾರೀ ಸದ್ದು ಮಾಡಿತ್ತು. ಅಲ್ಲದೇ ಬಿಹಾರದ ಆಡಳಿತದ ಲೋಪಗಳು, ಮೇಲ್ಸೇತುವೆಗಳ ಕುಸಿತ ಹಾಗೂ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳು ಹೆಚ್ಚು ಚರ್ಚೆ ಆಗಿವೆ. ಪ್ರಭಾವಿಗಳಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡಲಾಗಿದೆ ಎನ್ನುವ ಆರೋಪವು ರಾಷ್ಟ್ರದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications