ದೇಶೀಯ ವಿಮಾನದಲ್ಲಿ ಸಂಚಾರ ನಡೆಸುವವರು ತಪ್ಪದೇ ಇದನ್ನು ಪಾಲಿಸಿ
ನವದೆಹಲಿ, ಮೇ 21: ದೇಶೀಯ ವಿಮಾನಗಳ ಹಾರಾಟ ಮೇ 25ರಿಂದ ಆರಂಭಗೊಳ್ಳಲಿದ್ದು, ನೀವು ಪಾಲಿಸಬೇಕಾದ ಕಟ್ಟುನಿಟ್ಟಿನ ಸೂಚನೆಗಳು ಇಲ್ಲಿವೆ.
ಸಾಮಾಜಿಕ ಅಂತರ ಕಯ್ದುಕೊಳ್ಳುವುದು, ಆರೋಗ್ಯ ಸೇತು ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್ ಮಾಡಿಸುವುದು ಕಡ್ಡಾಯ ಎಂದು ಏರ್ಪೋರ್ಟ್ಸ ಅಫಾರಿಟಿ ಆಫ್ ಇಂಡಿಯಾ ಘೋಷಣೆ ಮಾಡಿದೆ.
Recommended Video
ಬುಧವಾರವಷ್ಟೇ ಕೇಂದ್ರ ಸರ್ಕಾರವು ಮೇ 25 ರಿಂದ ಅಂದರೆ ಸೋಮವಾರದಿಂದ ದೇಶೀಯ ವಿಮಾನ ಹಾರಾಟ ಆರಂಭವಾಗಲಿವೆ ಶೀಘ್ರ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿತ್ತು.

ವಿಮಾನ ನಿಲ್ದಾಣಕ್ಕೆ ಬರುವ ಮುನ್ನವೇ ಥರ್ಮಲ್ ಸ್ಕ್ರೀನಿಂಗ್ ಮಾಡಿಸಬೇಕು.14 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ ಆರೋಗ್ಯ ಸೇತು ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳುವ ಅಗತ್ಯವಿಲ್ಲ.
ದೇಶದಲ್ಲಿ ಕೊರೊನಾವೈರಸ್ ಹಬ್ಬುತ್ತಿದ್ದಂತೆ ಮಾರ್ಚ್ ತಿಂಗಳಿನಲ್ಲಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಯಿತು. ಇದುವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ದಿನಾಂಕವನ್ನು ಅಂತಿಮಗೊಳಿಸಿಲ್ಲ.
ವಿಮಾನದಲ್ಲಿ ಪ್ರಯಾಣ ಮಾಡಬೇಕೆಂದರೆ ಈ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಿ
- ವಿಮಾನ ನಿಲ್ದಾಣಕ್ಕೆ ಬರುವಾಗ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿರುತ್ತದೆ.ಆರೋಗ್ಯ ಸೇತು ಅಪ್ಲಿಕೇಷನ್ ಕಡ್ಡಾಯವಾಗಿ ಡೌನ್ಲೋಡ್ ಮಾಡಿಕೊಂಡಿರಬೇಕು. 14 ವರ್ಷದ ಒಳಗಿನವರಿಗೆ ಕಡ್ಡಾಯವಿಲ್ಲ. ಒಂದೊಮ್ಮೆ ಥರ್ಮಲ್ ಸ್ಕ್ರೀನಿಂಗ್ ಮಾಡುವಾಗ ಹಸಿರು ತೋರಿಸಿದೇ ಇದ್ದಲ್ಲಿ, ಅಥವಾ ರೋಗ್ಯ ಸೇತು ಅಪ್ಲಿಕೇಷನ್ ನಿಮ್ಮ ಬಳಿ ಇಲ್ಲದಿದ್ದಲ್ಲಿ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ಇರುವುದಿಲ್ಲ.
-ವಿಮಾನ ಹೊರಡುವ 2 ಗಂಟೆಗಳ ಮೊದಲು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರು ಬರಬೇಕು.
-ನೀವು ಪ್ರಯಾಣಿಸುವ ವಿಮಾನ ಹೊರಡಲು ನಾಲ್ಕು ಗಂಟೆ ಇರುವಾಗ ಟರ್ಮಿನಲ್ ಬಿಲ್ಡಿಂಗ್ ಒಳಗೆ ಪ್ರವೇಶಕ್ಕೆ ಅವಕಾಶವಿರುತ್ತದೆ.
-ಪ್ರಯಾಣಿಕರಿಗಾಗಿ ಸರ್ಕಾರವು ಸಾರ್ವಜನಿಕ ಸಾರಿಗೆ, ಟ್ಯಾಕ್ಸಿ, ಏರ್ಲೈನ್ ಕ್ರ್ಯೂ ವ್ಯವಸ್ಥೆ ಮಾಡಬೇಕು.
-ಕೇವಲ ಸ್ವಂತ ವಾಹನಗಳು ಅಥವಾ ಕೆಲವೇ ಕ್ಯಾಬ್ಗಳಿಗೆ ಮಾತ್ರ ಅವಕಾಶವಿದೆ.
-ಪ್ರತಿಯೊಂದು ಪ್ರಯಾಣಿಕರು ಕೈಗವಸು, ಮಾಸ್ಕ್ ಧರಿಸಿರಲೇಬೇಕು.
-ಗೃಹ ಸಚಿವಾಲಯದ ನಿರ್ದೇಶನದಂತೆ ವಿಮಾನ ಸಿಬ್ಬಂದಿ ಬಳಿ ಸ್ಯಾನಿಟೈಸರ್, ಪಿಪಿಇ ಕಿಟ್ ಇರಲೇಬೇಕು.
-ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಹೊರ ಹೋಗುವ ಸಂದರ್ಭದಲ್ಲಿ ಟ್ರಾಲಿಗಳ ವ್ಯವಸ್ಥೆ ಇರುವುದಿಲ್ಲ.
-ಟರ್ಮಿನಲ್ನ ಎಲ್ಲಾ ಎಂಟ್ರಿ ಗೇಟ್ಗಳು ತೆರೆದಿರಬೇಕು.
-ಟರ್ಮಿನಲ್ ಬಿಲ್ಡಿಂಗ್ ಅಥವಾ ಲಾಂಜ್ಗಳಲ್ಲಿ ದಿನಪತ್ರಿಕೆ ಅಥವಾ ಮಾಸಪತ್ರಿಕೆಗಳಿರುವುದಿಲ್ಲ.
-ಒಂದೊಮ್ಮೆ ವಿಮಾನ ಸಿಬ್ಬಂದಿಗೆ ಜ್ವರ ಅಥವಾ ಕಫವಿದ್ದರೆ ಅವರಿಗೆ ವಿಮಾನ ನಿಲ್ದಾಣದೊಳಗೆ ಪ್ರವೇಶವಿರುವುದಿಲ್ಲ.
-ವಿಮಾನವು ಲ್ಯಾಂಡ್ ಆದ ಬಳಿಕ ತಂಡ ತಂಡವಾಗಿ ಪ್ರಯಾಣಿಕರನ್ನು ಕಳುಹಿಸಿಕೊಡಲಾಗುತ್ತದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications