ಸಂಸತ್ತಿನ ಎರಡು ಸದನದಿಂದ ಒಟ್ಟು 173 ಸಂಸದರ ಅಮಾನತು, ವಿವರ
ನವದೆಹಲಿ, ಡಿಸೆಂಬರ್ 19: ಅಶಿಸ್ತಿನ ನಡವಳಿಕೆ ಕಾರಣ ಸದನದಿಂದ 33 ಸಂಸದರು ಅಮಾನತುಗೊಂಡ ಒಂದು ದಿನದ ನಂತರ ಮಂಗಳವಾರ ಮತ್ತೆ ಫಾರೂಕ್ ಅಬ್ದುಲ್ಲಾ, ಸುಪ್ರಿಯಾ ಸುಳೆ, ಡಿಂಪಲ್ ಯಾದವ್ ಮತ್ತು ಶಶಿ ತರೂರ್ ಸೇರಿದಂತೆ ಪ್ರತಿಪಕ್ಷಗಳ 49 ಸಂಸದರನ್ನು ಲೋಕಸಭೆಯಿಂದ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.
ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರಿಂದ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷದ ಸದಸ್ಯರು ತಮ್ಮ ಬೇಡಿಕೆಗಳ ಮೇಲೆ ಪ್ರಶ್ನೆಗಳನ್ನು ಎತ್ತಿ ಫಲಕಗಳನ್ನು ಪ್ರದರ್ಶಿಸಿದರು. ಬಳಿಕ ಸದನವು ಮುಂದೂಡಿದ ನಂತರ ಅವರನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು.

49 ಲೋಕಸಭಾ ಸಂಸದರನ್ನು ಅಮಾನತುಗೊಳಿಸುವುದರೊಂದಿಗೆ ಉಭಯ ಸದನಗಳಿಂದ ಅಮಾನತುಗೊಂಡಿರುವ ವಿರೋಧ ಪಕ್ಷದ ಸಂಸದರ ಒಟ್ಟು ಸಂಖ್ಯೆ 173 ಕ್ಕೆ ಏರಿದೆ. ಬುಧವಾರದ ಅಮಾನತುಗೊಂಡವರೊಮದಿಗೆ ಲೋಕಸಭೆ ಮತ್ತು ರಾಜ್ಯಸಭೆಯ ಸಭಾಂಗಣಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಲ್ಪಟ್ಟವರ ಸಂಖ್ಯೆಯು ಚಳಿಗಾಲದ ಅಧಿವೇಶನ ಮುಕ್ತಾಯವಾಗುವವರೆಗೆ 92 ಆಗಿದೆ. ಚಳಿಗಾಲದ ಅಧಿವೇಶನ ಡಿಸೆಂಬರ್ 22 ರಂದು ಮುಕ್ತಾಯಗೊಳ್ಳಲಿದೆ.
ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸದಸ್ಯರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಫಲಕಗಳನ್ನು ಪ್ರದರ್ಶಿಸಿದ ಕಾರಣಕ್ಕಾಗಿ ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಹೊಸ ಸಂಸತ್ತಿನ ಕಟ್ಟಡದಲ್ಲಿ ಅಶಿಸ್ತನ್ನು ಆಶ್ರಯಿಸುವುದಿಲ್ಲ ಎಂದು ಎಲ್ಲಾ ಸಂಸದರು ಒಪ್ಪಿಕೊಂಡಿದ್ದಾರೆ. ವಿರೋಧ ಪಕ್ಷದ ಸದಸ್ಯರು ನಿಯಮ ಉಲ್ಲಂಘಿಸಿ ಸಭಾಪತಿಗೆ ಅಗೌರವ ತೋರಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಅವರು ಇತ್ತೀಚಿನ ವಿಧಾನಸಭಾ ಚುನಾವಣೆಯ ಫಲಿತಾಂಶಗಳಿಂದ ಹತಾಶರಾಗಿದ್ದಾರೆ. ಅಧ್ಯಕ್ಷ ತೆ ವಹಿಸಿದ್ದ ಬಿಜೆಪಿ ಸಂಸದ ರಾಜೇಂದ್ರ ಅಗರವಾಲ್, ಸಂಸದರ ಅಮಾನತಿಗೆ ಪ್ರಸ್ತಾವನೆ ಮಂಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
ಸಂಸತ್ತಿನ ಭದ್ರತಾ ಲೋಪದ ಕುರಿತು ಅಮಿತ್ ಶಾ ಹೇಳಿಕೆಗೆ ವಿರೋಧ ಪಕ್ಷಗಳ ಆಗ್ರಹದ ಹಿನ್ನೆಲೆಯಲ್ಲಿ ಒಟ್ಟು 78 ಸಂಸದರು ಇದರಲ್ಲಿ ಲೋಕಸಭೆಯ 33 ಮತ್ತು ರಾಜ್ಯಸಭೆಯ 45 ಸೋಮವಾರದ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಂಡಿದ್ದರು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications