ಗೋವುಗಳಿಗೂ ಆಧಾರ್, ಕೇಂದ್ರದಿಂದ ಸುಪ್ರೀಂಗೆ ಪ್ರಸ್ತಾವನೆ
ದೇಶದ ಗಡಿಭಾಗದಲ್ಲಿ ನಡೆಯುವ ಗೋವುಗಳ ಕಳ್ಳಸಾಗಾಣಿಕೆ, ಮಾರಾಟವನ್ನು ತಪ್ಪಿಸಲು ಗೋವುಗಳಿಗೂ ಆಧಾರ್ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಪ್ರಸ್ತಾವನೆ ಸಲ್ಲಿಸಿದೆ.
ನವದೆಹಲಿ, ಏಪ್ರಿಲ್ 24 : ಬಹುತೇಕ ಎಲ್ಲಾ ಸರ್ಕಾರಿ ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದ ಬಳಿಕ ಇದೀಗ ಗೋವುಗಳಿಗೂ ಆಧಾರ್ ಕಡ್ಡಾಯ ಮಾಡಲು ಕೇಂದ್ರ ಸರ್ಕಾರ ಹೊರಟಿದೆ.
ಗೋವುಗಳ ರಕ್ಷಣೆ ಮತ್ತು ಅಕ್ರಮ ಸಾಗಾಟವನ್ನು ತಪ್ಪಿಸಲು ಆಧಾರ್ ನಂತಹ ಗುರುತು ಪತ್ರವನ್ನು ನೀಡುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ಪ್ರಸ್ತಾವನೆ ಸಲ್ಲಿಸಿದೆ.

ಆಧಾರ್ ನಿಂದಾಗಿ ಭಾರತ- ಬಾಂಗ್ಲಾದೇಶದ ಗಡಿಭಾಗದಲ್ಲಿ ನಡೆಯುವ ಗೋವುಗಳ ಕಳ್ಳಸಾಗಾಣಿಕೆ, ಮಾರಾಟವನ್ನು ತಪ್ಪಿಸಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ.
ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿ ಗೋರಕ್ಷಣೆ ಬಗ್ಗೆ ಕೆಲವು ಶಿಫಾರಸ್ಸುಗಳನ್ನು ನೀಡಲಿದೆ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿದೆ.
ಆಯಾ ಗೋವುಗಳ ವಯಸ್ಸು, ತಳಿ, ಲಿಂಗ, ಸ್ಥಳ, ಎತ್ತರ, ದೇಹ, ಬಣ್ಣ, ಕೊಂಬುವಿನತಹ ಇತರೆ ಮಾಹಿತಿ ಈ ಆಧಾರ್ ಕಾರ್ಡ್ ನಲ್ಲಿ ಇರಲಿದೆ.
ಇದೇ ವೇಳೆ ಪ್ರತಿಯೊಂದು ಜಿಲ್ಲೆಯಲ್ಲೂ ಕನಿಷ್ಟ 500 ಹಸುಗಳು ಉಳಿದಿಕೊಳ್ಳುವ ಸಂಬಂಧ ವಸತಿ ನಿರ್ಮಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎನ್ನುವ ಅಂಶ ವರದಿಯಲ್ಲಿದೆ.
ಇದೇ ವೇಳೆ ಕೇಂದ್ರ ಸರ್ಕಾರ ತೊಂದರೆಗೀಡಾದ ರೈತರಿಗೂ ನೂತನ ಯೋಜನೆಯನ್ನು ಆರಂಭಿಸುವುದಾಗಿ ತಿಳಿಸಿದೆ. ದನಗಳಿಗೆ ಆಧಾರ್ ನೀಡಬೇಕೆಂಬ ಪ್ರಸ್ತಾಪ ಕಳೆದ ವರ್ಷವೇ ಚರ್ಚೆಯಲ್ಲಿತ್ತು.
ಆದರೆ ಈ ಪ್ರಸ್ತಾಪಕ್ಕೆ ಕೆಲ ವಿರೋಧಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರಲಿಲ್ಲ. ಆದರೆ ಈಗ ಕೇಂದ್ರ ಸರ್ಕಾರ ಹಸುಗಳಿಗೆ ಆಧಾರ್ ನೀಡುವ ಬಗ್ಗೆ ಸುಪ್ರೀಂಗೆ ವರದಿ ಸಲ್ಲಿಸಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications