ಎಬಿಪಿ ನ್ಯೂಸ್ ಸಮೀಕ್ಷೆ : ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಹೊಡೆತ
ನವದೆಹಲಿ, ಮೇ 24 : ಪ್ರಧಾನಿ ನರೇಂದ್ರ ಮೋದಿ ಮುಖಂಡತ್ವದ ಎನ್ಡಿಎ ಸರಕಾರ 4 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ದೇಶದ ಮೂಡ್ ಎತ್ತ ಸಾಗಿದೆ, ಯಾವ ಪಕ್ಷದ ಅಲೆ ಜೋರಾಗಿದೆ ಎಂಬುದನ್ನು ತಿಳಿಯಲು ಎಬಿಪಿ ನ್ಯೂಸ್ ಮತ್ತು ಸಿಎಸ್ಡಿಎಸ್ ಸಂಸ್ಥೆಯ ಜಂಟಿಯಾಗಿ ಸಮೀಕ್ಷೆ ನಡೆಸುತ್ತಿದೆ.
ಸದ್ಯಕ್ಕೆ ಬಿಜಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿ, ಹಲವಾರು ಭಿನ್ನಾಭಿಪ್ರಾಯಗಳಿದ್ದರೂ ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ಮೈತ್ರಿಕೂಟ ಈಗಲೂ ಮುನ್ನಗ್ಗಲಿದೆ. ಆದರೆ, ತನ್ನ ಮತಸಂಖ್ಯೆಯನ್ನು ಗಣನೀಯವಾಗಿ ಏರಿಸಿಕೊಂಡಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಭಾರೀ ಟಕ್ಕರ್ ನೀಡಲಿದೆ.
2014ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಎನ್ಡಿಎ ಮಹಾರಾಷ್ಟ್ರದಲ್ಲಿ ಶೇ.51ರಷ್ಟು ಮತ ಗಳಿಸಿದ್ದರೆ, ಇದೀಗ ಅದರ ಮತಗಳಿಕೆ ಶೇಕಡಾ 3ರಷ್ಟು ಕಡಿಮೆಯಾಗಲಿದೆ. ಆದರೆ, ಕಳೆದ ಬಾರಿ ಶೇ.35ರಷ್ಟು ಮಾತ್ರ ಮತ ಪಡೆದಿದ್ದ ಯುಪಿಎ ಈಬಾರಿ ಶೇ.40ರಷ್ಟು ಮತ ಪಡೆದು ಬಿಜೆಪಿ ಮತ್ತು ಶಿವಸೇನೆಗೆ ಬೆವರಿಳಿಸಲಿದೆ.

ಇದು ಒಂದು ರೀತಿ ಎನ್ಡಿಎಗೆ ಭಾರೀ ಹೊಡೆತ. ಒಂದು ವೇಳೆ ಶಿವಸೇನೆಯೊಡನೆ ಸೇರಿ ಬಿಜೆಪಿ ಹೋರಾಟ ನಡೆಸಿದರೆ ಬಿಜೆಪಿಗೆ ಹೆಚ್ಚು ಲಾಭದಾಯಕವಾಗಲಿದೆ. ಆದರೆ, ಬಿಜೆಪಿಯೊಡನೆ ಸೇರಿ ಶಿವಸೇನೆ ಚುನಾವಣೆಯಲ್ಲಿ ಧುಮುಕಿದರೆ ಶಿವಸೇನೆಗೆ ಶೇ.5ರಷ್ಟು ಮತಗಳಿಕೆ ಕಡಿಮೆಯಾಗಲಿದೆ ಎನ್ನುತ್ತದೆ ಸಮೀಕ್ಷೆ.
ಹಾಗೆ ನೋಡಿದರೆ, ಬಿಜೆಪಿ ಮತ್ತು ಶಿವಸೇನೆ ಒಗ್ಗೂಡಿ, ತಮ್ಮ ಭಿನ್ನಾಭಿಪ್ರಾಯಗಳನ್ನು ತೊಡೆದುಹಾಕಿ ಹೋರಾಟ ನಡೆಸದಿದ್ದರೆ ಭಾರೀ ನಷ್ಟ ಅನುಭವಿಸಬೇಕಾಗುತ್ತದೆ. ತಮ್ಮನ್ನು ಬಳಸಿಕೊಂಡು ಬಿಸಾಕುವುದೇ ಬಿಜೆಪಿಯ ನೀತಿ ಎಂದು ಶಿವಸೇನೆಯ ನಾಯಕರು ಬಿಜೆಪಿಯನ್ನು ದೂರುತ್ತಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications