ಮುಂಬೈ ಏರ್ಪೋರ್ಟ್ನ ಬೀದಿ ನಾಯಿಗಳಿಗೂ ಆಧಾರ್, ಕ್ಯೂಆರ್ ಕೋಡ್!
ಬೆಂಗಳೂರು, ಜುಲೈ 17: ಮುಂಬೈ ವಿಮಾನ ನಿಲ್ದಾಣದ ಬಳಿ 20 ಬೀದಿ ನಾಯಿಗಳ ಗುಂಪಿಗೆ ಆಧಾರ್ ಕಾರ್ಡ್ಗಳೊಂದಿಗೆ ಕ್ಯೂಆರ್ ಕೋಡ್ ಅನ್ನು ನೀಡಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಕ್ಯುಆರ್ ಕೋಡ್ಗಳನ್ನು ಹೊಂದಿರುವ ನಾಯಿಗಳ ಗುರುತಿನ ಚೀಟಿಗಳನ್ನು ಅವುಗಳ ಕುತ್ತಿಗೆಗೆ ಹಾಕಲಾಗಿದೆ. ಈ QR ಕೋಡ್ಗಳನ್ನು ಸ್ಕ್ಯಾನ್ ಮಾಡಿದಾಗ, ಆಯಾ ನಾಯಿಯ ಅಗತ್ಯವಿರುವ ಮಾಹಿತಿಯನ್ನು ಲಭ್ಯವಾಗುವಂತೆ ಮಾಡಲಾಗಿದೆ. ನಾಯಿಯ ಹೆಸರು, ಸಂತಾನ ಶಕ್ತಿಹರಣ, ವ್ಯಾಕ್ಸಿನೇಷನ್ ವಿವರಗಳು, ಫೀಡರ್ನ ಸಂಪರ್ಕ ಸಂಖ್ಯೆ ಮತ್ತು ವೈದ್ಯಕೀಯ ಮಾಹಿತಿಯನ್ನು ಅದು ಒಳಗೊಂಡಿರುತ್ತದೆ.

ವಿಮಾನ ನಿಲ್ದಾಣದ ವಿಶೇಷ ತಂಡವು ಗುರುತಿನ ಚೀಟಿಯೊಂದಿಗೆ ನಾಯಿಗಳನ್ನು ಟ್ಯಾಗ್ ಮಾಡುವ ಕಾರ್ಯವನ್ನು ಮಾಡಿದೆ. ಈ ನಾಯಿಗಳಿಗೆ ಆಹಾರ ಒದಗಿಸುವ ವ್ಯಕ್ತಿಗಳನ್ನು ತಂಡ ಮನವೊಲಿಸಿದೆ. ನಾಯಿಗಳು ತಮ್ಮ ಕಡೆ ಬರುತ್ತಿರುವುದನ್ನು ಕಂಡ ಜನರು ನೋಡಿ ಆರಂಭದಲ್ಲಿ ಭಯಭೀತರಾಗಿದ್ದರು. ಆಗ ವಿಶೇಷ ತಂಡ 20 ನಾಯಿಗಳಿಗೆ ಟ್ಯಾಗ್ ಹಾಕಲು ಒಂದೆರಡು ಗಂಟೆಗಳನ್ನು ತೆಗೆದುಕೊಂಡಿತು.
ನಾವು ಬೆಳಿಗ್ಗೆ 8.30 ರ ಸುಮಾರಿಗೆ ನಾಯಿಗಳಿಗೆ ಟ್ಯಾಗ್ ಹಾಕಲು ಪ್ರಾರಂಭಿಸಿದೆವು. ಅಲ್ಲದೆ ಕ್ಯೂಆರ್ ಕೋಡ್ ಟ್ಯಾಗ್ಗಳನ್ನು ಸರಿಪಡಿಸಲು ಮತ್ತು ಲಸಿಕೆ ಹಾಕಲು ನಾಯಿಗಳನ್ನು ಬೆನ್ನಟ್ಟುತ್ತಿದ್ದೆವು. ನಾಯಿಗಳಿಗೆ ಟ್ಯಾಗ್ ಹಾಕಲು 'pawfriend.in' ಎಂಬ ಕಾರ್ಯಕ್ರಮದ ಮೂಲಕ ನಾಯಿಗಳನ್ನು ವಿಭಿನ್ನವಾಗಿ ಗುರುತಿಸುವಂತೆ ಮಾಡಲು ಯೋಜನೆ ಹಾಕಿಕೊಂಡೆವು ಎಂದುತಂಡದ ಸಿಯಾನ್ ನಿವಾಸಿ ಅಕ್ಷಯ್ ರಿಡ್ಲಾನ್ ಹೇಳಿದ್ದಾರೆ.
ಒಂದು ಸಾಕುಪ್ರಾಣಿ ಕಳೆದುಹೋದರೆ ಅಥವಾ ಅದನ್ನು ಸ್ಥಳಾಂತರಿಸಿದರೆ QR ಕೋಡ್ ಟ್ಯಾಗ್ ಅದನ್ನು ಕುಟುಂಬದೊಂದಿಗೆ ಮತ್ತೆ ಸೇರಿಸಲು ಸಹಾಯ ಮಾಡುತ್ತದೆ. ಇದು ನಗರದಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುವ ನಾಯಿಗಳ ಕೇಂದ್ರೀಕೃತ ಅಂಕಿಅಂಶವನ್ನು ನಿರ್ವಹಿಸಲು ಬೃಹತ್ ಮುಂಬೈ ಮಹಾನಗರ ಪಾಲಿಕೆಗೆ ಸಹಾಯ ಮಾಡಬಹುದು ಎಂದು ಅವರು ತಿಳಿಸಿದರು.
ಬೃಹತ್ ಮುಂಬೈ ಮಹಾನಗರ ಪಾಲಿಕೆಯ ಪಶುವೈದ್ಯಕೀಯ ಆರೋಗ್ಯ ಸೇವೆಗಳ ಮುಖ್ಯಸ್ಥ ಡಾ.ಕಲೀಂ ಪಠಾಣ್ ಮಾತನಾಡಿ, "ನಾಯಿಗಳಿಗೆ ಲಸಿಕೆ ನೀಡಲಾಗಿದ್ದು, ಮೂಲಭೂತ ಆರೋಗ್ಯ ತಪಾಸಣೆ ಮಾಡಲಾಗಿದೆ. ವಿಮಾನ ನಿಲ್ದಾಣದ ಹೊರಗೆ ನಾಯಿಗಳಿಗೆ ಕ್ಯೂಆರ್ ಕೋಡ್ ಟ್ಯಾಗ್ ಮಾಡುವಿಕೆಯು ಪ್ರಾಯೋಗಿಕ ಯೋಜನೆಯಾಗಿದೆ. ಇದನ್ನು ಹೇಗೆ ಮುಂದುವರಿಸಬಹುದು ಎಂಬುದನ್ನು ನಾವು ಭಾವಿಸುತ್ತೇವೆ ಎಂದು ಹೇಳಿದರು.
ಈ ಬಗ್ಗೆ ಮುಂಬೈ ವಿಮಾನ ನಿಲ್ದಾಣದ ವಕ್ತಾರರು ಪ್ರಯಾಣಿಕರು ಮತ್ತು ನಾಯಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಕಾರ್ಯಕ್ರಮ ಉಪಯುಕ್ತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications