ಕಾಶ್ಮೀರದಲ್ಲಿ ಗುಂಡೇಟು ತಿಂದ ಸೇನಾಧಿಕಾರಿಯ ಶವ ಪತ್ತೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾಧಿಕಾರಿ ಲೆಫ್ಟಿನೆಂಟ್ ಉಮರ್ ಫಯಾಜ್ ಶಂಕಿತ ಉಗ್ರರ ಗುಂಡೇಟು ತಿಂದು ಸಾವಿಗೀಡಾಗಿದ್ದಾರೆ. ಸೇನಾಧಿಕಾರಿಯ ಸಾವನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ಖಂಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ, ಮೇ 10: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುಂಡೇಟು ತಿಂದು ಸಾವಿಗೀಡಾದ ಸೇನಾಧಿಕಾರಿಯ ಮೃತದೇಹ ಪತ್ತೆಯಾಗಿದೆ. ಸಾವಿಗೀಡಾದ ಅಧಿಕಾರಿಯನ್ನು ಉಮರ್ ಫಯಾಜ್ ಎಂದು ಗುರುತಿಸಲಾಗಿದೆ.
ಶೋಪಿಯಾನ್ ಜಿಲ್ಲೆಯ ಹೆರ್ಮನ್ ಚೌಕ್ ಭಾಗದಲ್ಲಿ ಮೃತ ದೇಹ ಪತ್ತೆಯಾಗಿದೆ. ಕುಲ್ಗಾಮ್ ಮೂಲದವರಾದ ಹೆರ್ಮನ್ ಇತ್ತೀಚೆಗಷ್ಟೇ ಸೇನೆಗೆ ಸೇರಿದ್ದರು. ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರು ಕುಲ್ಗಾಮ್ ನಿಂದ ಹೊರಟಿದ್ದರು. ಈ ಸಂದರ್ಭದಲ್ಲಿ ಅವರ ಮೇಲೆ ದಾಳಿಯಾಗಿರಬಹುದು ಎಂದುಕೊಳ್ಳಲಾಗಿದೆ.

ಇಲ್ಲಿನ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರನ್ನು ಪತ್ತೆ ಹಚ್ಚಲು ಮಿಲಿಟರಿ ಅಧಿಕಾರಿಗಳು ದೊಡ್ಡ ಮಟ್ಟದ ಕಾರ್ಯಚರಣೆ ಆರಂಭಿಸಿದ್ದರು. ಈ ಭಾಗದಲ್ಲಿ 30-40 ಉಗ್ರರು ಈ ಭಾಗದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯ ಮೇರೆ ಸುಮಾರು 3,000 ಮಿಲಿಟರಿ ಅಧಿಕಾರಿಗಳು ಈ ಕಾರ್ಯಾಚರಣೆಗೆ ಇಳಿದಿದ್ದರು.
ಇದಾದ ಬೆನ್ನಿಗೆ ಈ ಘಟನೆ ನಡೆದಿದೆ. ಫಯಾಜ್ ರನ್ನು ಯಾರು ಕೊಂಡಿರಬಹುದು? ಯಾಕೆ ಕೊಂದಿರಬಹುದು ಎಂಬ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.
Abduction & murder of Lt. Ummer Fayaz by terrorists in Shopian is a dastardly act of cowardice. This young officer from J&K was a role model
— Arun Jaitley (@arunjaitley) May 10, 2017
"ಲೆಫ್ಟಿನೆಂಟ್ ಉಮರ್ ಫಯಾಜ್ ಮೇಲೆ ನಡೆದ ಉಗ್ರರ ದಾಳಿ ಹೇಡಿಗಳ ಕೃತ್ಯ. ಜಮ್ಮು ಮತ್ತು ಕಾಶ್ಮೀರದ ಯುವ ಅಧಿಕಾರಿ ಎಲ್ಲರಿಗೂ ಮಾದರಿಯಾಗಿದ್ದರು," ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಇದೇ ಭಾಗದಲ್ಲಿ ಕಳೆದ ವಾರ ಸೇನೆಯ ಗಸ್ತು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ಸೈನಿಕರು ಮತ್ತು ಓರ್ವ ನಾಗರೀಕರು ಸಾವನ್ನಪ್ಪಿದ್ದನ್ನೂ ಇಲ್ಲಿ ಸ್ಮರಿಸಬಹುದು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications