ಮನೀಶ್ ಸಿಸೋಡಿಯಾ ವಿಚಾರಣೆ: ಜೈಲಿನ ಬೀಗಗಳು ಮುರಿಯಲಿವೆ ಎಂದ ಕೇಜ್ರಿವಾಲ್
ನವದೆಹಲಿ: ಅಬಕಾರಿ ನೀತಿಯಲ್ಲಿ ದೆಹಲಿ ಸರ್ಕಾರ ಅಕ್ರಮ ನಡೆಸಿದೆ ಎಂಬ ಆರೋಪಗಳು ಕೇಳಿಬಂದಿವೆ. ಆ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಇಂದು ವಿಚಾರಣೆ ನಡೆಸುತ್ತಿದೆ.
ನನ್ನನ್ನು ಬಂಧಿಸಲು ಕೇಂದ್ರದ ಆದೇಶದಂತೆ ಸಿಬಿಐ ಹುನ್ನಾರ ನಡೆಸಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾನೆ. ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳೆಲ್ಲಾ ಸುಳ್ಳೆಂದು ಅವರು ತಿಳಿಸಿದ್ದಾರೆ.
ಸಿಬಿಐ ಕಚೇರಿಗೆ ತೆರಳುವ ಮುನ್ನ ದೆಹಲಿಯಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿ ಸ್ಥಳ ರಾಜಘಾಟ್ಗೆ ಸಿಸೋಡಿಯಾ ಭೇಟಿ ನೀಡಿದ್ದಾರೆ.

ಸಿಬಿಐ ವಿಚಾರಣೆ ಕುರಿತು ಟ್ವೀಟ್ ಮಾಡಿರುವ ಅವರು, 'ನಾನು ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳುವವನಿದ್ದೆ. ಈ ಸಮಯದಲ್ಲಿ ನನ್ನನ್ನು ಬಂಧಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕುತಂತ್ರ ನಡೆಸಿದೆ. ಗುಜರಾತ್ನಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಲಿದೆ. ನಾನು ಚುನಾವಣೆ ಪ್ರಚಾರಕ್ಕೆ ತೆರಳದಂತೆ ತಡೆಯಲು ಹೀಗೆ ಮಾಡಲಾಗಿದೆ' ಎಂದು ತಿಳಿಸಿದ್ದಾರೆ.
'ನಾನು ಜೈಲಿಗೆ ಹೋದರೂ ಗುಜರಾತ್ ಚುನಾವಣೆ ಪ್ರಚಾರ ನಿಲ್ಲುವುದಿಲ್ಲ. ಇವತ್ತು ಪ್ರತಿಯೊಬ್ಬ ಗುಜರಾತಿ ಎದ್ದು ನಿಂತಿದ್ದಾನೆ. ಉತ್ತಮ ಶಾಲೆಗಳು, ಉದ್ಯೋಗ, ವಿದ್ಯುತ್ಗಾಗಿ ಅಲ್ಲಿನ ಯುವಕರು ಪ್ರಚಾರ ಮಾಡುತ್ತಿದ್ದಾರೆ. ಈ ಬಾರಿಯ ಗುಜರಾತ್ ವಿಧಾನಸಭೆ ಚುನಾವಣೆ ಆಂದೋಲನವಾಗಲಿದೆ' ಎಂದು ಸಿಸೋಡಿಯಾ ಹೇಳಿದ್ದಾರೆ.
ಇದೇ ವೇಳೆ, ಸಿಸೋಡಿಯಾ ಪರ ಟ್ವಿಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, 'ಜೈಲಿನ ಬೀಗಗಳು ಮುರಿಯಲಿವೆ, ಮನೀಶ್ ಸಿಸೋಡಿಯಾ ಹೊರಬರಲಿದ್ದಾರೆ' ಎಂದು ತಿಳಿಸಿದ್ದಾರೆ.

ಸಿಬಿಐ ಕಚೇರಿ ಎದುರು ಪ್ರತಿಭಟನೆ: ಎಎಪಿ ನಾಯಕರ ಬಂಧನ
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿಚಾರಣೆ ನಡೆಸುತ್ತಿರುವ ಸಿಬಿಐ ಕಚೇರಿ ಮುಂದೆ ಆಮ್ ಆದ್ಮಿ ಪಕ್ಷದ ನಾಯಕರು ಸೋಮವಾರ ಪ್ರತಿಭಟನೆ ನಡೆಸಲು ಮುಂದಾದರು. ರಾಜ್ಯಸಭಾ ಸದಸ್ಯ ಹಾಗೂ ಎಎಪಿಯ ಪ್ರಮುಖ ನಾಯಕ ಸಂಜಯ್ ಸಿಂಗ್ ಸೇರಿದಂತೆ ಹಲವು ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು. ಸಿಬಿಐ ನಡೆಸುತ್ತಿರುವ ವಿಚಾರಣೆಯು ನಕಲಿಯಾಗಿದೆ. ಅಬಕಾರಿ ಹಗರಣ ನಡೆದೇ ಇಲ್ಲ. ಗುಜರಾತ್ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೆಲ್ಲವನ್ನು ಮಾಡುತ್ತಿದೆ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.
ಸಿಸೋಡಿಯಾಗೆ ಕ್ಲೀನ್ಚಿಟ್ ನೀಡಿದ್ದ ಸಿಬಿಐ:
ಕಳೆದ ತಿಂಗಳು ಮನೀಶ್ ಸಿಸೋಡಿಯಾ ನಿವಾಸಗಳಲ್ಲಿ ಶೋಧ ನಡೆಸಿದ್ದ ಸಿಬಿಐಗೆ ಯಾವುದೇ ದಾಖಲೆ ದೊರೆತಿರಲಿಲ್ಲ. ಸಿಸೋಡಿಯಾ ಹಾಗೂ ಅವರ ಪತ್ನಿ ಹೊಂದಿರುವ ಲಾಕರ್ಗಳಲ್ಲೂ ಸಿಬಿಐ ಶೋಧ ನಡೆಸಿತ್ತು. ಸಿಬಿಐ ಅಧಿಕಾರಿಗಳ ತಂಡ ಗಾಜಿಯಾಬಾದ್ನ ವಸುಂಧರಾದಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯಲ್ಲಿ ಪರಿಶೀಲನೆ ನಡೆಸಿ ಸಿಸೋಡಿಯಾಗೆ ಕ್ಲೀನ್ಚಿಟ್ ನೀಡಿತ್ತು.
ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಎಎಪಿ ಪೈಪೋಟಿ:
ಈ ವರ್ಷಾಂತ್ಯದಲ್ಲಿ ನಡೆಯುವ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಎಎಪಿ ಪೈಪೋಟಿ ನೀಡಲಿದೆ. ಆ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಎಪಿ ನಾಯಕರನ್ನು ಗುರಿಯಾಗಿಸಿದೆ ಎಂಬ ಮಾತುಗಳು ಕೇಳಿಬಂದಿವೆ. ಗುಜರಾತ್ನಲ್ಲಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ ಎಂದು ಎಎಪಿ ಹೇಳಿದೆ. ಗುಜರಾತ್ಗೆ ಹಲವು ಬಾರಿ ಭೇಟಿ ನೀಡಿರುವ ಅರವಿಂದ ಕೇಜ್ರಿವಾಲ್, ನಿರುದ್ಯೋಗ, ವಿದ್ಯುತ್, ಕುಡಿಯುವ ನೀರು ಪೂರೈಕೆ, ಬೆಲೆ ಏರಿಕೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಗುಜರಾತ್ನಲ್ಲಿ ನೆಲೆಕಂಡುಕೊಳ್ಳಲು ಎಎಪಿ ಯತ್ನ ನಡೆಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications