ಸಬ್ಸಿಡಿ ಸೀಮೆಎಣ್ಣೆ , ಅಟಲ್ ಪಿಂಚಣಿ ಸವಲತ್ತುಗಳಿಗೆ ಆಧಾರ್ ಕಡ್ಡಾಯ
ನವದೆಹಲಿ, ಜೂನ್ 04 : ಸಬ್ಸಿಡಿ ಸೀಮೆಎಣ್ಣೆ ಹಾಗೂ ಅಟಲ್ ಪಿಂಚಣಿ ಯೋಜನೆ ಸವಲತ್ತುಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಎರಡೂ ಸೌಲಭ್ಯಗಳನ್ನು ಪಡೆಯಲು ಇನ್ನು ಮುಂದೆ ಆಧಾರ್ ಕಾರ್ಡ್ ಅಗತ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೀಮೆಎಣ್ಣೆ ಸಬ್ಸಿಡಿಗಾಗಿ ಕಾರ್ಡ್ ಹೊಂದಲು ಸೆಪ್ಟೆಂಬರ್ 30 ಕೊನೆ ದಿನವಾಗಿದೆ. ಹಾಗೂ ಅಟಲ್ ಪಿಂಚಣಿ ಯೋಜನೆ ಪ್ರಯೋಜನಗಳನ್ನು ಪಡೆಯಲು ಆಧಾರ್ ಹೊಂದಲು ಅಂತಿಮ ದಿನವನ್ನು ಜೂನ್ 15ಕ್ಕೆ ನಿಗದಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.[ಐಟಿ ರಿಟರ್ನ್ಸ್, ಪಾನ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯ]

ಸೀಮೆಎಣ್ಣೆ ಸಬ್ಸಿಡಿ ಪಡೆಯಲು ಅಥವಾ ಪಿಂಚಣಿ ಯೋಜನೆಯ ಸವಲತ್ತುಗಳನ್ನು ಹೊಂದಲು ಇನ್ನು ಮುಂದೆ ಆಧಾರ್ ಕಾರ್ಡ್ ಹೊಂದಿರುವುದು ಅಗತ್ಯವಾಗಿರುತ್ತದೆ.
ಕಾರ್ಡ್ ಹೊಂದಿಲ್ಲದವರು ಈ ಮೇಲೆ ನಿಗದಿಗೊಳಿಸಲಾದ ದಿನಾಂಕದೊಳಗೆ ಅವುಗಳನ್ನು ಪಡೆಯಬಹುದು ಅಥವಾ ಹೊಸದಾಗಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು ಎಂದು ಸೂಚನೆಯಲ್ಲಿ ತಿಳಿಸಿದೆ.
ಆಧಾರ್ ಕಾರ್ಡ್ ಲಭಿಸುವ ವರೆಗೆ ಪಡಿತರ ಚೀಟಿ, ಡ್ರೈವಿಂಗ್ ಲೈಸನ್ಸ್, ಮತದಾರರ ಗುರುತಿನ ಚೀಟಿ, ಕಿಸಾನ್ ಭಾವಚಿತ್ರದೊಂದಿಗೆ ಪಾಸ್ಬುಕ್, ಉದ್ಯೋಗ ಚೀಟಿ ಇವುಗಳನ್ನು ಮಹಾತ್ಮ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್ ಆರ್ ಇಜಿಎಸ್) ಅಡಿ ನೀಡಲಾಗುತ್ತದೆ.
ಹಾಗೂ ಪತ್ರಾಂಕಿತ (ಗೆಜೆಟೆಡ್) ಅಧಿಕಾರಿ ಅಥವಾ ತಹಸೀಲ್ದಾರ್ ನೀಡುವ ಪ್ರಮಾಣ ಪತ್ರವನ್ನು ಈ ಸೌಲಭ್ಯಗಳಿಗಾಗಿ ಗುರುತು ದೃಢೀಕರಣವಾಗಿ ಪರಿಗಣಿಸಲಾಗುವುದು.
ಸಹಾಯಧನ ಸೋರಿಕೆಯನ್ನು ತಡೆಗಟ್ಟಲು ಹಾಗೂ ಅರ್ಹ ಫಲಾನುಭವಿಗಳಿಗೆ ಸೌಲಭ್ಯ-ಸವಲತ್ತುಗಳು ದಕ್ಕುವಂತಾಗಲು ಈ ಎರಡು ಯೋಜನೆಗಳಿಗೆ ಆಧಾರ್ ಕಾರ್ಡ್ ನ್ನು ಕಡ್ಡಾಯಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications