ಎಎಪಿ : ಬಾಲಕೃಷ್ಣನ್, ರವಿಕೃಷ್ಣಾ ರೆಡ್ಡಿ ಕಣಕ್ಕೆ
ಬೆಂಗಳೂರು, ಮಾ.10: ಮುಂಬರುವ ಲೋಕಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ತನ್ನ ನಾಲ್ಕನೇ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. ತೆಹೆಲ್ಕಾ ಜರ್ನಲಿಸ್ಟ್ ಆಶೀಶ್ ಖೇತನ್, ಇನ್ಫೋಸಿಸ್ ನ ಮಾಜಿ ಸಿಎಫ್ ಒ ವಿ ಬಾಲಕೃಷ್ಣನ್ ಅವರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.
ದೆಹಲಿ ಲೋಕಸಭೆಯ ಆರು ಕ್ಷೇತ್ರಗಳಲ್ಲಿ ಪತ್ರಕರ್ತರು ಸ್ಪರ್ಧಿಸುತ್ತಿರುವುದು ವಿಶೇಷ. ಅದರಲ್ಲೂ ತೆಹೆಲ್ಕಾ, gulail.com ಖ್ಯಾತಿ ಪತ್ರಕರ್ತ ಆಶೀಶ್ ಖೇತನ್ ಗೆ ಟಿಕೆಟ್ ನೀಡಲಾಗಿದೆ. ಪಂಜಾಬಿ ಕಾಮೆಡಿಯನ್ ಭಗವಂತ್ ಮನ್ ಹೆಸರು ಹೊಸ ಪಟ್ಟಿಯಲ್ಲಿದೆ. ಒಟ್ಟಾರೆ 131 ಅಭ್ಯರ್ಥಿಗಳನ್ನು ಅರವಿಂದ್ ಕೇಜ್ರಿವಾಲ್ ಅವರ ಜನ ಸಾಮಾನ್ಯರ ಪಕ್ಷ ಘೋಷಿಸಿದೆ.

ಕರ್ನಾಟಕದಲ್ಲಿ ಕಣದಲ್ಲಿರುವ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು:
* ಬೆಂಗಳೂರು ಉತ್ತರ: ಪ್ರೊ. ಬಾಬು ಮ್ಯಾಥ್ಯೂ
* ಬೆಂಗಳೂರು ಕೇಂದ್ರ: ವಿ. ಬಾಲಕೃಷ್ಣನ್
* ಬೆಂಗಳೂರು ದಕ್ಷಿಣ: ನೀನಾ ಪಿ. ನಾಯಕ್
* ಬೆಂಗಳೂರು ಗ್ರಾಮಾಂತರ : ರವಿಕೃಷ್ಣಾ ರೆಡ್ಡಿ
* ಚಿಕ್ಕಬಳ್ಳಾಪುರ: ಕೆ. ಅರ್ಕೇಶ್
* ದಕ್ಷಿಣ ಕನ್ನಡ: ಎಂ.ಆರ್ ವಾಸುದೇವ
* ಗುಲ್ಬರ್ಗಾ(ಎಸ್ ಸಿ): ಡಾ. ಬಿ.ಟಿ ಲಲಿತಾ ನಾಯಕ್
* ಹುಬ್ಬಳ್ಳಿ-ಧಾರವಾಡ: ಹೇಮಂತ್ ಕುಮಾರ್
* ಬೀದರ್ : ಚಂದ್ರಕಾಂತ್ ಕುಲಕರ್ಣಿ
* ರಾಯಚೂರು: ಭೀಮರಾಯ
* ಕೋಲಾರ (ಎಸ್ ಸಿ) : ಕೋಟಿಗಾನಹಳ್ಳಿ ರಾಮಯ್ಯ
* ಶಿವಮೊಗ್ಗ : ಶ್ರೀಧರ್ ಕಲ್ಲಹಳ್ಳಿ
* ಚಿಕ್ಕೋಡಿ: ಅಶ್ಫಕ್ ಅಹಮದ್ ಮಡಿಕಿ
ಆಮ್ ಆದ್ಮಿ ಪಕ್ಷದ 61 ಅಭ್ಯರ್ಥಿಗಳ 4ನೇ ಪಟ್ಟಿ ವಿವರ ಇಲ್ಲಿದೆ
ವಿ ಬಾಲಕೃಷ್ಣನ್ : ಇನ್ಫೋಸಿಸ್ ತೊರೆದ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಜನ ಸಾಮಾನ್ಯರ ಪಕ್ಷ ಸೇರಿದ ಇನ್ಫೋಸಿಸ್ ನ ಮಾಜಿ ಸಿಎಫ್ ಒ ವಿ. ಬಾಲಕೃಷ್ಣನ್ ಅವರನ್ನು ಚುನಾವಣೆ ಕಣಕ್ಕಿಳಿಸಲು ಆಮ್ ಆದ್ಮಿ ಪಕ್ಷ ಚಿಂತನೆ ನಡೆಸಿತ್ತು. ಆದರೆ, ಚುನಾವಣೆ ಸ್ಪರ್ಧಿಸುವ ಬಗ್ಗೆ ಬಾಲಕೃಷ್ಣನ್ ಇನ್ನೂ ನಿರ್ಧಾರ ಕೈಗೊಂಡಿರಲಿಲ್ಲ. ಒಂದು ವೇಳೆ ಬಾಲ ಕಣಕ್ಕಿಳಿದರೆ ಇನ್ಫೋಸಿಸ್ ನ ಇಬ್ಬರು ಅತಿರಥ ಮಹಾರಥರು ಚುನಾವಣೆ ಕಣಕ್ಕೆ ಶೋಭೆ ತರುತ್ತಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದರು.
ಅಂದುಕೊಂಡಂತೆ ಬಾಲಕೃಷ್ಣನ್ ಅವರಿಗೆ ಬೆಂಗಳೂರಿನ ಕೇಂದ್ರ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ. 60 ರ ದಶಕದಲ್ಲಿ ಬಾಲಕೃಷ್ಣನ್ ಅವರ ತಂದೆಯವರು ತಮಿಳುನಾಡಿನ ವೆಲ್ಲೂರಿನಲ್ಲಿ ಡಿಎಂಕೆ ಪಕ್ಷದ ಮುಖಂಡರಾಗಿದ್ದರು. ಹೀಗಾಗಿ ಬಾಲಕೃಷ್ಣನ್ ಅವರಿಗೂ ರಾಜಕೀಯ ನಂಟು ಇದ್ದೇ ಇದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆದಿರುವ ಮತ್ತೊಬ್ಬ ಮಾಜಿ ಇನ್ಫೋಸಿಸ್ ಅಧಿಕಾರಿ ನಂದನ್ ನಿಲೇಕಣಿ ಅವರು ತಮ್ಮ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. [ಕಾಂಗ್ರೆಸ್ ಸೇರಿದ ನಂದನ್ ]
'ಐಐಟಿ ಪದವಿಧರರೊಬ್ಬರ ಅತ್ಯಂತ ಯಶಸ್ವಿ ಕಂಪನಿ ಎಂದರೆ ಆಮ್ ಆದ್ಮಿ ಪಕ್ಷ. ದೇಶದಲ್ಲಿ ನಡೆಯುತ್ತಿರುವ ಈ ಕ್ರಾಂತಿಯಲ್ಲಿ ಭಾಗವಹಿಸಲು ನಾನು ಬಯಸುತ್ತೇನೆ. ಕೇವಲ 10 ರೂ. ಕೊಟ್ಟು ನಾನು ಪಕ್ಷದ ಸದಸ್ಯನಾಗಿದ್ದೇನೆ. ಎಎಪಿ ಜನ ಸಾಮಾನ್ಯರ ಒಳಿತಿಗೆ ಸಾಕಷ್ಟು ಕೆಲಸಗಳನ್ನು ಮಾಡಲಿದೆ ಎಂಬ ವಿಶ್ವಾಸ ನನಗಿದೆ'' ಎಂದು ಅವರು ಎಎಪಿ ಪಕ್ಷ ಸೇರಿದಾಗ ಬಾಲಕೃಷ್ಣನ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications