Car, Bikes Gift: ಉದ್ಯೋಗಿಗಳಿಗೆ ಟಾಟಾ ಕಾರು, ಆಕ್ಟಿವಾ ಸ್ಕೂಟರ್, ರಾಯಲ್ ಎನ್ಫೀಲ್ಡ್ ಬೈಕ್ ಗಿಫ್ಟ್ ಕೊಟ್ಟ ಕಂಪನಿ
Car, Bike Gift: ಸಾಮಾನ್ಯವಾಗಿ ಕೆಲವೊಂದು ಕಂಪನಿಗಳಲ್ಲಿ ಕಠಿಣ ಪರಿಶ್ರಮ ಹಾಕಿದ ಉದ್ಯೋಗಿಗಳಿಗೆ ಉಡುಗೊರೆ ಅಥವಾ ಬೋನಸ್ ಅಂತಾ ಕೊಡುತ್ತಾರೆ. ಹಾಗೆಯೇ ಇದೀಗ ಚೆನ್ನೈ ಮೂಲದ ಖಾಸಗಿ ಕಂಪನಿಯೊಂದು ಉದ್ಯೋಗಿಗಳಿಗೆ ಕಾರ್, ಬೈಕ್ ಗಿಫ್ಟ್ ಕೊಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಈ ವಾಹನಗಳು ಯಾವ ಕಂಪನಿಯವು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.
ಕಠಿಣ ಶ್ರಮ ಮತ್ತು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಿದ 20 ಉದ್ಯೋಗಿಗಳಿಗೆ ತಮಿಳುನಾಡಿನ ಚೆನ್ನೈ ಮೂಲದ ಸುರ್ಮೌಂಟ್ ಲಾಜಿಸ್ಟಿಕ್ಸ್ ಸಲ್ಯೂಷನ್ಸ್ ಪ್ರೈ.ಲಿ.ಕಂಪನಿಯು ಕಾರ್ ಮತ್ತು ಬೈಕ್ಗಳನ್ನು ಉಡುಗೊರೆಯಾಗಿ ನೀಡಿದೆ.

ಸಂಸ್ಥೆಯ ನೌಕರರ ಶ್ರಮ ಮತ್ತು ಬದ್ಧತೆಗೆ ಅನುಗುಣವಾಗಿ ಟಾಟಾ ಕಾರುಗಳು, ಆಕ್ಟಿವಾ ಸ್ಕೂಟರ್ ಹಾಗೂ ರಾಯಲ್ ಎನ್ಫೀಲ್ಡ್ ಬೈಕುಗಳನ್ನು ಉದ್ಯೋಗಿಗಳಿಗೆ ನೀಡಿದೆ ಎಂದು ತಿಳಿದುಬಂದಿದೆ.
ತಾವು ಪಟ್ಟ ಶ್ರಮಕ್ಕೆ ಉತ್ತಮ ಉಡುಗೊರೆ ಸಿಕ್ಕಿರೆ ಉದ್ಯೋಗಿಗಳು ಮತ್ತಷ್ಟು ಉತ್ತೇಜನದಿಂದ ಕೆಲಸ ಮಾಡಲಿದ್ದಾರೆ. ಈ ಮೂಲಕ ಕಂಪನಿ ಬೆಳಯಲು ಶ್ರಮಿಸುತ್ತಲೇ ಇರುತ್ತಾರೆ. ಅಲ್ಲದೆ, ಅವರ ಉನ್ನತ ಗುರಿ ಸಾಧನೆಗೆ ಸ್ಫೂರ್ತಿ ನೀಡಿದಂತಾಗುತ್ತದೆ ಎಂದು ಕಂಪನಿಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಡೆಂಜಿಲ್ ರಾಯನ್ ಹೇಳಿದ್ದಾರೆ.
ಉದ್ಯೋಗಿಗಳನ್ನು ಪ್ರೋತ್ಸಾಹಿಸಲು ನಗರ ಮೂಲದ ಸುರ್ಮೌಂಟ್ ಲಾಜಿಸ್ಟಿಕ್ಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಕಾರ್ಗಳು ಮತ್ತು ದ್ವಿಚಕ್ರ ವಾಹನಗಳನ್ನು ಉಡುಗೊರೆಯಾಗಿ ನೀಡಿದೆ. ಉಡುಗೊರೆಗಳಲ್ಲಿ ಟಾಟಾ ಕಾರುಗಳು, ಆಕ್ಟಿವಾ ಸ್ಕೂಟರ್ಗಳು ಮತ್ತು ರಾಯಲ್ ಎನ್ಫೀಲ್ಡ್ ಬೈಕ್ಗಳು ಸೇರಿದ್ದು, ಇವುಗಳನ್ನು 20 ಉದ್ಯೋಗಿಗಳಿಗೆ ನೀಡಲಾಯಿತು ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕೆಲವೊಂದು ಕಂಪನಿಗಳಲ್ಲಿ ಎಷ್ಟೇ ಕಷ್ಟ ಪಟ್ಟು, ಶ್ರಮ ಹಾಕಿ ದುಡಿದರೂ ಕೂಡ ಯಾವುದೇ ಆಫರ್ ನೀಡದಿರುವ ಉದಾಹರಣೆಗಳು ಇವೆ. ಇದರಿಂದ ಉದ್ಯೋಗಿಗಳ ಮನಸಿನ ಮೇಲೆ ಪರಿಣಾಮ ಬೀರುವ ಮೂಲಕ ಅವರು ಕೆಲಸದ ಮೇಲಿನ ಆಸಕ್ತಿಯನ್ನೇ ಕಳೆದುಕೊಂಡುಬಿಡುತ್ತಾರೆ. ಬದಲಿಗೆ ಶ್ರಮಕ್ಕೆ ತಕ್ಕಂತೆ ಪ್ರತಿಫಲವಾಗಿ ಏನಾದರೂ ಉಡುಗೊರೆ ನೀಡಿದರೆ ಮತ್ತಷ್ಟು ಉತ್ತೇಜನ ನೀಡಿದಂತಾಗುತ್ತದೆ. ಅಲ್ಲದೆ, ಶ್ರಮವಹಿಸಿ ಉತ್ತಮವಾಗಿ ಕೆಲಸ ಮಾಡುವ ಮೂಲಕ ಕಂಪನಿ ಯಶಸ್ಸಿಗೆ ಸದಾ ಶ್ರಮಿಸುತ್ತಲೇ ಇರುತ್ತಾರೆ.
ಇದಕ್ಕೆ ಪೂರಕವೆಂಬಂತೆ ಈಗಾಗಲೇ ಈ ಹಿಂದೆ ಸುಮಾರು ಕಂಪನಿಗಳು ಉದ್ಯೋಗಿಗಳಿಗೆ ಉಡುಗೊರೆ ನೀಡಿವೆ. ಈ ಮೂಲಕ ಅವರ ಉದ್ಯೋಗಿಗಳ ಮನ ಗೆದ್ದಿರುವ ಉಹಾಹರಣೆಗಳಿವೆ. ಹಾಗೆಯೇ ಇದೀಗ ಚೈನ್ನೈ ಕಂಪನಿಯೊಂದು ಇದೇ ಹಾದಿಯನ್ನೇ ಅನುಸರಿಸಿ ಗಮನ ಸೆಳದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications