ದೆಹಲಿ ನಂತರ ಪಂಜಾಬ್ ಎಎಪಿ ಸರ್ಕಾರಕ್ಕೂ ಎದುರಾಯ್ತು ಸಂಕಷ್ಟ!
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲುತ್ತಿದ್ದಂತೆಯೇ ಆಮ್ ಆದ್ಮಿ ಪಾರ್ಟಿಗೆ ಪಂಜಾಬ್ನಲ್ಲೂ ಆತಂಕ ಎದುರಾಗಿದೆ. ಆಮ್ ಆದ್ಮಿ ಪಾರ್ಟಿಯ ಭದ್ರಕೋಟೆ ದೆಹಲಿಯಲ್ಲಿ ಎಎಪಿ ಸೋತಿದೆ. ಇದರ ಬೆನ್ನಲ್ಲೇ ಪಂಜಾಬ್ ಎಎಪಿಯಲ್ಲೂ ಬಿರುಕು ಮಾಡುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಎಎಪಿ ಹೀನಾಯ ಸೋಲು ಕಂಡಿದೆ. ಕಳೆದ ಎರಡು ಅವಧಿಯಿಂದಲೂ ಎಎಪಿ ದೆಹಲಿಯಲ್ಲಿ ಅಧಿಕಾರದಲ್ಲಿ ಇದೆ. ಇದೀಗ ಪಂಜಾಬ್ನಲ್ಲೂ ಬಿಕ್ಕಟ್ಟು ಎದುರಾಗಿದೆ ಎಂದು ಹೇಳಲಾಗುತ್ತಿದೆ. ಇದರ ವಿವರ ಇಲ್ಲಿದೆ.

ಎಎಪಿ ಈಗ ಆಡಳಿತದಲ್ಲಿರುವ ಏಕೈಕ ರಾಜ್ಯ ಎಂದರೆ ಅದು ಪಂಜಾಬ್. ದೆಹಲಿಯಲ್ಲಿ ಅಧಿಕಾರ ಹಿಡಿದ ಎಎಪಿ ನಿಧಾನವಾಗಿ ಪಂಜಾಬ್ನಲ್ಲೂ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿತ್ತು. ರೈತರ ಚಳುವಳಿ ಹಾಗೂ ದೆಹಲಿಯಲ್ಲಿ ಮೊದಲ ಅವಧಿಯಲ್ಲಿ ನೀಡಿದ್ದ ಉತ್ತಮ ಆಡಳಿತ ಎಎಪಿಯನ್ನು ಕೈಹಿಡಿದಿತ್ತು. ಆದರೆ ಇದೀಗ ಪಂಜಾಬ್ನಲ್ಲೂ ಎಎಪಿಗೆ ಸಂಕಷ್ಟ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪಂಜಾಬ್ನ ಸಚಿವರು ಮತ್ತು ಶಾಸಕರು ಸಹ ಇದ್ದರು.
ದೆಹಲಿಯಲ್ಲಿ ಕಳೆದ ಎರಡು ಅವಧಿಯಿಂದಲೂ ಎಎಪಿ ಸರ್ಕಾರ ಅಧಿಕಾರದಲ್ಲಿ ಇತ್ತು. ಆದರೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೂರನೇ ಬಾರಿ ಅಧಿಕಾರಕ್ಕೆ ಬರುವ ಎಎಪಿ ಕನಸು ಈಡೇರಿಲ್ಲ. ಈ ರೀತಿ ಇರುವಾಗಲೇ ಪಂಜಾಬ್ನಲ್ಲೂ ಎಎಪಿಗೆ ಸಂಕಷ್ಟ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಪಂಜಾಬ್ ಎಎಪಿ ಘಟಕದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಜೋರಾಗಿದೆ ಇದೇ ಕಾರಣಕ್ಕೆ ಸಭೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಪಂಜಾಬ್ನಲ್ಲೂ ಸಂಕಷ್ಟ: ದೆಹಲಿ ವಿಧಾನಸಭೆ ಚುನಾವಣೆಯ ಸೋಲು ಪಂಜಾಬ್ ಸರ್ಕಾರದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗುತ್ತಿದೆ. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ನಲ್ಲಿ ಎಎಪಿ ಅಮೋಘ ಗೆಲುವು ಸಾಧಿಸಿತ್ತು. ಆದರೆ ಈ ರಾಜ್ಯದಲ್ಲಿ 2027ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದು ಅತ್ಯಂತ ಸವಾಲಿನಿಂದ ಕೂಡಿರಲಿದೆ ಎಂದು ಹೇಳಲಾಗುತ್ತಿದೆ. ಚುನಾವಣೆಗೆ ಇನ್ನೂ ಸುದೀರ್ಘ 2 ವರ್ಷ ಇರುವಾಗಲೇ ಇಲ್ಲಿ ಬಿಕ್ಕಟ್ಟು ಹಾಗೂ ಭಿನ್ನಾಭಿಪ್ರಾಯ ಜೋರಾಗಿದೆ ಎಂದು ಹೇಳಲಾಗುತ್ತಿದೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರ ವಿರುದ್ಧ ಪಂಜಾಬ್ನ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಸಭೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.
ಆಮ್ ಆದ್ಮಿ ಪಾರ್ಟಿಯು ಅತ್ಯಂತ ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷವಾಗಿ ಬೆಳೆಯಿತು. ಪ್ರಾದೇಶಿಕ ಪಕ್ಷದಿಂದ ರಾಷ್ಟ್ರೀಯ ಪಕ್ಷವಾಗಿ ಬದಲಾಯಿತು. ದೆಹಲಿಯ ನಂತರ ಪಂಜಾಬ್ನಲ್ಲೂ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿತ್ತು. ಈ ಪಕ್ಷವನ್ನು ಭಾರತದ ಸ್ಟಾರ್ಟ್ ಅಪ್ ಪಾರ್ಟಿ ಅಂತಲೇ ಕರೆಯಲಾಗುತ್ತದೆ. ಆದರೆ, ಈಗ ಈ ರಾಜ್ಯದಲ್ಲೂ ಸರ್ಕಾರ ಬೀಳುವ ಆತಂಕ ಎದುರಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications