Delhi Election: ಚುನಾವಣೋತ್ತರ ಸಮೀಕ್ಷೆಗಳನ್ನು ತಿರಸ್ಕರಿಸಿದ ಆಮ್ ಆದ್ಮಿ ಪಕ್ಷ
ಬಹು ನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆಗೆ ಇಂದು (ಬುಧವಾರ) ಮತದಾನ ನಡೆದಿದೆ. ಮೂರನೇ ಬಾರಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದ್ದ ಆಮ್ ಆದ್ಮಿ ಪಕ್ಷಕ್ಕೆ ಚುನಾವಣೋತ್ತರ ಸಮೀಕ್ಷೆಗಳು ಆಘಾತ ನೀಡಿವೆ. ಈ ಬಾರಿ ದೆಹಲಿಯಲ್ಲಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿದೆ. ಎಎಪಿ ಚುನಾವಣೋತ್ತರ ಸಮೀಕ್ಷೆಗಳನ್ನು ತಿರಸ್ಕರಿಸಿದೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಮತದಾನ ಬುಧವಾರ ಸಂಜೆ ಮುಕ್ತಾಯವಾಗಿದೆ. ಹೆಚ್ಚಿನ ನಿರ್ಗಮನ ಸಮೀಕ್ಷೆಗಳು ಆಮ್ ಆದ್ಮಿ ಪಕ್ಷ ಹಿನ್ನಡೆ ಅನುಭವಿಸಲಿದ್ದು, ಬಿಜೆಪಿ ಬಹುಮತ ಪಡೆಯಲಿದೆ ಎಂದು ಹೇಳಿವೆ. ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷ, ಸಮೀಕ್ಷೆ ಮಾಡುವವರು ಎಎಪಿ ಕಾರ್ಯಕ್ಷಮತೆಯನ್ನು ಕಡಿಮೆ ಅಂದಾಜು ಮಾಡಿದ್ದಾರೆ ಎಂದು ಹೇಳಿದೆ.

ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿಯ ರಾಷ್ಟ್ರೀಯ ವಕ್ತಾರೆ ರೀನಾ ಗುಪ್ತಾ, ಸಮೀಕ್ಷೆಗಳು ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷದ ಸಾಮರ್ಥ್ಯವನ್ನು ಕಡುಮೆ ಅಂದಾಜು ಮಾಡಿವೆ. ಆದರೆ ನಿಜವಾದ ಫಲಿತಾಂಶ ಬಂದಾಗ ಈಗ ಕೊಟ್ಟಿರುವ ಅಂಕಿ ಅಂಶಗಳಿಗಿಂತ ಹೆಚ್ಚಿನ ಸೀಟುಗಳನ್ನು ಗಳಿಸುತ್ತದೆ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
ಹಳೆಯ ಸಮೀಕ್ಷೆಗಳ ಉದಾಹರಣೆ
ಈ ಮೊದಲು ಆದ 2013, 2015 ಅಥವಾ 2020ರ ಚುನಾವಣೆ ಸಂದರ್ಭದಲ್ಲಿ ಸಮೀಕ್ಷೆಗಳು ನೀಡಿರುವ ಅಂಕಿ ಅಂಶಗಳಲ್ಲಿ ಎಎಪಿ ಕಡಿಮೆ ಸ್ಥಾನಗಳನ್ನ ಪಡೆಯುತ್ತದೆ ಎಂದೇ ಭವಿಷ್ಯ ನುಡಿಯಲಾಗಿತ್ತು, ಆದರೆ ನಿಜವಾದ ಫಲಿತಾಂಶ ಘೋಷಣೆಯಾದಾಗ ಅವರು ಹೇಳಿದ್ದಕ್ಕೂ ಎಎಪಿ ಪಡೆದಿದ್ದ ಸೀಟುಗಳ ಸಂಖ್ಯೆಗೂ ಭಾರಿ ವ್ಯತ್ಯಾಸವಿತ್ತು ಎಂದು ಗುಪ್ತಾ ತಿಳಿಸಿದ್ದಾರೆ.
ದೆಹಲಿಯ ಜನ ಹೆಚ್ಚಿನ ಸಂಖ್ಯೆಯಲ್ಲಿ ಎಎಪಿಗೆ ಮತ ಹಾಕಿದ್ದಾರೆ. ಈ ಬಾರಿ ಕೂಡ ಎಎಪಿ ಭರ್ಜರಿ ಗೆಲುವು ಸಾಧಿಸಲಿದೆ. ಕೇಜ್ರಿವಾಲ್ ನಾಲ್ಕನೇ ಬಾರಿ ದೆಹಲಿ ಮುಖ್ಯಮಂತ್ರಯಾಗಲಿದ್ದಾರೆ ಎಂದು ಅವರು ಹೇಳಿದರು.
ಮ್ಯಾಟ್ರಿಜ್ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ನೇತೃತ್ವದ ಎನ್ಡಿಎ 35-40 ಸ್ಥಾನಗಳನ್ನು ಪಡೆಯಬಹುದು, ಎಎಪಿ 32 ರಿಂದ 37 ಸ್ಥಾನಗಳನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್ ಇಲ್ಲಿ ಲೆಕ್ಕಕ್ಕೇ ಇಲ್ಲ ಎನ್ನುವಂತ ಸ್ಥಿತಿಯಲ್ಲಿದೆ.
ಪೀಪಲ್ಸ್ ಪಲ್ಸ್ ಸಮೀಕ್ಷೆಯು ಎನ್ಡಿಎ 51 ರಿಂದ 60 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಮತ್ತು ಎಎಪಿ 10 ರಿಂದ 19 ಸ್ಥಾನಗಳನ್ನು ಪಡೆಯಬಹುದು ಎಂದು ಹೇಳಿದೆ. ಕಾಂಗ್ರೆಸ್ ಒಂದೂ ಸ್ಥಾನವನ್ನು ಗೆಲ್ಲುವುದಿಲ್ಲ ಎಂದು ತಿಳಿಸಿದೆ.
ಬಹುತೇಕ ಸಮೀಕ್ಷೆಗಳು ಬಿಜೆಪಿ ಪರವಾಗಿದ್ದು, ಎಎಪಿಗೆ ಹಿನ್ನಡೆಯಾಗಲಿದೆ ಎಂದು ಹೇಳಿವೆ. ಆದರೆ ಮತದಾರರ ಮನಸ್ಸಿನಲ್ಲಿ ಏನಿದೆ ಎನ್ನುವುದು ಫೆಬ್ರವರಿ 8ರಂದು ನಡೆಯಲಿರುವ ಮತ ಎಣಿಕೆಯಲ್ಲಿ ತಿಳಿಯಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications