ಕುಡಿದು ವಾಹನ ಚಾಲಾಯಿಸಿ ನಾಲ್ವರಿಗೆ ಗುದ್ದಿಸಿದ ಪೊಲೀಸ್!
ಜೇಮ್ಶೆಡ್ಪುರ, ನವೆಂಬರ್ 8: ಪೊಲೀಸ್ ಸಿಬ್ಬಂದಿಯೊಬ್ಬರು ಮದ್ಯ ಕುಡಿದು ವಾಹನ ಚಲಾಯಿಸಿದ್ದಲ್ಲದೆ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ಗುದ್ದಿಸಿ ನಾಲ್ವರಿಗೆ ಗಾಯ ಮಾಡಿರುವ ಘಟನೆ ನಡೆದಿದೆ.
ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನವು ಜನರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ, ಗುಂಪು ಪೊಲೀಸ್ ಚಾಲಕನನ್ನು ಹಿಡಿದು ಥಳಿಸಿತು. ಗಾಯಗೊಂಡವರನ್ನು ಅಚಲ್ ಕುಮಾರ್, ಶುಭಂ ಸಿಂಗ್, ಅರವಿಂದ್ ಶರ್ಮಾ ಮತ್ತು ಮನೋಜ್ ಕುಮಾರ್ ರೈ ಎಂದು ಗುರುತಿಸಲಾಗಿದೆ.

ಜಾರ್ಖಂಡ್ನ ಉಕ್ಕಿನ ನಗರ ಎಂದು ಕರೆಯಲ್ಪಡುವ ಜೆಮ್ಶೆಡ್ಪುರದ ಸೀತಾರಾಮದೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಅತಿವೇಗದ ಪೊಲೀಸ್ ಬೊಲೆರೊ ವಾಹನವು ಮೂವರು ದಾರಿ ಹೋಕರಿಗೆ ಡಿಕ್ಕಿ ಹೊಡೆದು 4 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳೀಯರ ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೆಮ್ಶೆಡ್ಪುರದ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಗಿದೆ.
ವರದಿಗಳ ಪ್ರಕಾರ, ಚಂದನ್ ವಿಶ್ವಕರ್ಮ ಎಂಬ ಪೊಲೀಸ್ ಪೇದೆ ಸ್ಥಳೀಯ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಜನರಿಗೆ ಡಿಕ್ಕಿ ಹೊಡೆದಿದ್ದಾರೆ. ಪೋಲೀಸ್ ವಾಹನವನ್ನು ಒಳಗೊಂಡಿರುವ ರಂಪಾಟದಿಂದ ಕೋಪಗೊಂಡ ಸ್ಥಳೀಯ ಜನರ ಗುಂಪು ಬೊಲೆರೋವನ್ನು ಸುತ್ತುವರೆದು ಕಾನ್ಸ್ಟೆಬಲ್ ಚಂದನ್ ವಿಶ್ವಕರ್ಮ ಅವರನ್ನು ಅಮಾನುಷವಾಗಿ ಥಳಿಸಿತು. ಘಟನೆ ವೇಳೆ ಪೊಲೀಸ್ ಪೇದೆ ಪಾನಮತ್ತನಾಗಿದ್ದ ಎನ್ನಲಾಗಿದೆ.
ನಂತರ ಸೀತಾರಾಮದೇರಾ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಆಕ್ರೋಶಗೊಂಡ ಜನರನ್ನು ಸಮಾಧಾನಪಡಿಸಲು ಯತ್ನಿಸಿದರು. ಪೊಲೀಸ್ ಅಧಿಕಾರಿಗಳು ಕೂಡ ಜನರಿಗೆ ಸೂಕ್ತ ಕ್ರಮದ ಭರವಸೆ ನೀಡಿದರು. ನಂತರ ಪೊಲೀಸರು ಆರೋಪಿ ಕಾನ್ಸ್ಟೇಬಲ್ನನ್ನು ಕೋಪಗೊಂಡ ಗುಂಪಿನ ಹಿಡಿತದಿಂದ ರಕ್ಷಿಸಿದರು. ಪೊಲೀಸರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಜನರ ಆಕ್ರೋಶ ಶಮನವಾಯಿತು.
ಜಮ್ಶೆಡ್ಪುರದ ಮ್ಯಾಂಗೋ ಬಸ್ ನಿಲ್ದಾಣದಲ್ಲಿ ಪಾನಮತ್ತ ಕಾನ್ಸ್ಟೆಬಲ್ ಸಹಚರನನ್ನು ಬಿಡಲು ಬಂದಿದ್ದ ಎನ್ನಲಾಗಿದೆ. ಈ ವೇಳೆ ವಾಪಸ್ ಬರುವಾಗ ಭುಯಾಂಡಿ ಚೌಕ್ ಬಳಿ ಮದ್ಯ ಸೇವಿಸಿದ್ದಾರೆ. ಕಾನ್ಸ್ಟೆಬಲ್ ಮೊದಲು ಬುಲೆಟ್ ಸವಾರನಿಗೆ ಡಿಕ್ಕಿ ಹೊಡೆದು, ನಂತರ ಪರಾರಿಯಾಗುವ ಯತ್ನದಲ್ಲಿ ಪಲ್ಸರ್ ಮತ್ತು ಸ್ಪ್ಲೆಂಡರ್ ರೈಡರ್ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಮೂರು ದ್ವಿಚಕ್ರ ವಾಹನಗಳು ಸಿಕ್ಕಿಬಿದ್ದ ನಂತರ ಪೊಲೀಸ್ ವಾಹನವು ರಸ್ತೆಯ ಪಕ್ಕದ ಚರಂಡಿಯಲ್ಲಿ ಸಿಲುಕಿಕೊಂಡಿತು. ಘಟನೆಯಲ್ಲಿ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications