ಸರ್ಕಾರಿ ಯೋಜನೆಗೆ ಆಧಾರ್ ಕಡ್ಡಾಯ ಬೇಡ: ಸುಪ್ರೀಂ
ಸರ್ಕಾರದ ತನ್ನ ಜನಪ್ರಿಯ ಕಲ್ಯಾಣ ಯೋಜನೆಗಳಿಗೆ ಆಧಾರ್ ಕಾರ್ಡ್ ಬಳಕೆ ಕಡ್ಡಾಯಗೊಳಿಸಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಆಧಾರ್ ಕಡ್ಡಾಯಗೊಳಿಸಿದೇಕೆ ಎಂದು ಕೋರ್ಟ್ ಪ್ರಶ್ನಿಸಿದೆ.
ನವದೆಹಲಿ, ಮಾರ್ಚ್ 27: ಸರ್ಕಾರಿ ಯೋಜನೆಗಳ ಫಲಾನುಭವ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸುವುದೇಕೆ? ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಬೆಳಗ್ಗೆ ಪ್ರಶ್ನಿಸಿದೆ. ಆದರೆ, ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಜೋಡಣೆ ಕ್ರಮವನ್ನು ಮುಂದುವರೆಸಲು ಸೂಚಿಸಿದೆ.
ಸರ್ಕಾರದ ತನ್ನ ಜನಪ್ರಿಯ ಕಲ್ಯಾಣ ಯೋಜನೆಗಳಿಗೆ ಆಧಾರ್ ಕಾರ್ಡ್ ಬಳಕೆ ಕಡ್ಡಾಯಗೊಳಿಸಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ಏಳು ಮಂದಿ ಜಡ್ಜ್ ಗಳುಳ್ಳ ನ್ಯಾಯಪೀಠವು ಆಧಾರ್ ಬಗ್ಗೆ ವಿಚಾರಣೆ ಕೈಗೆತ್ತಿಕೊಳ್ಳುವುದಕ್ಕೂ ಮೊದಲು ಇಂಥದ್ದೊಂದು ಹಿನ್ನಡೆ ಸರ್ಕಾರಕ್ಕೆ ಉಂಟಾಗಿದೆ. ಆಧಾರ್ ಕಾರ್ಡ್ ಇಲ್ಲದಿದ್ದರೆ ಯೋಜನೆಗಳ ಫಲಾನುಭವಿಗಳಿಗೆ ಕಷ್ಟ ಎಂಬ ಮಾಹಿತಿಯನ್ನು ಕೋರ್ಟಿಗೆ ಕೇಂದ್ರ ಸರ್ಕಾರ ನೀಡಿದೆ.
ಆಧಾರ್ ಇಲ್ಲದವರು ಬೇರೆ ಗುರುತಿನ ಚೀಟಿ ನೀಡಿ ಯೋಜನೆಗಳ ಲಾಭ ಪಡೆಯಬಹುದು. ಆಧಾರ್ ಕಾಯ್ದೆ 2016 ಅನ್ವಯ ಎಲ್ಲರಿಗೂ ಆಧಾರ್ ನೀಡುವ ಬಗ್ಗೆ ಇಲಾಖೆಗಳು ಕಾರ್ಯಗತವಾಗಿವೆ ಎಂದು ಸರ್ಕಾರ ಹೇಳಿದೆ.
ಎಂನರೇಗಾ, ಪಿಂಚಣಿ ಸೇರಿದಂತೆ ಅನೇಕ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಇದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್ ಅಕ್ಟೋಬರ್ 15, 2015ರಂದು ತೆಗೆದು ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications