ಅಮೀರ್ 'ಪಿಕೆ' ಚಿತ್ರಕ್ಕೆ ಐಎಸ್ಐ ಹಣ, ಸ್ವಾಮಿ ಟ್ವೀಟ್
ಮುಂಬೈ, ಡಿ.29: ಬಾಲಿವುಡ್ ನಟ ಅಮೀರ್ ಖಾನ್ ಅಭಿನಯದ 'ಪಿಕೆ' ಚಿತ್ರದಲ್ಲಿ ಹಿಂದೂ ದೇವರುಗಳು ಮತ್ತು ಧರ್ಮಗುರುಗಳನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ವಿವಿಧ ಚಿತ್ರಮಂದಿರಗಳ ಮೇಲೆ ದಾಳಿ ಮಾಡಿವೆ. ಇದರ ಬೆನ್ನಲ್ಲೇ ಈ ಚಿತ್ರಕ್ಕೆ ಪಾಕಿಸ್ತಾನದ ಐಎಸ್ಐ ಹಣ ತೊಡಗಿಸಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಅಹಮದಾಬಾದ್, ಮುಂಬೈ ಮತ್ತು ಭೋಪಾಲ್ ನಗರಗಳಲ್ಲಿ ಹಿಂದೂ ಸಂಘಟನೆಗಳ ಸದಸ್ಯರು ಚಿತ್ರ ಮಂದಿರಗಳಿಗೆ ನುಗ್ಗಿ ದಾಂಧಲೆ ಮಾಡಿ ಕಿಟಿಕಿ ಗಾಜುಗಳನ್ನು ಧ್ವಂಸಗೊಳಿಸಿದ್ದಾರೆ. ಚಿತ್ರಮಂದಿರಗಳು ಪ್ರದರ್ಶನವನ್ನು ರದ್ದುಪಡಿಸದೆ ಹೋದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ದಾಳಿಗಳನ್ನು ನಡೆಸುವುದಾಗಿ ಎಚ್ಚರಿಸಿದೆ.

'ಪಿಕೆ' ಚಿತ್ರವನ್ನು ಪ್ರದರ್ಶಿಸದಂತೆ ನಾವು ನೀಡಿದ್ದ ಸೂಚನೆಯನ್ನು ಧಿಕ್ಕರಿಸಿದ್ದಾರೆ ಎಂದು ಆಪಾದಿಸಿ ಈ ಹಿಂದೂ ಸಂಘಟನೆಗಳ ಸದಸ್ಯರು ಅಹಮದಾಬಾದಿನ ಸಿಟಿ ಗೋಲ್ಡ್ ಮಲ್ಟಿಪ್ಲೆಕ್ಸ್ ಮತ್ತು ಆಶ್ರಮ ರಸ್ತೆಯ ಶಿವ ಚಿತ್ರಮಂದಿರಗಳ ಮೇಲೆ ದಾಳಿ ನಡೆಸಿ ಕಿಟಕಿ ಗಾಜುಗಳನ್ನು ಧ್ವಂಸ ಮಾಡಿದ್ದಾರೆ.
PK marketing event in Dubai sponsored by a channel of Pakistan? Y? Etisalat Ethihad & now B'wood financing?@Swamy39 pic.twitter.com/KDjorG2Im3
— Aashish Shetty (@AShetty84) December 29, 2014 ಸ್ವಾಮಿ ಟ್ವೀಟ್ : ಪಿಕಿ ಚಿತ್ರಕ್ಕೆ ಯಾರು ಆರ್ಥಿಕ ನೆರವು ನೀಡಿದ್ದಾರೆ? ದುಬೈ ಹಾಗೂ ಐಎಸ್ ಐ ಹಾಗೂ ಡಿಆರ್ ಐ ನಿಂದ ಹಣ ತೊಡಗಿಸಲಾಗಿದೆ ಈ ಬಗ್ಗೆ ತನಿಖೆಯಾಗಲಿ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಅಮೀರ್ ಖಾನ್ ಅವರು ದುಬೈ ಮೂಲದ ಕಂಪನಿ ಚಿತ್ರದ ಮಾರ್ಕೆಟಿಂಗ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದನ್ನು ಉದಾಹರಿಸಲಾಗಿದೆ.
Who financed the PK film? According to my sources it is traceable to Dubai and ISI. DRI must investigate
— Subramanian Swamy (@Swamy39) December 29, 2014 ಆರ್ಥಿಕ ಅವ್ಯವಹಾರ ಬಗ್ಗೆ ದೂರು ಕೇಳಿ ಬಂದಿರುವುದರಿಂದ ಕಂದಾಯ ಇಲಾಖೆ ಗುಪ್ತಚರ ವಿಭಾಗ(ಡಿಆರ್ ಐ) ಈಗಾಗಲೇ ಅಬಕಾರಿ ಇಲಾಖೆ ನೆರವಿನಿಂದ ತನಿಖೆ ಆರಂಭಿಸಿದೆ. ನಿರ್ದೇಶಕ ರಾಜ್ ಕುಮಾರ್ ಹಿರಾನಿ ಹಾಗೂ ವಿಧು ವಿನೋದ್ ಚೋಪ್ರಾ ಅಲ್ಲದೆ ಅಮೀರ್ ಖಾನ್ ಕೂಡಾ ತನಿಖೆಗೆ ಒಳಪಡಬೇಕಾಗುತ್ತದೆ. ಡಿ.19ರಂದು ತೆರೆಕಂಡ ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications