ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಎಎಪಿಯ ಆಶಿಷ್ ವಿರುದ್ಧ ಎಫ್ ಐಆರ್
ನವದೆಹಲಿ, ಜುಲೈ 06: ಪಂಜಾಬಿನ ಆಮ್ ಆದ್ಮಿ ಪಕ್ಷದ (ಆಪ್) ಮುಖಂಡ, ವಕ್ತಾರ ಅಶೀಷ್ ಖೇತನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿದ್ದಾರೆ.
ಅಮೃತಸರದಲ್ಲಿ ಇತ್ತೀಚೆಗೆ ಎಎಪಿ ಪಕ್ಷದ ಯುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಪ್ರಣಾಳಿಕೆಯನ್ನು ಸಿಖ್ಖರ ಪವಿತ್ರ ಗ್ರಂಥ ಗುರುಗ್ರಂಥ್ ಸಾಹಿಬ್ ಮತ್ತು ಹಿಂದೂಗಳ ಪವಿತ್ರ ಗ್ರಂಥ ಭಗದ್ಗೀತೆಗೆ ಹೋಲಿಸಿದ್ದರು. ಪ್ರಣಾಳಿಕೆಯಲ್ಲಿ ಸ್ವರ್ಣ ದೇಗುಲ ಮತ್ತು ಆಮ್ ಆದ್ಮಿ ಪಕ್ಷದ ಚುನಾವಣಾ ಲಾಂಛನ 'ಪೊರಕೆ'ಯ ಚಿತ್ರವನ್ನು ಬಳಸಲಾಗಿತ್ತು.

ಪ್ರಣಾಳಿಕೆಯ ವಿನ್ಯಾಸ ಹಾಗೂ ಖೇತನ್ ಹೇಳಿಕೆ ವಿರುದ್ಧ ಸಿಖ್ ಸಂಘಟನೆಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಪಂಜಾಬಿನ ಉಪ ಮುಖ್ಯಮಂತ್ರಿ ಗಳು ಕೂಡಾ ಇದನ್ನು 'ಧರ್ಮ ನಿಂದೆ'ಯ ಕೃತ್ಯ ಎಂದಿದ್ದರು.
"Apologies for inadvertently expressing some words, never intended to hurt anyone's sentiments" - .@AashishKhetan pic.twitter.com/qjhgDqx1fj
— AAP Punjab (@AAPPunjab2017) July 5, 2016
ಆದರೆ, ನಂತರ ಎಚ್ಚೆತ್ತುಕೊಂಡ ಖೇತನ್, ಪವಿತ್ರ ಗ್ರಂಥಗಳಿಗೆ ಅಗೌರವ ತೋರುವುದು ನನ್ನ ಉದ್ದೇಶವಾಗಿರಲಿಲ್ಲ. ಹೋಲಿಕೆ ಮಾಡಿದ್ದು ತಪ್ಪೆನಿಸಿದರೆ ಕ್ಷಮೆ ಬೇಡುತ್ತೇನೆ ಎಂದಿದ್ದರು.
ಆದರೆ, ಖೇತನ್ ಅವರ ಕ್ಷಮೆಯಾಚನೆಯಿಂದ ತೃಪ್ತರಾಗದ ಸಿಖ್ ವಿದ್ಯಾರ್ಥಿ ಒಕ್ಕೂಟವು ದೂರು ದಾಖಲಿಸಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹಾಜರಿದ್ದ ಈ ಸಮಾರಂಭದಲ್ಲಿ ಇಂಥ ಹೇಳಿಕೆ ನೀಡಿದ್ದು ಶೋಚನೀಯ ಎಂದು ವಿಪಕ್ಷಗಳು ತೀವ್ರವಾಗಿ ಟೀಕಿಸಿದ್ದವು.
-
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications