ಆಧಾರ್ ಜೋಡಣೆ: ಈ ನಾಲ್ಕು ಡೆಡ್ ಲೈನ್ ನೆನಪಿರಲಿ
ಬೆಂಗಳೂರು, ಅಕ್ಟೋಬರ್ 04: ನಾಗರಿಕ ಗುರುತಿನ ಚೀಟಿ ಆಧಾರ್ ಕಾರ್ಡ್ ಜೋಡಣೆ ಕಡ್ಡಾಯ ಎಂಬ ಸುದ್ದಿ ಕಿವಿಗೆ ಬೀಳುತ್ತಲೇ ಇರುತ್ತದೆ. ನಾಳೆ ಮಾಡಿದರೆ ಆಯ್ತು ಎಂದುಕೊಳ್ಳುವಷ್ಟರಲ್ಲೇ ಡೆಡ್ ಲೈನ್ ಮುಂದೆ ನಿಂತಿರುತ್ತದೆ.
ಆಧಾರ್ ಕಾರ್ಡ್ ಜೋಡಣೆ ಪ್ರಮುಖ ನಾಲ್ಕು ಡೆಡ್ ಲೈನ್ ಗಳ ಬಗ್ಗೆ ವಿವರ ಇಲ್ಲಿದೆ. ಆದಷ್ಟು ಬೇಗ ಆಧಾರ್ ಜೋಡಣೆ ಮಾಡಿಕೊಳ್ಳಿ ಇಲ್ಲದಿದ್ದರೆ ಬ್ಯಾಂಕ್ ವ್ಯವಹಾರ ಕಷ್ಟವಾಗಲಿದೆ.
ಸರ್ಕಾರಿ ಸವಲತ್ತು ಸೇವೆಯ ಫಲಾಕಾಂಕ್ಷಿಗಳಾಗಿದ್ದರೆ ಆಧಾರ್ ಕಡ್ಡಾಯವಾಗಿ ಜೋಡಣೆ ಮಾಡಿಕೊಳ್ಳಬೇಕಾಗುತ್ತದೆ. ಅನೇಕ ಸೇವೆಗಳಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು ಡಿಸೆಂಬರ್ 31, 2017 ಕೊನೆ ದಿನಾಂಕವಾಗಿದೆ. ಮೊಬೈಲ್ ನಂಬರ್ ಜತೆ ಜೋಡಣೆಗೂ ಇದು ಕೊನೆ ದಿನವಾಗಿದೆ.
ಸರ್ಕಾರಿ ಸವಲತ್ತು ಪಡೆಯಲು ಆಧಾರ್ ಕಡ್ಡಾಯವಾಗಬೇಕೇ? ಬೇಡವೇ? ಎಂಬ ಚರ್ಚೆ, ವಾದ, ಪ್ರತಿವಾದ ಸದ್ಯ ಸುಪ್ರೀಂಕೋರ್ಟಿನಲ್ಲಿ ವಿಚಾರಣೆ ಹಂತದಲ್ಲಿದೆ.
ಈ ಬಗ್ಗೆ ಸುಪ್ರೀಂಕೋರ್ಟ್ ಏನು ಆದೇಶ ನೀಡುವುದೋ ಕಾದುನೋಡಬೇಕಿದೆ. ಸದ್ಯಕ್ಕಂತೂ ಆಧಾರ್ ಕಡ್ಡಾಯವಾಗಿರುವ ನಾಲ್ಕು ಪ್ರಮುಖ ಸೇವೆಗಳ ವಿವರ ಮುಂದಿದೆ.

ಪ್ಯಾನ್ ಕಾರ್ಡ್ ಜತೆ ಆಧಾರ್ ಕಾರ್ಡ್ ಲಿಂಕ್
ಕೇಂದ್ರದ ನೇರ ತೆರಿಗೆ ಸಮಿತಿ(ಸಿಬಿಡಿಟಿ) ಆಗಸ್ಟ್ ನಲ್ಲಿ ನೀಡಿದ ಸೂಚನೆಯಂತೆ ಆಧಾರ್ ಹಾಗೂ ಪ್ಯಾನ್ ಜೋಡಣೆ ಕಡ್ಡಾಯವಾಗಿದೆ. ತೆರಿಗೆದಾರರ ಅನುಕೂಲಕ್ಕೆ ಈ ವ್ಯವಸ್ಥೆ ಮಾಡಲಾಗಿದ್ದು, ಡಿಸೆಂಬರ್ 31, 2017 ಕೊನೆ ದಿನಾಂಕವಾಗಲಿದೆ. ಈ ಮುಂಚೆ ಆಗಸ್ಟ್ 31 ಕೊನೆ ದಿನಾಂಕವಾಗಿತ್ತು. 2017-18ರ ಆದಾಯ ತೆರಿಗೆ ಪಾವತಿಗೆ ಈ ಜೋಡಣೆ ಕಡ್ಡಾಯವಾಗಿತ್ತು.

ಮೊಬೈಲ್ ಸಿಮ್ ಜತೆ ಆಧಾರ್ ಜೋಡಣೆ
ಮೊಬೈಲ್ ಫೋನ್ ಸಿಮ್ ಜತೆಗೆ ಆಧಾರ್ ನಂಬರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಬಹುತೇಕ ಎಲ್ಲಾ ಟೆಲಿಕಾಂ ಸೇವಾಸಂಸ್ಥೆಗಳು ತನ್ನ ಗ್ರಾಹಕರಿಗೆ ಸೂಚನೆ ನೀಡಿವೆ. ಗ್ರಾಹಕರು ಖುದ್ದು ಟೆಲಿಕಾಂ ಸಂಸ್ಥೆ ಕಚೇರಿಗೆ ತೆರಳಿ ಬೆರಳಚ್ಚು ನೀಡುವುದು ಕಡ್ಡಾಯವಾಗಿದೆ. ಕೊನೆ ದಿನಾಂಕ ಫೆಬ್ರವರಿ 2018

ಬ್ಯಾಂಕ್ ಖಾತೆ ಜತೆ ಆಧಾರ್ ಜೋಡಣೆ
ಬ್ಯಾಂಕ್/ ಆರ್ಥಿಕ ಸಂಸ್ಥೆಯಲ್ಲಿನ ಖಾತೆಯೊಂದಿಗೆ ಆಧಾರ್ ಕಾರ್ಡ್ ಜೋಡಣೆ ಅನಿವಾರ್ಯವಾಗಿದೆ. ಗ್ರಾಹಕರು ತಮ್ಮ ಕೆವೈಸಿ (Know your Customer) ದಾಖಲೆ ಜತೆಗೆ ಆಧಾರ್ ನಂಬರ್ ನೀಡುವುದು ಕಡ್ಡಾಯವಾಗಿದೆ. ಬ್ಯಾಂಕಿನಿಂದ ಯಾವುದೇ ಸೇವೆ, ಸಾಲ ಪಡೆಯಲು ಆಧಾರ್ ನಂಬರ್ ಕಡ್ಡಾಯವಾಗಿದೆ. ಕೊನೆ ದಿನಾಂಕ ಡಿಸೆಂಬರ್ 31, 2017.

ಸಾಮಾಜಿಕ ಭದ್ರತಾ ಯೋಜನೆ ಆಧಾರ್ ಕಾರ್ಡ್
ಎಲ್ಲಾ ಬಗೆಯ ಸಾಮಾಜಿಕ ಭದ್ರತಾ ಯೋಜನೆಗಳೊಂದಿಗೆ ಆಧಾರ್ ಕಾರ್ಡ್ ಜೋಡಣೆ ಮಾಡಲು ಡಿಸೆಂಬರ್ 31, 2017 ಕೊನೆ ದಿನಾಂಕವಾಗಿದೆ. ಪಿಂಚಣಿ, ಎಲ್ ಪಿಜಿ ಸಿಲಿಂಡರ್ ಸಬ್ಸಿಡಿ, ಸರ್ಕಾರಿ ಸ್ಕಾಲರ್ ಶಿಪ್, ಡ್ರೈವಿಂಗ್ ಲೈಸನ್ಸ್ ಇತ್ಯಾದಿ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications