ಕುಡಿದು ವಾಹನ ಚಾಲಾಯಿಸಿ ನಾಲ್ವರಿಗೆ ಗುದ್ದಿಸಿದ ಪೊಲೀಸ್!
ಜೇಮ್ಶೆಡ್ಪುರ, ನವೆಂಬರ್ 8: ಪೊಲೀಸ್ ಸಿಬ್ಬಂದಿಯೊಬ್ಬರು ಮದ್ಯ ಕುಡಿದು ವಾಹನ ಚಲಾಯಿಸಿದ್ದಲ್ಲದೆ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ಗುದ್ದಿಸಿ ನಾಲ್ವರಿಗೆ ಗಾಯ ಮಾಡಿರುವ ಘಟನೆ ನಡೆದಿದೆ.
ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನವು ಜನರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ, ಗುಂಪು ಪೊಲೀಸ್ ಚಾಲಕನನ್ನು ಹಿಡಿದು ಥಳಿಸಿತು. ಗಾಯಗೊಂಡವರನ್ನು ಅಚಲ್ ಕುಮಾರ್, ಶುಭಂ ಸಿಂಗ್, ಅರವಿಂದ್ ಶರ್ಮಾ ಮತ್ತು ಮನೋಜ್ ಕುಮಾರ್ ರೈ ಎಂದು ಗುರುತಿಸಲಾಗಿದೆ.

ಜಾರ್ಖಂಡ್ನ ಉಕ್ಕಿನ ನಗರ ಎಂದು ಕರೆಯಲ್ಪಡುವ ಜೆಮ್ಶೆಡ್ಪುರದ ಸೀತಾರಾಮದೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಅತಿವೇಗದ ಪೊಲೀಸ್ ಬೊಲೆರೊ ವಾಹನವು ಮೂವರು ದಾರಿ ಹೋಕರಿಗೆ ಡಿಕ್ಕಿ ಹೊಡೆದು 4 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳೀಯರ ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೆಮ್ಶೆಡ್ಪುರದ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಗಿದೆ.
ವರದಿಗಳ ಪ್ರಕಾರ, ಚಂದನ್ ವಿಶ್ವಕರ್ಮ ಎಂಬ ಪೊಲೀಸ್ ಪೇದೆ ಸ್ಥಳೀಯ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಜನರಿಗೆ ಡಿಕ್ಕಿ ಹೊಡೆದಿದ್ದಾರೆ. ಪೋಲೀಸ್ ವಾಹನವನ್ನು ಒಳಗೊಂಡಿರುವ ರಂಪಾಟದಿಂದ ಕೋಪಗೊಂಡ ಸ್ಥಳೀಯ ಜನರ ಗುಂಪು ಬೊಲೆರೋವನ್ನು ಸುತ್ತುವರೆದು ಕಾನ್ಸ್ಟೆಬಲ್ ಚಂದನ್ ವಿಶ್ವಕರ್ಮ ಅವರನ್ನು ಅಮಾನುಷವಾಗಿ ಥಳಿಸಿತು. ಘಟನೆ ವೇಳೆ ಪೊಲೀಸ್ ಪೇದೆ ಪಾನಮತ್ತನಾಗಿದ್ದ ಎನ್ನಲಾಗಿದೆ.
ನಂತರ ಸೀತಾರಾಮದೇರಾ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಆಕ್ರೋಶಗೊಂಡ ಜನರನ್ನು ಸಮಾಧಾನಪಡಿಸಲು ಯತ್ನಿಸಿದರು. ಪೊಲೀಸ್ ಅಧಿಕಾರಿಗಳು ಕೂಡ ಜನರಿಗೆ ಸೂಕ್ತ ಕ್ರಮದ ಭರವಸೆ ನೀಡಿದರು. ನಂತರ ಪೊಲೀಸರು ಆರೋಪಿ ಕಾನ್ಸ್ಟೇಬಲ್ನನ್ನು ಕೋಪಗೊಂಡ ಗುಂಪಿನ ಹಿಡಿತದಿಂದ ರಕ್ಷಿಸಿದರು. ಪೊಲೀಸರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಜನರ ಆಕ್ರೋಶ ಶಮನವಾಯಿತು.
ಜಮ್ಶೆಡ್ಪುರದ ಮ್ಯಾಂಗೋ ಬಸ್ ನಿಲ್ದಾಣದಲ್ಲಿ ಪಾನಮತ್ತ ಕಾನ್ಸ್ಟೆಬಲ್ ಸಹಚರನನ್ನು ಬಿಡಲು ಬಂದಿದ್ದ ಎನ್ನಲಾಗಿದೆ. ಈ ವೇಳೆ ವಾಪಸ್ ಬರುವಾಗ ಭುಯಾಂಡಿ ಚೌಕ್ ಬಳಿ ಮದ್ಯ ಸೇವಿಸಿದ್ದಾರೆ. ಕಾನ್ಸ್ಟೆಬಲ್ ಮೊದಲು ಬುಲೆಟ್ ಸವಾರನಿಗೆ ಡಿಕ್ಕಿ ಹೊಡೆದು, ನಂತರ ಪರಾರಿಯಾಗುವ ಯತ್ನದಲ್ಲಿ ಪಲ್ಸರ್ ಮತ್ತು ಸ್ಪ್ಲೆಂಡರ್ ರೈಡರ್ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಮೂರು ದ್ವಿಚಕ್ರ ವಾಹನಗಳು ಸಿಕ್ಕಿಬಿದ್ದ ನಂತರ ಪೊಲೀಸ್ ವಾಹನವು ರಸ್ತೆಯ ಪಕ್ಕದ ಚರಂಡಿಯಲ್ಲಿ ಸಿಲುಕಿಕೊಂಡಿತು. ಘಟನೆಯಲ್ಲಿ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications