CBI: ಕೇಜ್ರಿವಾಲ್ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ, ಕಾರಣ ತಿಳಿಯಿರಿ!
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಹೊಸ ಸಂಕಷ್ಟ ಎದುರಾಗಿದೆ. ಅತ್ತ ಲೋಕಸಭೆ ಚುನಾವಣೆಗೆ ಎಎಪಿ ಸಿದ್ಧತೆ ಆರಂಭಿಸಿರುವ ಸಂದರ್ಭದಲ್ಲೇ ದೊಡ್ಡ ಆಘಾತ ಸಿಕ್ಕಿದೆ. ಹೊಸ ಮನೆ ಕಟ್ಟಿಸಿದ್ದೇ ಕೇಜ್ರಿವಾಲ್ಗೆ ಕಂಟಕ ತಂದಿದ್ದು, ದೆಹಲಿ ಸಿಎಂ ಇದೀಗ ಸಿಬಿಐ ಬಲೆಗೆ ಸಿಲುಕಿದಂತಾಗಿದೆ. ಹಾಗಾದ್ರೆ ಕೇಜ್ರಿವಾಲ್ಗೆ ಎದುರಾಗಿರುವ ಸಂಕಷ್ಟವಾದ್ರು ಏನು? ಸಂಪೂರ್ಣ ಮಾಹಿತಿ ಇಲ್ಲಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ರ ಅಧಿಕೃತ ನಿವಾಸ ಕಟ್ಟಿಸುವಾಗ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅಧಿಕೃತ ನಿವಾಸ ನಿರ್ಮಾಣದ ಟೆಂಡರ್ ನಿಯಮಗಳ ಉಲ್ಲಂಘನೆ ಸೇರಿ ಹಲವಾರು ಆರೋಪಗಳ ಬಗ್ಗೆ ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ. ಈಗಾಗಲೇ ಯೋಜನೆ ಹೇಗೆ ಮಂಜೂರಾಗಿದೆ ಎಂಬುದರ ಕುರಿತು ಸಿಬಿಐ ಲೋಕೋಪಯೋಗಿ ಇಲಾಖೆಯಿಂದ (PWD) ದಾಖಲೆ ಕೇಳಿದೆ ಎನ್ನಲಾಗಿದೆ. ಈ ಬೆಳವಣಿಗೆ ಇದೀಗ ಆಮ್ ಆದ್ಮಿ ಪಕ್ಷ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ನಡುವೆ ಮತ್ತೊಂದು ಸುತ್ತಿನ ಫೈಟ್ಗೆ ಕಾರಣವಾಗಿದೆ.

ದಾಖಲೆ ಸಲ್ಲಿಸಲು ಸಿಬಿಐ ಡೆಡ್ಲೈನ್!
ಕೇಜ್ರಿವಾಲ್ ಅವರ ಅಧಿಕೃತ ನಿವಾಸ ನಿರ್ಮಾಣ ಯೋಜನೆ ಅನುಮೋದನೆಗೆ ಸಂಬಂಧಿಸಿದ ದಾಖಲೆ, ಮಾರ್ಬಲ್ ಫ್ಲೋರಿಂಗ್ ಹಾಗೂ ಗುತ್ತಿಗೆದಾರರ ಪಾವತಿ ವಿವರ ಕೇಳಲಾಗಿದೆಯಂತೆ. ಈ ಹಿನ್ನೆಲೆ ಎಲ್ಲಾ ದಾಖಲೆಗಳನ್ನ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಿಬಿಐಗೆ ಸಲ್ಲಿಸಬೇಕಿದೆ ಎಂದು ಸೂಚಿಸಲಾಗಿದೆ. ಹಾಗೇ ಕಟ್ಟಡಕ್ಕೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನೀಡಿದ ಅನುಮತಿಯ ದಾಖಲೆಗಳನ್ನು ಕೂಡ ಕೇಳಲಾಗಿದೆ. ಈ ಮೂಲಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧದ ಆರೋಪದ ಬಗ್ಗೆ ಸಿಬಿಐ ತನಿಖೆ ಆರಂಭಿಸಿದೆ.
ಬಿಜೆಪಿ ವಿರುದ್ಧ ಎಎಪಿ ಆಕ್ರೋಶ!
ಇನ್ನು ಕೇಜ್ರಿವಾಲ್ ಅವರ ಅಧಿಕೃತ ನಿವಾಸ ನಿರ್ಮಾಣ ಯೋಜನೆ ಸಂಬಂಧ ಸಿಬಿಐ ಈಗ ತನಿಖೆ ಆರಂಭಿಸಿದ ಬಗ್ಗೆ ಎಎಪಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ. ಎಎಪಿ ವಿರುದ್ಧ ಬಿಜೆಪಿ ತನ್ನೆಲ್ಲಾ ಶಕ್ತಿ ಬಳಸುತ್ತಿದೆ. ಈಗಾಗಲೇ ಅರವಿಂದ್ ಕೇಜ್ರಿವಾಲ್ ವಿರುದ್ಧ 50ಕ್ಕೂ ಹೆಚ್ಚು ಕೇಸ್ ದಾಖಲಿಸಿದೆ. ಅದರಿಂದ ಏನೂ ಆಗಿಲ್ಲ, ಮುಂದೆ ಏನೂ ಆಗಲ್ಲ. ಅದು ಎಷ್ಟೇ ತನಿಖೆಗಳು ನಡೆದರೂ ಕೇಜ್ರಿವಾಲ್ ಅವರ ಹೋರಾಟ ನಿಲ್ಲುವುದಿಲ್ಲ. ಸಾಮಾನ್ಯ ಜನರ ಪರ ಕೇಜ್ರಿವಾಲ್ ತಮ್ಮ ಹೋರಾಟ ಮುಂದುವರಿಸ್ತಾರೆ ಎಂದು ಆಪ್ ಸವಾಲು ಹಾಕಿದೆ.
ಹೀಗೆ ಬಿಜೆಪಿ ಮತ್ತು ಆಪ್ ಮಧ್ಯೆ ದೆಹಲಿಯಲ್ಲಿ ಹೊಸ ತಿಕ್ಕಾಟ ಆರಂಭವಾಗುವ ಸೂಚನೆ ಸಿಕ್ಕಿದೆ. ಅದರಲ್ಲೂ ಸಿಬಿಐ ತನಿಖೆ ಆರಂಭಿಸಿದ ಹಿನ್ನೆಲೆ ಆಮ್ ಆದ್ಮಿ ಪಕ್ಷ ರೊಚ್ಚಿಗೆದ್ದಿದೆ. ಈ ತಿಕ್ಕಾಟ ಮುಂದಿನ ದಿನಗಳಲ್ಲಿ ಮತ್ತಷ್ಟು ಜೋರಾಗುವ ಸಾಧ್ಯತೆಯೂ ಇದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಇದು ಯಾವೆಲ್ಲಾ ಪಕ್ಷಗಳಿಗೆ ಅಸ್ತ್ರವಾಗಿ ಬದಲಾಗುತ್ತೋ ಅಂತಾ ಕಾದು ನೋಡಬೇಕಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications