ಮಣಿಪುರ ಹಿಂಸಾಚಾರ: ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿದ ಎಎಪಿ

ನವದೆಹಲಿ, ಜುಲೈ. 24: ಮಣಿಪುರದಲ್ಲಿನ ಅನಿಶ್ಚಿತ ಪರಿಸ್ಥಿತಿಯ ವಿರುದ್ಧ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪಕ್ಷದ ಉನ್ನತ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮಣಿಪುರ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಹಲವು ವಿರೋಧ ಪಕ್ಷಗಳ ನಾಯಕರು ಸೋಮವಾರ ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 160 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

aap-announces-nationwide-protests

ಪರಿಶಿಷ್ಟ ಪಂಗಡ (ST) ಸ್ಥಾನಮಾನಕ್ಕಾಗಿ ಮೈತೀಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ "ಬುಡಕಟ್ಟು ಐಕಮತ್ಯ ಮಾರ್ಚ್" ಅನ್ನು ಆಯೋಜಿಸಲಾಗಿತ್ತು. ಇದಾದ ನಂತರ ರಾಜ್ಯದಲ್ಲಿ ಹಿಂಸಾಚಾರ ಆರಂಭವಾಗಿದೆ. ಕಳೆದ ವಾರ ಮೇ 4 ರಂದು ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ರಾಜ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಘರ್ಷಣೆ ಮಾಡುತ್ತಿರುವ ಎರಡು ಸಮುದಾಯಗಳಲ್ಲಿ ಒಂದು ಸಮುದಾಯದ ಇಬ್ಬರು ಮಹಿಳೆಯರನ್ನು ಇನ್ನೊಂದು ಸಮುದಾಯದ ಪುರುಷರ ಗುಂಪು ಬೆತ್ತಲೆ ಮೆರವಣಿಗೆ ಮಾಡಿದೆ. ಈ ವಿಎಇಯೋ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟಿರುವ ಮೈತೇಯಿ ಸಮುದಾಯ ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಶೇಕಡಾ 40 ರಷ್ಟಿದ್ದಾರೆ ಮತ್ತು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+