'ಪ್ಯಾನ್ ಕಾರ್ಡ್ ಹಾಗೂ ಆಧಾರ್ ಜೋಡಣೆ ಕಡ್ಡಾಯ ಬೇಡ'
Permanent Account Number (PAN) ಕಾರ್ಡ್ ಜತೆಗೆ ಆಧಾರ್ ಕಾರ್ಡ್ ಜೋಡಿಸುವುದನ್ನು ಕಡ್ದಾಯಗೊಳಿಸಿದ್ದ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ನವದೆಹಲಿ, ಜೂನ್ 09: Permanent Account Number (PAN) ಕಾರ್ಡ್ ಜತೆಗೆ ಆಧಾರ್ ಕಾರ್ಡ್ ಜೋಡಿಸುವುದನ್ನು ಕಡ್ದಾಯಗೊಳಿಸಿದ್ದ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಜೋಡಣೆ ಕಡ್ಡಾಯ ಬೇಡ ಎಂದು ಶುಕ್ರವಾರ(ಜೂನ್ 09) ದಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಈಗಾಗಲೇ ಆಧಾರ್ ಹಾಗೂ ಪ್ಯಾನ್ ಹೊಂದಿದವರು ಐಟಿ ರಿಟರ್ನ್ಸ್ ಮಾಡುವಾಗ ಜೋಡಣೆ ಮಾಡಬಹುದು. ಆದರೆ, ಆಧಾರ್ ಅಥವಾ ಪ್ಯಾನ್ ಕಾರ್ಡಿಗಾಗಿ ಅರ್ಜಿ ಹಾಕದವರಿಗೆ ಕಡ್ಡಾಯ ಆದೇಶ ಅನ್ವಯವಾಗುವುದಿಲ್ಲ.
[ಆನ್ ಲೈನ್ ನಲ್ಲಿ ಪ್ಯಾನ್ಗೆ ಆಧಾರ್ ಜೋಡಿಸುವುದು ಹೇಗೆ?]

ಜುಲೈ 1, 2017ರಿಂದ ಇದು ಜಾರಿಗೆ ಬರಲಿದೆ. ಪ್ಯಾನ್ ಹಾಗೂ ಆಧಾರ್ ಲಿಂಕ್ ಮಾಡಲು ಇಲಾಖೆಯು ತನ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವಂತೆ ಕೋರಿತ್ತು.
ತೆರಿಗೆಗಳ್ಳರಿಗೆ ಆಘಾತ ನೀಡಿರುವ ಆದಾಯ ತೆರಿಗೆ ಇಲಾಖೆ, ಈಗ ಎಲ್ಲಾ ತೆರಿಗೆದಾರರು ತಮ್ಮ ಪ್ಯಾನ್ ಕಾರ್ಡ್ಗೆ ಆಧಾರ್ ಸಂಖ್ಯೆ ಜೋಡಿಸುವಂತೆ ಸೂಚಿಸಿತ್ತು. ಈ ಬಗ್ಗೆ ಎಲ್ಲಾ ಮಾಧ್ಯಮಗಳಲ್ಲಿ ಜಾಹೀರಾತು ನೀಡಲಾಗಿತ್ತು. ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 139 ಎಎ ಅನ್ವಯ ನೀಡಲಾಗಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಅರ್ಜಿ ಹಾಕಲಾಗಿತ್ತು.
ಐಟಿ ರಿಟರ್ನ್ ಮಾಡುವ ಮುನ್ನ ಪ್ಯಾನ್ ಹಾಗೂ ಆಧಾರ್ ಕಾರ್ಡ್ ಜೋಡಣೆಯಾಗಿರಬೇಕು ಎಂಬ ನಿಯಮವನ್ನು ಹಿಂದಕ್ಕೆ ಪಡೆಯಲು ಕೇಂದ್ರ ಸರ್ಕಾರಕ್ಕೆ ಸೂಚಿಸುವಂತೆ ಅರ್ಜಿಯಲ್ಲಿ ಹೇಳಲಾಗಿತ್ತು. ಅರ್ಜಿ ವಿಚಾರಣೆ ನಡೆಸಿ ಮೇ 04ರಂದು ತೀರ್ಪು ಕಾಯ್ದಿರಿಸಿದ್ದ ನ್ಯಾ. ಎ.ಕೆ ಸಿಕ್ರಿ ಹಾಗೂ ಅಶೋಕ್ ಭೂಷಣ್ ಅವರಿದ್ದ ನ್ಯಾಯಪೀಠ ಶುಕ್ರವಾರ (ಜೂನ್ 09) ದಂದು ಆದೇಶ ಹೊರಡಿಸಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications