ಶ್ರದ್ಧಾ ಹಂತಕನಿಗೆ ನಾರ್ಕೋ ಪರೀಕ್ಷೆ: ನ್ಯಾಯಾಲಯ ಒಪ್ಪಿಗೆ
ನವದೆಹಲಿ, ನವೆಂಬರ್ 17: ಶ್ರದ್ಧಾ ಹತ್ಯೆ ಪ್ರಕರಣದ ತನಿಖೆಗಾಗಿ ಆರೋಪಿ ಅಫ್ತಾಬ್ ಪೂನಾವಾಲಾ ಪೋಲಿಸ್ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಮುಂದಿನ 5 ದಿನಗಳವರೆಗೆ ವಿಸ್ತರಿಸಿದೆ. ನಂತರ ಪೊಲೀಸರು ಇದೀಗ ಆರೋಪಿ ಹಂತಕ ಅಫ್ತಾಬ್ನನ್ನು ಉತ್ತರಾಖಂಡ ಮತ್ತು ಹಿಮಾಚಲಕ್ಕೆ ಕರೆದೊಯ್ಯಲಿದ್ದಾರೆ.
ತನ್ನ ಲಿವ್-ಇನ್ನಲ್ಲಿ ಜೊತೆಯಾಗಿದ್ದ ಶ್ರದ್ಧಾ ಹತ್ಯೆ ಮಾಡಿದ ಅಫ್ತಾಬ್ ಪೂನಾವಾಲಾನ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಗುರುವಾರ ಮತ್ತೆ 5 ದಿನಗಳವರೆಗೆ ವಿಸ್ತರಿಸಿದೆ. ನಂತರ ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸುವುದು ಪೊಲೀಸರ ಮುಂದಿರುವ ದೊಡ್ಡ ಸವಾಲುವಿದೆ. ಹಾಗಾಗಿ ಶ್ರದ್ಧಾ ಹಂತಕನಿಗೆ ಶಿಕ್ಷೆಯಾಗಬಹುದು. ಇದುವರೆಗೂ ಪೊಲೀಸರು ಶ್ರದ್ಧಾ ಅವರ ಮೊಬೈಲ್ ಫೋನ್ನ್ನು ವಶಪಡಿಸಿಕೊಂಡಿಲ್ಲ ಎಂದು ಹೇಳಲಾಗುತ್ತಿದ್ದು, ಪೊಲೀಸರು ನಿರಂತರವಾಗಿ ಹುಡುಕಾಟ ನಡೆಸುತ್ತಿದ್ದಾರೆ. ಶ್ರದ್ಧಾ ಅವರ ಮೊಬೈಲ್ ಪತ್ತೆಯಾದ ಬಳಿಕ ಹಲವು ರಹಸ್ಯಗಳು ಬಯಲಾಗಬಹುದು.
ಮತ್ತೊಂದೆಡೆ, ಶ್ರದ್ಧಾ ಹತ್ಯೆಯ ಆರೋಪಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಆದರೆ, ಸಾಕ್ಷ್ಯಾಧಾರಗಳ ಬಗ್ಗೆ ವಿಚಾರಣೆ ನಡೆಸಿದಾಗ ನುಣುಚಿಕೊಳ್ಳುವ ಉತ್ತರ ನೀಡುತ್ತಿದ್ದಾರೆ. ಪ್ರಕರಣವನ್ನು ಗೊಂದಲಗೊಳಿಸಲು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಂತಕ ಅಫ್ತಾಬ್ನನ್ನು ಉತ್ತರಾಖಂಡ- ಹಿಮಾಚಲಕ್ಕೆ ಕರೆದೊಯ್ಯಲಿದ್ದಾರೆ
ಶ್ರದ್ಧಾ ಅವರ ಆರೋಪಿ ಹಂತಕ ಅಫ್ತಾಬ್ನನ್ನು ತನಿಖೆಗಾಗಿ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ ಕರೆದೊಯ್ಯಬೇಕಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ಶ್ರದ್ಧಾ ಹಂತಕನನ್ನು ಪೊಲೀಸರು ಉತ್ತರಾಖಂಡ ಮತ್ತು ಹಿಮಾಚಲಕ್ಕೆ ಏಕೆ ಕರೆದುಕೊಂಡು ಹೋಗುತ್ತಿದ್ದಾರೆ ಎಂಬುವುದು ಇನ್ನೂ ತಿಳಿದುಬಂದಿಲ್ಲ. ಉತ್ತರಾಖಂಡ ಮತ್ತು ಹಿಮಾಚಲದಲ್ಲಿ ಕೊಲೆಗೆ ಸಂಬಂಧಿಸಿದಂತೆ ಯಾವುದಾದರೂ ಗುಪ್ತ ರಹಸ್ಯಗಳಿವೆಯೇ? ಅಥವಾ ಕೊಲೆಯ ಮೊದಲು ಈ ಇಬ್ಬರೂ ಉತ್ತರಾಖಂಡ ಮತ್ತು ಹಿಮಾಚಲಕ್ಕೆ ಹೋಗಿದ್ದಾರೆ. ಅಲ್ಲಿ ಏನಾದರೂ ಸಂಭವಿಸಿದೆಯೇ? ಈ ಎಲ್ಲಾ ಪ್ರಶ್ನೆಗಳಿಗೆ ಪೊಲೀಸರು ಮಾತ್ರ ಉತ್ತರಿಸಬಲ್ಲರು. ಮುಂದಿನ ದಿನಗಳಲ್ಲಿ ಹಂತಕನನ್ನು ಪೊಲೀಸರು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ ಕರೆದುಕೊಂಡು ಹೋದಾಗ ಹಲವು ರಹಸ್ಯಗಳು ಬಯಲಿಗೆ ಬರಲಿವೆ.

ನಾರ್ಕೋ ಪರೀಕ್ಷೆಯಿಂದ ಶ್ರದ್ಧಾ ಕೊಲೆ ರಹಸ್ಯ ಬಯಲಾಗುತ್ತಾ?
ಆರೋಪಿ ಹಂತಕ ಅಫ್ತಾಬ್ನ ಕಸ್ಟಡಿ ಅವಧಿಯನ್ನು ವಿಸ್ತರಿಸುವುದರೊಂದಿಗೆ ನಾರ್ಕೋ ವಿಶ್ಲೇಷಣೆ ಪರೀಕ್ಷೆಗೆ ಅನುಮತಿ ಕೋರಿ ಪೊಲೀಸರ ಅರ್ಜಿಯನ್ನು ನ್ಯಾಯಾಲಯ ಅನುಮೋದಿಸಿದೆ. ನಂತರ ಪೊಲೀಸರು ನಾರ್ಕೋ ಪರೀಕ್ಷೆಗೆ ತಯಾರಿ ಆರಂಭಿಸಿದ್ದಾರೆ. ಆದರೆ, ಅಫ್ತಾಬ್ನ ನಾರ್ಕೋ ಪರೀಕ್ಷೆ ಯಾವಾಗ ನಡೆಯಲಿದೆ ಎಂದು ಪೊಲೀಸರು ಇನ್ನೂ ತಿಳಿಸಿಲ್ಲ. ಆರೋಪಿ ಹಂತಕ ಅಫ್ತಾಬ್ ನಾರ್ಕೋ ಪರೀಕ್ಷೆಯಲ್ಲಿ ಹಲವು ರಹಸ್ಯಗಳನ್ನು ಬಹಿರಂಗಪಡಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications