ತೆಲಂಗಾಣದಲ್ಲಿ ಬಿಆರ್ಎಸ್- ಕಾಂಗ್ರೆಸ್, ಯಾವ ಪಕ್ಷಕ್ಕೆ ಅಧಿಕಾರ: ಎಬಿಪಿ ಸಿವೋಟರ್ ಸಮೀಕ್ಷೆ ಬಹಿರಂಗ
ಹೈದರಾಬಾದ್, ಅಕ್ಟೋಬರ್ 09: ಈ ಬಾರಿಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಆರ್ಎಸ್ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿಯಾಗಲಿದೆ. ಈ ಸಂಬಂಧ ಎಬಿಪಿ ಸಿವೋಟರ್ ಸಮೀಕ್ಷೆ ನಡೆಸಿದ್ದು, ಅದರ ವಿವರಗಳನ್ನು ಬಿಡುಗಡೆ ಮಾಡಲಾಗಿದೆ.
ತೆಲಂಗಾಣ ಸೇರಿದಂತೆ ಐದು ರಾಜ್ಯಗಳ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ತೆಲಂಗಾಣದಲ್ಲಿ ನವೆಂಬರ್ 30 ರಂದು ಮತ ಎಣಿಕೆ ಮಾಡಲಿದ್ದು, ಇತರ ನಾಲ್ಕು ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಮತ್ತು ಮಿಜೋರಾಂ ಜೊತೆಗೆ ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಸಿವೋಟರ್ ಅಭಿಪ್ರಾಯ ಸಂಗ್ರಹದ ಪ್ರಕಾರ, ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಮತ್ತು ಕಾಂಗ್ರೆಸ್ ನಡುವೆ ಇದು ಕಠಿಣ ಸ್ಪರ್ಧೆ ಇದೆ. ಈ ಪ್ರಕಾರ ಬಿಆರ್ಎಸ್ 43 ರಿಂದ 55 ಸ್ಥಾನಗಳನ್ನು ಗಳಿಸಬಹುದು, ಕಾಂಗ್ರೆಸ್ 48 ರಿಂದ 60 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ), ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರಚಾರದ ಹೊರತಾಗಿಯೂ, ಕೇವಲ 5 ರಿಂದ 11 ಸ್ಥಾನಗಳನ್ನು ಮಾತ್ರವೇ ಗೆಲ್ಲುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಈ ಬಾರಿಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸುಮಾರು 39% ಮತಗಳನ್ನು ಗಳಿಸಬಹುದು. ನಂತರ ಆಡಳಿತಾರೂಢ BRS 9.4% ಮತ ಕುಸಿತಗೊಂಡು 37% ರಷ್ಟು ಗಳಿಸಬಹುದು. ಬಿಜೆಪಿಯು 16% ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ಅದಕ್ಕೆ ಇದು 9.3% ಮತಗಳ ಹೆಚ್ಚಳವಾಗಿದೆ.
ತೆಲಂಗಾಣ ಪ್ರಾಥಮಿಕವಾಗಿ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದು ಭಾವಿಸಲಾಗಿದೆ. ಇಲ್ಲಿ ಆಡಳಿತಾರೂಢ ಬಿಆರ್ಎಸ್ ಮತ್ತೊಂದು ಅವಧಿಗೆ ಅಧಿಕಾರ ಹಿಡಿಯಲು ಮುಂದಾದರೆ ಕಾಂಗ್ರೆಸ್ ಸಿಎಂ ಕೆ ಚಂದ್ರಶೇಖರ ರಾವ್ ಅವರಿಂದ ಅಧಿಕಾರ ಕಸಿಯಲು ಮುಂದಾಗಿದೆ. 2018 ರಲ್ಲಿ ನಡೆದ ಚುನಾವಣೆಯಲ್ಲಿ ಬಿಆರ್ಎಸ್ (ಅಂದಿನ ಟಿಆರ್ಎಸ್-ತೆಲಂಗಾಣ ರಾಷ್ಟ್ರ ಸಮಿತಿ) 119 ಸ್ಥಾನಗಳಲ್ಲಿ 88 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ 19 ಸ್ಥಾನಗಳೊಂದಿಗೆ ದೂರದಲ್ಲಿ ಎರಡನೇ ಸ್ಥಾನದಲ್ಲಿತ್ತು. 117 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಕೇವಲ ಒಂದನ್ನು ಮಾತ್ರ ಗೆದ್ದಿತ್ತು.

ಲೋಕಸಭಾ ಚುನಾವಣೆಗೆ ಸೆಮಿ ಫೈನಲ್ಸ್ ಎಂದೇ ಬಿಂಬಿತವಾಗಿರುವ 5 ರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಈ ಬಾರಿ ಕಾಂಗ್ರೆಸ್ ಹೊಸ ಉತ್ಸಾಹದೊಂದಿಗೆ ಎಲ್ಲ ಐದು ರಾಜ್ಯಗಳನ್ನು ಅಧಿಕಾರ ಪಡೆಯುವ ಉಮೇದಿನಲ್ಲಿದೆ. ಇದೇ ನವೆಂಬರ್ ತಿಂಗಳಲ್ಲಿ ತೆಲಂಗಾಣ, ಮಧ್ಯಪ್ರದೇಶ, ಮಿಜೋರಾಂ, ಛತ್ತಿಸ್ಗಡ ಹಾಗೂ ರಾಜಸ್ತಾನ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಡಿಸೆಂಬರ್ 3 ರಂದು ಈ ಎಲ್ಲ ರಾಜ್ಯಗಳ ಚುನಾವಣಾ ಫಲಿತಾಂಶಗಳು ಹೊರಬೀಳಲಿವೆ.
2024 ರ ಲೋಕಸಭಾ ಚುನಾವಣೆಯ ಸ್ಪರ್ಧೆಗೆ ವಿಧಾನಸಭಾ ಚುನಾವಣೆಗಳು ಬದಲಾವಣೆಯಾಗಬಹುದು ಎಂದು ಅರ್ಥಮಾಡಿಕೊಂಡ ಕಾಂಗ್ರೆಸ್, ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ನೆಲದಲ್ಲಿ ಪ್ರಬಲ ಅಸ್ತ್ರಗಳನ್ನು ಪ್ರಯೋಗಿಸಿದೆ. ಕರ್ನಾಟಕ ಚುನಾವಣೆಯಲ್ಲಿ ನೀಡಲಾದ ಗ್ಯಾರಂಟಿಗಳು ಮತ್ತು ಜಾತಿ ಗಣತಿಯ ಭರವಸೆಯೊಂದಿಗೆ ತನ್ನ ಕಾರ್ಯತಂತ್ರವನ್ನು ಕಾಂಗ್ರೆಸ್ ಬಲಪಡಿಸುತ್ತಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications