ರಾಜಸ್ತಾನದಲ್ಲಿ ಕಾಂಗ್ರೆಸ್ ಬಿಜೆಪಿ ನೇರ ಹಣಾಹಣಿ, ಯಾವ ಪಕ್ಷಕ್ಕೆ ಅಧಿಕಾರ: ಎಬಿಪಿ ಸಿವೋಟರ್ ಸಮೀಕ್ಷೆ ಬಹಿರಂಗ
ಜೈಪುರ, ಅಕ್ಟೋಬರ್ 09: ಈ ವರ್ಷದ ನವೆಂಬರ್ ತಿಂಗಳಿನಲ್ಲಿ ರಾಜಸ್ತಾನದ ವಿಧಾನಸಭಾ ಚುನಾವಣೆ ನಡೆಯಲಿದೆ. ಫಲಿತಾಂಶ ಡಿಸೆಂಬರ್ನಲ್ಲಿ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕಾರಿ ಹಿಡಿಯುವ ಪಕ್ಷ ಯಾವುದು ಎಂದು ಎಬಿಪಿ ಸಿವೋಟರ್ ಸಮೀಕ್ಷೆ ನಡೆಸಿದೆ. ಅದರ ಅಂಕಿ ಅಂಶ ವಿವರಗಳ ಬಿಡುಗಡೆಗೊಂಡಿದೆ.
ಎಬಿಪಿ ಸಿವೋಟರ್ ಸಮೀಕ್ಷೆ ಪ್ರಕಾರ ರಾಜಸ್ಥಾನದಲ್ಲಿ ಬಿಜೆಪಿ ಬಹುಮತದ ಗಡಿ ದಾಟಲಿದೆ ಎಂದು ಅಂದಾಜಿಸಲಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, 200 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 127 ರಿಂದ 137 ಸ್ಥಾನಗಳನ್ನು ಗೆಲ್ಲಲಿದೆ. ಸರ್ಕಾರ ರಚಿಸಲು ಪಕ್ಷವೊಂದಕ್ಕೆ ಬಹುಮತದ ಗುರುತು 101ಆಗಿದೆ.

ಕೇಸರಿ ಪಕ್ಷವು ಸುಮಾರು 46 ಶೇಕಡಾ ಮತಗಳನ್ನು ಪಡೆಯುವ ಸಾಧ್ಯತೆಯಿದೆ, ಇದು 2018 ರ ಚುನಾವಣೆಯಲ್ಲಿ ಪಡೆದ ಶೇಕಡಾ 38 ಕ್ಕಿಂತ ಹೆಚ್ಚಾಗಿದೆ. ಮತ್ತೊಂದೆಡೆ, ಕಾಂಗ್ರೆಸ್ 59 ರಿಂದ 69 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದ್ದು, ಶೇಕಡಾ 42 ರಷ್ಟು ಮತಗಳನ್ನು ಪಡೆಯುತ್ತದೆ ಎಂದು ಸಮೀಕ್ಷೆ ವಿವರಗಳನ್ನು ಬಹಿರಂಗ ಮಾಡಿದೆ.
ಪ್ರದೇಶವಾರು ರಾಜಸ್ಥಾನದ ಮಾರ್ವಾರ್ ಪ್ರದೇಶದಲ್ಲಿ ಒಟ್ಟು 61 ಸ್ಥಾನಗಳಲ್ಲಿ ಕಾಂಗ್ರೆಸ್- 15-19, ಬಿಜೆಪಿ- 39-43 ಮತ್ತು ಇತರೆ- 0-5 ಸ್ಥಾನಗಳು ಬರುತ್ತವೆ. ಇದೇ ಶೇಕಡವಾರು ನೋಡುವುದಾದರೆ ಕಾಂಗ್ರೆಸ್ಗೆ 42%, ಬಿಜೆಪಿಗೆ 47%, ಇತರೆ 11% ರಷ್ಟು ಮತಗಳು ಬರುತ್ತದೆ ಎಂದು ತಿಳಿಸಿದೆ. ಧುಂಧರ್ ಪ್ರದೇಶದಲ್ಲಿ ಒಟ್ಟು 58 ಸ್ಥಾನಗಳಲ್ಲಿ ಕಾಂಗ್ರೆಸ್ಗೆ 25-29, ಬಿಜೆಪಿಗೆ 29-33, ಇತರೆ- 0-2 ಸ್ಥಾನಗಳು ಬರುತ್ತದೆ. ಇದೇ ಶೇಕಾಡವಾರು ಕಾಂಗ್ರೆಸ್ - 46%
ಬಿಜೆಪಿ- 46%, ಇತರೆ- 8% ಮತಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಮೇವಾರ್ ಪ್ರದೇಶದಲ್ಲಿ ಒಟ್ಟು 43 ಸ್ಥಾನಗಳಲ್ಲಿ ಕಾಂಗ್ರೆಸ್- 3-7, ಬಿಜೆಪಿ- 35-39, ಇತರೆ- 0-2 ಸ್ಥಾನಗಳನ್ನು ಗೆಲ್ಲಲಿದೆ. ಇದೇ ಶೇಕಡವಾರು ಕಾಂಗ್ರೆಸ್ - 37%, ಬಿಜೆಪಿ- 51%, ಇತರೆ- 12% ರಷ್ಟು ಮತಗಳನ್ನು ಪಡೆಯಲಿದೆ ಎಂದು ತಿಳಿಸಿದೆ. ರಾಜಸ್ಥಾನದ ಶೇಖಾವತಿ ಪ್ರದೇಶದಲ್ಲಿ ಒಟ್ಟು 21 ಸ್ಥಾನಗಳಲ್ಲಿ ಕಾಂಗ್ರೆಸ್- 10-14, ಬಿಜೆಪಿ- 7-11, ಇತರೆ- 0-1 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಇದೇ ಶೇಕಡವಾರು ಕಾಂಗ್ರೆಸ್ - 45%, ಬಿಜೆಪಿ- 43%, ಇತರೆ- 12% ರಷ್ಟು ಮತಗಳನ್ನು ಪಡೆದುಕೊಳ್ಳಲಿದೆ ಎಂದು ಸಮೀಕ್ಷೆ ತಿಳಿಸಿದೆ.
ರಾಜಸ್ಥಾನದ ಹಡೋತಿ ಪ್ರದೇಶದಲ್ಲಿ ಒಟ್ಟು 17 ಸ್ಥಾನಗಳಲ್ಲಿ ಕಾಂಗ್ರೆಸ್-1-5, ಬಿಜೆಪಿ-12-16, ಇತರೆ -0-1 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ, ಇದು ಶೇಕಡವಾರು ಕಾಂಗ್ರೆಸ್ - 44%, ಬಿಜೆಪಿ- 53%, ಇತರೆ- 3% ರಷ್ಟು ಮತಗಳನ್ನು ಪಡೆಯಲಿದೆ ಎಂದು ತಿಳಿಸಿದೆ. ರಾಜಸ್ಥಾನದ ವಿಧಾನಸಭೆ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಹಣಾಹಣಿ ಏರ್ಪಡಲಿದೆ. ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಏರಲು ಯತ್ನಿಸುತ್ತಿದೆ. ಕರ್ನಾಟಕದಂತೆಯೇ ರಾಜಸ್ಥಾನದಲ್ಲಿಯೂ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಘೋಷಣೆಗಳನ್ನು ಮಾಡಿದೆ. ಇದು ರಾಜಸ್ಥಾನದಲ್ಲಿ ಎಷ್ಟರ ಮಟ್ಟಿಗೆ ಕೆಲಸ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನು ಕಾಂಗ್ರೆಸ್ ಎದುರಾಳಿಯಾಗಿರುವ ಬಿಜೆಪಿ ಹೈಕಮಾಂಡ್ ಹೊಸ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ನಿರತವಾಗಿದೆ. ಬಿಜೆಪಿ ರಾಜ್ಯ ಘಟಕದಲ್ಲಿರುವ ಬಂಡಾಯವನ್ನು ಶಮನಗೊಳಿಸುವುದು ಹೈಕಮಾಂಡ್ ಮುಂದಿರುವ ಸವಾಲಾಗಿದೆ. ಕಳೆದ ವಾರ ರಾಜಸ್ಥಾನ ಜೈಪುರದಲ್ಲಿ ಬೀಡುಬಿಟ್ಟಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಸ್ಥಳೀಯ ನಾಯಕರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications