ಎಬಿಪಿ ನ್ಯೂಸ್ ಸಮೀಕ್ಷೆ : ಬಿಹಾರದಲ್ಲಿ ಎನ್ಡಿಎ ಜಯಭೇರಿ
ನವದೆಹಲಿ, ಮೇ 24 : ಈ ಕ್ಷಣ ಬಿಹಾರದಲ್ಲಿ ಚುನಾವಣೆ ನಡೆದರೆ ನಿತಿಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟ ಅದ್ಭುತ ಸಾಧನೆ ತೋರಲಿದೆ ಎಂದು ಎಬಿಪಿ ನ್ಯೂಸ್ ಮತ್ತು ಸಿಎಸ್ಡಿಎಸ್ ಜಂಟಿಯಾಗಿ ನಡೆಸಿರುವ ಸಮೀಕ್ಷೆ ಹೇಳಿದೆ.
ಎನ್ಡಿಎ ಸರಕಾರವನ್ನು ಬೆಂಬಲಿಸುತ್ತಿರುವ ಜೆಡಿಯು ನಾಯಕ ನಿತಿಶ್ ಕುಮಾರ್ ನೇತೃತ್ವದಲ್ಲಿ ಜೆಡಿಯು-ಬಿಜೆಪಿ ಕಳೆದ ಚುನಾವಣೆಗಿಂತ ಉತ್ತಮ ಸಾಧನೆ ತೋರಲಿದ್ದು, ಶೇ.60ರಷ್ಟು ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲಿವೆ. 2014ರ ಚುನಾವಣೆಯಲ್ಲಿ ಶೇ.51ರಷ್ಟು ಮತಗಳನ್ನು ಎನ್ಡಿಎ ಪಡೆದಿತ್ತು.
ಈ ಬಾರಿ, ಕಾಂಗ್ರೆಸ್ ಮುಂದಾಳತ್ವದ ಯುಪಿಎ ತನ್ನ ಮತಗಳಿಕೆಯನ್ನು ಅಲ್ಪಪ್ರಮಾಣದಲ್ಲಿ ಹೆಚ್ಚಿಸಿಕೊಳ್ಳಲಿದ್ದು, ಶೇ.34ರಷ್ಟು ಮತಗಳನ್ನು ಪಡೆಯಲಿದೆ. ಕಳೆದ ಚುನಾವಣೆಯಲ್ಲಿ ಕೇವಲ ಶೇ.28ರಷ್ಟು ಮಾತ್ರ ಮತಗಳನ್ನು ಯುಪಿಎ ಪಡೆದಿತ್ತು.

ಲೋಕಸಭೆ ಚುನಾವಣೆ ಲಾಲೂ ಪ್ರಸಾದ್ ಯಾದವ್ ಅವರಿಗೆ ಭಾರೀ ಹೊಡೆತ ನೀಡಲಿದೆ. ಮೇವು ಹಗರಣದಲ್ಲಿ ಕೋಟ್ಯಂತರ ನುಂಗಿದ್ದಕ್ಕಾಗಿ ಜೈಲು ಸೇರಿರುವ ಅವರ ಪಕ್ಷ ಬಿಜೆಡಿ ಕೇವಲ ಶೇ.5ರಷ್ಟು ಮಾತ್ರ ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲಿದೆ.
#देशकामूड - ABP News-CSDS Survey - The BJP continues to perform extremely well in Bihar (along with the JDU). Vote share percentage below. https://t.co/JQJlKZeiOk pic.twitter.com/mQe0j9CH1b
— ABP News (@abpnewstv) May 24, 2018
ನರೇಂದ್ರ ಮೋದಿ ಸರಕಾರ 4 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ವಿಭಿನ್ನ ರಾಜ್ಯಗಳಲ್ಲಿ ಯಾವ ಪಕ್ಷದ ಪರ ಗಾಳಿ ಬೀಸಿದೆ ಎಂಬುದನ್ನು ತಿಳಿಯುವ ಉದ್ದೇಶದಿಂದ ಈ ಸಮೀಕ್ಷೆಯನ್ನು ಮಾಡಲಾಗಿದೆ.
ಇತರ ರಾಜ್ಯಗಳಲ್ಲಿ ಕೂಡ ಭಾರತೀಯ ಜನತಾ ಪಕ್ಷಕ್ಕೆ ಕಾಂಗ್ರೆಸ್ ಭಾರೀ ಪೈಪೋಟಿ ನೀಡಲಿದೆ. ಮಧ್ಯಪ್ರದೇಶ ಮತ್ತು ರಾಜಸ್ತಾನದಲ್ಲಿ ಹೆಚ್ಚು ಸ್ಥಾನ ಗಳಿಸಲು ಬಿಜೆಪಿ ಏದುಸಿರು ಬಿಡಬೇಕಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications