Arvind Kejriwal: ʼಅರವಿಂದ್ ಕೇಜ್ರಿವಾಲ್ ಮತ್ತೆ ಜೈಲು ಸೇರಲಿದ್ದಾರೆʼ
ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದೆ. ಇಂದು (ಫೆಬ್ರವರಿ 3) ದೆಹಲಿ ವಿಧಾನಸಭೆ ಚುನಾವಣೆ 2025ರ ಕೊನೆಯ ಹಂತದ ಚುನಾವಣೆ ಪ್ರಚಾರ ನಡೆಯುತ್ತಿದೆ. ಈ ರೀತಿ ಇರುವಾಗಲೇ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ಗೆ ನಡುಕ ಶುರುವಾಗಿದೆ.
ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ. ಹೌದು ಮದ್ಯ ನೀತಿ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ್ದರು. ಇದೀಗ ಅವರು ಜಾಮೀನಿನ ಮೇಲೆ ಹೊರಗಿದ್ದು. ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ರೀತಿ ಇರುವಾಗಲೇ ಅವರಿಗೆ ಮತ್ತೆ ಜೈಲು ಸೇರುವ ಆತಂಕ ಶುರುವಾಗಿದೆ. ಇದಕ್ಕೆ ಕಾರಣ ಬಿಜೆಪಿಯು ಅರವಿಂದ್ ಕೇಜ್ರಿವಾಲ್ಗೆ ಕೊಟ್ಟಿರುವ ಎಚ್ಚರಿಕೆ ಅದೇನು ಎನ್ನುವ ವಿವರ ಇಲ್ಲಿದೆ.

ದೆಹಲಿ ವಿಧಾನಸಭೆ ಚುನಾವಣೆ ರಂಗೇರಿದೆ. ದೆಹಲಿ ವಿಧಾನಸಭೆ ಚುನಾವಣೆಯು ಫೆಬ್ರವರಿ 5ಕ್ಕೆ ನಡೆಯಲಿದೆ. ಇಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಇದರ ಮ್ಯಾಜಿಕ್ ಸಂಖ್ಯೆ 36 ಆಗಿದೆ. ಈ ಬಾರಿ ಎಎಪಿ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಹೇಗಾದರೂ ಮಾಡಿ ಎಎಪಿಯನ್ನು ಕಟ್ಟಿಹಾಕಬೇಕು ಅಂತ ಬಿಜೆಪಿ ಪಣತೊಟ್ಟಿದೆ. ಇದೀಗ ದೆಹಲಿ ಮುಖ್ಯಮಂತ್ರಿ ಇರಬೇಕಾದ ಜಾಗ ತಿಹಾರ್ ಜೈಲು ಎಂದು ಬಿಜೆಪಿ ಹೇಳಿದೆ. ಅಷ್ಟೇ ಅಲ್ಲ ಅವರು ಇಷ್ಟರಲ್ಲೇ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎನ್ನುವ ಎಚ್ಚರಿಕೆಯನ್ನು ಸಹ ಕೊಡಲಾಗಿದೆ.
ಈ ಚುನಾವಣೆ ಪ್ರಾರಂಭವಾದ ಮೇಲೆ ದೆಹಲಿ - ಹರಿಯಾಣ ರಾಜ್ಯಗಳ ರಾಜಕೀಯ ನಾಯಕರ ನಡುವೆ ವಾಕ್ಸಮರ ಮುಂದುವರಿದಿದೆ. ಅದರಲ್ಲೂ ಯಮುನಾ ನದಿಯ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರು ಕೊಟ್ಟಿದ್ದ ಹೇಳಿಕೆ ಸಾಕಷ್ಟು ಟೀಕೆ ಹಾಗೂ ವಿರೋಧಕ್ಕೆ ಕಾರಣವಾಗಿತ್ತು. ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಜೈಲು ಸೇರಲಿದ್ದಾರೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಎಚ್ಚರಿಸಿದ್ದಾರೆ.
ಕೇಜ್ರಿವಾಲ್ ಭ್ರಷ್ಟಾಚಾರಿ ಹಾಗೂ ಅವರು ಜನಿಸಿದ ಜಾಗಕ್ಕೆ ಅವರು ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ಮುಂದುವರಿದು ಕೇಜ್ರಿವಾಲ್ ಅವರು ಇರಬೇಕಾದ ಜಾಗ ತಿಹಾರ್ ಜೈಲು ಎಂದು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು. ಈ ಪೋಸ್ಟ್ ಇದೀಗ ಸಾಕಷ್ಟು ವೈರಲ್ ಆಗಿದೆ. ಕೇಜ್ರಿವಾಲ್ ಅವರು ದೆಹಲಿ ಜನರಿಗೆ ಮೋಸ ಮಾಡಿದ್ದು, ಅವರು ಫೆಬ್ರವರಿ 5ರ ನಂತರ ತಿಹಾರ್ ಸೇರಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.
ಹರಿಯಾಣದಲ್ಲಿ ಯಮುನಾ ನದಿಗೆ ವಿಷ ಹಾಕಲಾಗುತ್ತಿದೆ ಎನ್ನುವ ವಿವಾದಾತ್ಮಕ ಹೇಳಿಕೆಯನ್ನು ಈಚೆಗೆ ಅರವಿಂದ್ ಕೇಜ್ರಿವಾಲ್ ಅವರು ಕೊಟ್ಟಿದ್ದರು. ಕೇಜ್ರಿವಾಲ್ ಅವರು ಸುಳ್ಳು ಹೇಳುತ್ತಿದ್ದಾರೆ. ಯಾಕೆಂದರೆ ಅವರು ಅಧಿಕಾರದಲ್ಲಿ ಇದ್ದಾಗ ನದಿಯನ್ನು ಸ್ವಚ್ಛವಾಗಿ ಇರಿಸಿಕೊಳ್ಳಲು ವಿಫಲರಾಗಿದ್ದಾರೆ. ಹೀಗಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ. ಅವರ ಸುಳ್ಳಿನ ಅಂಗಡಿ ಇಷ್ಟರಲ್ಲೇ ಮುಚ್ಚಲಿದೆ ಎಂದು ಅವರು ಹೇಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications